nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್

    April 14, 2026
    Facebook Twitter Instagram
    ಟ್ರೆಂಡಿಂಗ್
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು
    • ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ.ಜಾತಿಗಳ ಸಮಗ್ರ ಸಮೀಕ್ಷೆ: ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ
    ತುಮಕೂರು May 8, 2025

    ಪ.ಜಾತಿಗಳ ಸಮಗ್ರ ಸಮೀಕ್ಷೆ: ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ

    By adminMay 8, 2025No Comments2 Mins Read
    jati samikshe

    ತುಮಕೂರು: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಲು ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಜಿಲ್ಲೆಯಲ್ಲಿ ಮೇ 5 ರಿಂದ 17ರವರೆಗೆ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷಾ ಕಾರ್ಯದಲ್ಲಿ ಪ್ರತೀ ಮನೆಗೆ ಭೇಟಿ ನೀಡಿ ನೈಜ ಮಾಹಿತಿಯನ್ನು ಸಂಗ್ರಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗಣತಿದಾರರಿಗೆ ಸೂಚನೆ ನೀಡಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಶಿಕ್ಷಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ಕೋತಿ ತೋಪು ವೃತ್ತದ ಬಳಿ ಸೋಮವಾರ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ–2025ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪರಿಶಿಷ್ಟ ಜಾತಿಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿ–ಗತಿಗಳ ವಾಸ್ತವಾಂಶವನ್ನು ಅರಿಯಲು ರಾಜ್ಯದಾದ್ಯಂತ ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಜಾತಿ ಸಮೀಕ್ಷೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈಗಾಗಲೇ ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.


    Provided by
    Provided by

    ಜಿಲ್ಲೆಯ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿಯ ಉಪಜಾತಿಗಳ ಸಮೀಕ್ಷೆ ನಡೆಸಲು 3,000 ಶಿಕ್ಷಕರನ್ನು ಗಣತಿದಾರರನ್ನಾಗಿ ನಿಯೋಜಿಸಲಾಗಿದೆ. ಸಮೀಕ್ಷೆಯು 3 ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಗಣತಿದಾರರು ಮೇ 5 ರಿಂದ 17ರವರೆಗೆ ಮನೆ-ಮನೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
    2ನೇ ಹಂತದಲ್ಲಿ ಮೇ 19 ರಿಂದ 21ರವರೆಗೆ ಆಯಾ ಮತಗಟ್ಟೆಗಳಲ್ಲಿ ಸಮೀಕ್ಷೆ ನಡೆಸಲಾಗುವುದು. ಪ್ರವಾಸದಲ್ಲಿರುವವರು, ವಿವಿಧ ಕಾರಣಗಳಿಂದ ಮನೆಯಿಂದ ಹೊರಗಿರುವವರು ಈ ಹಂತದಲ್ಲಿ ಸಂಬAಧಿಸಿದ ಮತಗಟ್ಟೆಗಳಿಗೆ ಭೇಟಿ ನೀಡಿ ತಮ್ಮ ಜಾತಿಯ ವಿವರಗಳನ್ನು ದಾಖಲಿಸಬಹುದು ಎಂದು ತಿಳಿಸಿದರು.

    3ನೇ ಹಂತದಲ್ಲಿ ಪರಿಶಿಷ್ಟ ಜಾತಿಯ ಉಪಜಾತಿ ವಿವರವನ್ನು ಆನ್ ಲೈನ್ ಮೂಲಕ ಸ್ವಯಂ ಘೋಷಿಸಿಕೊಳ್ಳಲು ಮೇ 19 ರಿಂದ 23ರವರೆಗೆ ಕಾಲಾವಕಾಶ ನೀಡಲಾಗುವುದು. ಸಮೀಕ್ಷಾ ಅವಧಿಯಲ್ಲಿ ಸ್ವಗ್ರಾಮಕ್ಕೆ ಭೇಟಿ ನೀಡಲು ಸಾಧ್ಯವಾಗದೇ ಇರುವವರು 3ನೇ ಹಂತದ ಸಮೀಕ್ಷೆಯಲ್ಲಿ ಪಾಲ್ಗೊಂಡು ಮಾಹಿತಿ ನೀಡುವ ಮೂಲಕ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

    ಗಣತಿದಾರರು ಮನೆ-ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕುಟುಂಬ ಸದಸ್ಯರು ತಮ್ಮ ಆಧಾರ್ ಮತ್ತು ಪಡಿತರ ಚೀಟಿಯನ್ನು ಹಾಜರುಪಡಿಸಿ ಜಾತಿಯ ಬಗ್ಗೆ ನಿಖರ ಮಾಹಿತಿಯನ್ನು ನೀಡಿ ಸಹಕರಿಸಬೇಕು. ಯಾವುದೇ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಇನ್ನಿತರೆ ದಾಖಲೆಗಳ ಅಗತ್ಯವಿರುವುದಿಲ್ಲ. ಜಾತಿ ಸಮೀಕ್ಷೆಯಲ್ಲಿ ಮಾಹಿತಿ ನೀಡುವುದರಿಂದ ಸರ್ಕಾರದ ಸೌಲಭ್ಯಗಳಿಂದ ಯಾರೂ ವಂಚಿತರಾಗುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.

    ಜಾತಿ ಗಣತಿ ಸಮೀಕ್ಷೆಯನ್ನು ಪರಿಣಾಮಕಾರಿಯಾಗಿ ನಡೆಸಲು ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಾಸ್ಟರ್ ಟ್ರೆöÊನರ್ಗಳಿಗೆ ತರಬೇತಿ ನೀಡಲಾಗಿದೆ. ಯಾವುದೇ ಲೋಪದೋಷವಾಗದಂತೆ ಸಮೀಕ್ಷಾ ಕಾರ್ಯ ನಡೆಸಲು ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

    ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ ಪರಿಶಿಷ್ಟ ಜಾತಿಯಲ್ಲಿ 101 ಉಪಜಾತಿಗಳಿದ್ದು, ಗಣತಿದಾರರು ಸಮೀಕ್ಷೆ ನಡೆಸಲು ಮನೆ-ಮನೆಗೆ ಭೇಟಿ ನೀಡಿದಾಗ ಪರಿಶಿಷ್ಟ ಜಾತಿ ಸಮುದಾಯದವರು ತಮ್ಮ ಉಪ ಜಾತಿಗಳ ನಿಖರ ಮಾಹಿತಿಯನ್ನು ನೀಡುವ ಮೂಲಕ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಲು ಸಹಕರಿಸಬೇಕು. ಜಿಲ್ಲೆಯ ಪ್ರತಿಯೊಬ್ಬ ನಾಗರಿಕನೂ ಸಮೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

    ಪರಿಶಿಷ್ಟ ಜಾತಿ ಸಮುದಾಯದ ಮುಖಂಡ ವೈ.ಕೆ. ಬಾಲಕೃಷ್ಣಪ್ಪ ಮಾತನಾಡಿ, ಪರಿಶಿಷ್ಟ ಜಾತಿಯ ಯಾವುದೇ ಕುಟುಂಬ ಹೊರಗುಳಿಯದಂತೆ ಸಮೀಕ್ಷೆ ನಡೆಸಬೇಕು. ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಡೆಸುವಲ್ಲಿ ಸಮುದಾಯದಿಂದ ಜಿಲ್ಲಾಡಳಿತಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

    ಮತ್ತೊಬ್ಬ ಮುಖಂಡ ದೊರೈರಾಜು ಮಾತನಾಡಿ ಸುಮಾರು 30 ವರ್ಷಗಳ ಹೋರಾಟದಿಂದ ಸರ್ಕಾರವು ಈ ಸಮೀಕ್ಷೆ ನಡೆಸಲು ಮುಂದಾಗಿದೆ. ಪ.ಜಾತಿಯ ಉಪಜಾತಿಗಳ ಆಧಾರದ ಮೇಲೆ ಮೀಸಲಾತಿ ನಿಗಧಿಯಾಗುವುದರಿಂದ ಗಣತಿದಾರರು ಮನೆಗಳಿಗೆ ಭೇಟಿ ನೀಡಿದಾಗ ಗೊತ್ತುಪಡಿಸಿದ ಪ್ರಶ್ನಾವಳಿಗಳಿಗೆ ನೈಜ ಉತ್ತರವನ್ನು ನೀಡಬೇಕು ಎಂದು ತಿಳಿಸಿದರು.
    ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಪಾಲಿಕೆ ಉಪ ಆಯುಕ್ತ ಗಿರೀಶ್, ತಹಶೀಲ್ದಾರ್ ರಾಜೇಶ್ವರಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಗಣತಿದಾರರು, ಪ.ಜಾತಿ ಸಮುದಾಯದ ಮುಖಂಡರು, ಸಾರ್ವಜನಿಕ ಬಂಧುಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್

    April 14, 2026

    ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ

    April 13, 2026

    ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ

    April 13, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬೆಳಗಾವಿ: ರಾಜ್ಯದ ಪರಿಶಿಷ್ಟ ಜಾತಿ/ಪಂಗಡಗಳ ಜನರಿಗೆ ಖಾಸಗಿ ಬಡಾವಣೆ ಮಾದರಿಯಲ್ಲಿ ಸಕಲ ಮೂಲಸೌಕರ್ಯ ಹೊಂದಿರುವ ಬಡಾವಣೆ ಅಭಿವೃದ್ಧಿಪಡಿಸಿ ನೀವೇಶನಗಳನ್ನು ಹಂಚಿಕೆ…

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್

    April 14, 2026

    ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.