ಇಂದು ಕಾಂಗ್ರೆಸ್ ಮುಖಂಡರಾದ ಶಶಿಧರ್ ಟೂಡಾ ಅವರು ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ತಿಪಟೂರು ತಾಲ್ಲೂಕಿನ ಹಾಲ್ಕುರಿಕೆ ಮತ್ತು ಕೆ.ಬಿ. ಕ್ರಾಸ್ ನ ನೂತನ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದರು.
ಈ ವೇಳೆ ಆರೋಗ್ಯ ಸಖಿಯರು, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರೆಲ್ಲರೂ ಸೇರಿ ಶಶಿಧರ್ ಅವರ ಹುಟ್ಟುಹಬ್ಬವನ್ನು ನಮ್ಮ ಆರೋಗ್ಯ ಕೇಂದ್ರದಲ್ಲಿ ವಿಶೇಷವಾಗಿ ಮತ್ತು ಸರಳವಾಗಿ ಆಚರಿಸಿದರು.
ತಿಪಟೂರು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ನಮ್ಮ ಆರೋಗ್ಯ ಕೇಂದ್ರ ಮತ್ತು ಉದ್ಯೋಗ ಕೌಶಲ್ಯ ತರಬೇತಿ ಕೇಂದ್ರಗಳಂತಹ ಮಹಿಳೆಯರನ್ನು ಒಳಗೊಳ್ಳುವ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳು ಮುಂಬರುವ ದಿನಗಳಲ್ಲಿ ಮತ್ತಷ್ಟು ಬರಲಿ ಎಂದು ತಿಪಟೂರಿನ ಜನತೆ ನಿರೀಕ್ಷಿಸುತ್ತಿದ್ದಾರೆ ಎಂದು ಅವರು ಇದೇ ವೇಳೆ ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಪ್ರಮುಖ ಮುಖಂಡರು, ಆರೋಗ್ಯ ಕೇಂದ್ರದ ಆರೋಗ್ಯ ಸಖಿಯರಾದ ಗೀತಾ, ಸಹನ, ಶ್ರೀ ಲಕ್ಷ್ಮಿ, ಉಮಾದೇವಿ, ಮಂಜುಳಾ, ಪ್ರಿಯ, ನಿವೇದಿತಾ, ರೂಪ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1