ಮಂಗಳೂರು: ಕೋಮುವಾದಿ ಶಕ್ತಿಗಳನ್ನು ಬೆಳೆಯಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಸ್ಪೆಷಲ್ ಟಾಸ್ಕ್ ಫೋರ್ಸ್ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.
ಮಂಗಳೂರಿನ ಅತ್ತಾವರದಲ್ಲಿ ಮಂಗಳೂರು ನಗರ ಪೊಲೀಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ನೂತನ ಪೊಲೀಸ್ ವಸತಿ ಗೃಹ ಸಮುಚ್ಛಯಗಳು ಹಾಗೂ ಸುಬ್ರಹ್ಮಣ್ಯ ಮತ್ತು ಬಂಟ್ವಾಳ ಪೊಲೀಸ್ ಠಾಣೆಗಳ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪೊಲೀಸ್ ಇಲಾಖೆಯಲ್ಲಿ ಬಹಳ ಸವಾಲುಗಳಿವೆ. ಸಮಾಜಕ್ಕೆ ಅತ್ಯಂತ ಅಪಾಯಕಾರಿ ಕೋಮುವಾದಿ ಶಕ್ತಿಗಳನ್ನು ಬೆಳೆಯಲು ಬಿಡಬಾರದು. ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು.
ಪಕ್ಷವು ಚುನಾವಣಾ ಪ್ರಣಾಳಿಕೆಯನ್ನು ಬರೆಯುವ ಜವಾಬ್ದಾರಿಯನ್ನು ನನಗೆ ವಹಿಸಿದ್ದರು. ಪ್ರತಿ ಜಿಲ್ಲೆಗೆ ಭೇಟಿ ನೀಡಿದ್ದೇನೆ. ಮಂಗಳೂರಿಗೆ ಆಗಮಿಸಿದ್ದಾಗ ವಿದ್ಯಾರ್ಥಿಗಳು, ಸಾರ್ವಜನಿಕರು ಭೇಟಿ ಮಾಡಿದ್ದರು. ಮಕ್ಕಳನ್ನು ಓದಿಸಲು ಬೇರೆ ಕಡೆ ಕಳುಹಿಸುವ ಪರಿಸ್ಥಿತಿ ಬಂದಿದೆ. ಉದ್ಯಮಗಳಿಗೆ ಹೂಡಿಕೆ ಮಾಡಲು ಬರುತ್ತಿಲ್ಲ ಎಂಬುದು ಗಮನಕ್ಕೆ ತಂದರು. ಕೋಮುವಾದಿಗಳನ್ನು ಹತ್ತಿಕ್ಕಲು ಕೆಲಸ ಮಾಡದೇ ಇದ್ದರೆ ಕಷ್ಟವಾಗುತ್ತದೆ ಎಂಬುದನ್ನು ಅರಿತು ಸ್ಪೇಷಲ್ ಟಾಸ್ಕ್ ಫೋರ್ಸ್ ರಚಿಸಲಾಯಿತು ಎಂದು ತಿಳಿಸಿದರು.
ಇಲ್ಲಿನ ಜನರು ಶಾಂತಿಯಿಂದ ಬಾಳುವಂತೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಶಾಂತಿಯ ತೋಟವಾಗಬೇಕು. ಈ ನಿಟ್ಟಿನಲ್ಲಿ ಪೊಲೀಸರು ಮತ್ತಷ್ಟು ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಸಬೇಕು ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx