ಮಧುಗಿರಿ: ತಾಲೂಕಿನ ಕೊಡ್ಲಾಪುರ ಗ್ರಾಮ ಪಂಚಾಯತ್ ನ ಪುರವರ ಹೋಬಳಿಯ ತಾಳಕೆರೆ ಶಾಲೆ ಕಳೆದ ಒಂದು ವರ್ಷಗಳಿಂದ ದುರಸ್ತಿಯಲ್ಲಿದೆ. ಇದೀಗ ಶಾಲೆಯ ಮೇಲ್ಛಾವಣಿಯಿಂದ ಸಿಮೆಂಟ್ ಗಳು ಕಿತ್ತು ಕೆಳಗೆ ಬೀಳುತ್ತಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆ ಗಮನ ಹರಿಸಿರಲಿಲ್ಲ.
ಶಾಲೆಯ ದುಸ್ಥಿತಿಯ ಬಗ್ಗೆ ಶಾಲೆಯ ಎಸ್ ಡಿಎಂಸಿ ಸದಸ್ಯರು ಮತ್ತು ಗ್ರಾಮಸ್ಥರು ಕಾಳಜಿ ತಂಡಕ್ಕೆ ಮಾಹಿತಿ ನೀಡಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಕಾಳಜಿ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಬಳಿಕ ಬಿಇಒ ಹನುಮಂತರಾಯಪ್ಪನವರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಅವರು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಹಾಗೂ ಇಂಜಿನಿಯರ್ ಗೆ ಶೀಘ್ರವೇ ಶಾಲೆಯ ದುರಸ್ತಿ ವೀಕ್ಷಿಸಿ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಶಾಲೆಯ ಉಳಿವಿಗಾಗಿ , ಕಾಳಜಿ ತಂಡ, ಭೀಮ್ ಆರ್ಮಿ, ಕರುನಾಡು ವಿಜಯ ಸೇನೆ ಮುಂದಾಳುತ್ವದಲ್ಲಿ ದೂರು ಬಿಇಒ ಅವರಿಗೆ ದೂರು ಸಲ್ಲಿಸಲಾಗಿದೆ.
ಇನ್ನೂ ಕಾಳಜಿ ತಂಡದ ಪ್ರಮುಖರಾದ ಕಾಳಜಿ ಮಹೇಶ್ ಅವರ ತಂಡಕ್ಕೆ ಸ್ಥಳೀಯರು ಹಾಗೂ ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದು, ತಂಡದ ಹೋರಾಟವನ್ನು ಶ್ಲಾಘಿಸಿದ್ದಾರೆ.