nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ

    November 20, 2025

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ

    November 20, 2025
    Facebook Twitter Instagram
    ಟ್ರೆಂಡಿಂಗ್
    • ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ
    • ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ
    • ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ
    • ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ
    • ಕಣ್ಣಿನ ಆರೋಗ್ಯಕ್ಕೆ ಸಮತೋಲನ ಆಹಾರ ಸೇವಿಸಬೇಕು: ಸಂಪತ್ ಕುಮಾರ್
    • ಮಕ್ಕಳು ಮದ್ಯಪಾನ, ಧೂಮಪಾನ ಚಟುವಟಿಕೆಗಳಿಂದ ದೂರವಿರಬೇಕು: ಶಿಕ್ಷಕ ಮದನ್
    • ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
    • ಸಾಲಬಾಧೆ:  ರೈತ ಸಾವಿಗೆ ಶರಣು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಮನೆಯಲ್ಲಿ ಅತ್ತೆ ಸೊಸೆ ಜಗಳ ಶುರುವಾಗಿದೆ: ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ
    ತುರುವೇಕೆರೆ March 15, 2023

    ಕಾಂಗ್ರೆಸ್ ಮನೆಯಲ್ಲಿ ಅತ್ತೆ ಸೊಸೆ ಜಗಳ ಶುರುವಾಗಿದೆ: ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

    By adminMarch 15, 2023No Comments2 Mins Read
    turuvekere

    ತುರುವೇಕೆರೆ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಬಗ್ಗೆ ರಾಜ್ಯದ ಜನರಿಗೆ ಗ್ಯಾರಂಟಿ ಇಲ್ಲ ಆದರೂ 200 ಯೂನಿಟ್ ವಿದ್ಯುತ್ ಹಾಗೂ 2000 ರೂ ಮಹಿಳೆಯರಿಗೆ ಕೊಡುತ್ತೇವೆ ಎಂದು ಹೊರಟಿದ್ದಾರೆ, ಮನೆಯಲ್ಲಿ ಅತ್ತೆ ಸೊಸೆ ನಡುವೆ ಜಗಳ ಶುರುವಾಗುವ ಹಾಗೆ ಮಾಡಿದ್ದಾರೆ ಎಂದು ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆರೋಪಿಸಿದರು.

    ಪಟ್ಟಣದ ಗುರುಭವನ ಆವರಣದಲ್ಲಿ ತಾಲೂಕು ಜೆಡಿಎಸ್ ಪಕ್ಷದಿಂದ ಆಯೋಜಿಸಿದ್ದ ಮುಸ್ಲಿಂ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಬಡವರ ದೀನದಲಿತರ ಪಕ್ಷ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಈಗಾಗಲೇ ಕುಮಾರಸ್ವಾಮಿ ಅವರು ಹೇಳಿರುವಂತೆ ಪಂಚರತ್ನ ಯೋಜನೆಗಳನ್ನು ಜಾರಿಗೆ ತರಲಿದ್ದಾರೆ. ಆಸ್ಪತ್ರೆ ರೈತರಿಗೆ ಒಂದು ಎಕರೆ ಜಮೀನು ಇರುವಂತವರಿಗೆ 10,000 ಗಳು ಉಚಿತ ವೃದ್ದರಿಗೆ ಮಹಿಳೆಯರಿಗೆ ತಿಂಗಳಿಗೆ 5,000ಗಳನ್ನು ನೀಡಲಿದ್ದಾರೆ. ಬಿ.ಜೆ.ಪಿ ಸರ್ಕಾರ ಲೂಟಿ ಮಾಡಿ, 5 ಲಕ್ಷ ಕೋಟಿ ಸಾಲವನ್ನು ರಾಜ್ಯದ ಜನತೆಯ ಮೇಲೆ ಹೋರಿಸಿದ್ದಾರೆ, ನಮ್ಮ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದಲ್ಲಿ ಹಣವಿಲ್ಲದಂತಾಗಿದೆ ಎಂದು ಅವರು ಹೇಳಿದರು.


    Provided by
    Provided by

    ಬಿಜೆಪಿ ಪಕ್ಷ ಉತ್ತಮ ಆಡಳಿತ ನೀಡಿದ್ದರೆ ಪ್ರಧಾನಿ ನರೇಂದ್ರ ಮೋದಿಯವರು ಪದೇ ಪದೇ ಕರ್ನಾಟಕಕ್ಕೆ ಬರುವ ಅಗತ್ಯ ಏನಿತ್ತು? ಅಚ್ಚೆದಿನ್ ಆಯೆಗಾ ಗುಜರಾತ್ ಮಾಡೆಲ್ ರೀತಿ ರಾಜ್ಯವನ್ನು ಅಭಿವೃದ್ಧಿ ಮಾಡುತ್ತೇವೆ ಎಂದಿದ್ದರು. ನಮ್ಮ ರಾಜ್ಯದಲ್ಲಿ ಪಾನಿಪೂರಿ ಮತ್ತು ಬೀಡ ಹಾಕುವವರು ಗುಜರಾತಿಗಳೇ ಹೊರತು ಇಲ್ಲಿಯವರೆಲ್ಲ ಅಲ್ಲಿ ಅಭಿವೃದ್ಧಿ ಹೊಂದಿದ್ದರೆ ಅವರೆಲ್ಲ ನಮ್ಮ ರಾಜ್ಯಕ್ಕೆ ಏಕೆ ಬರುತ್ತಿದ್ದರು ಎಂದು ಪ್ರಶ್ನೆ ಮಾಡಿದರು.

    ಕನ್ನಡ ನಾಡಿನ ಜನರು ಸ್ವಾಭಿಮಾನಿಗಳು ಯಾವ ರಾಜ್ಯಕ್ಕೂ ಹೋಗುವುದಿಲ್ಲ ಇಡೀ ದೇಶಕ್ಕೆ ಕೊಬ್ಬರಿಯನ್ನು ತಿನ್ನಿಸುವವರು ನಮ್ಮ ಕನ್ನಡಿಗರು ಎಂದ ಅವರು, ಯಾವ ಜೆಡಿಎಸ್ ನಾಯಕರು ಸಹ ಜೈಲಿನಲ್ಲಿ ಇಲ್ಲ, ಅಥವಾ ಬೇಲಿನಲ್ಲಿಯೂ ಇಲ್ಲ ಮುಸ್ಲಿಮರಿಗೆ ಶೇಕಡ 40ರಷ್ಟು ಮೀಸಲಾತಿ ನೀಡಿದ್ದು ಮಾಜಿ ಪ್ರಧಾನಿ ದೇವೇಗೌಡರು, 60 ವರ್ಷ ಆಡಳಿತ ಮಾಡಿದ ಕಾಂಗ್ರೆಸ್ ಅಲ್ಲ, ಮುಸ್ಲಿಮರಿಗೆ ಕಾಂಗ್ರೆಸ್ ಪಕ್ಷ ಏನೂ ಮಾಡಿಲ್ಲ ರಾಜಕೀಯದಲ್ಲಿರುವ ದೇವೇಗೌಡರಿಗೆ ಸ್ವಂತ ಮನೆಯಲ್ಲಿ ಕಾಂಗ್ರೆಸ್ ಹಲವು ನಾಯಕರು ಲಕ್ಷಾಂತರ ಲೂಟಿ ಮಾಡಿ ಕೆಲವರು ಜೈಲಿನಲ್ಲಿ ಕೆಲವರು ಬೇಲಿನಲ್ಲಿದ್ದಾರೆ ಎಂದು ಕಾಂಗ್ರೆಸ್ ನವರನ್ನು ಕುಟುಕಿದರು.

    ಎಂ.ಟಿ. ಕೃಷ್ಣಪ್ಪ ಮಾತನಾಡಿ, ಸಿಎಂ ಇಬ್ರಾಹಿಂ ರವರ ಕಾಲ್ಗುಣ ಚೆನ್ನಾಗಿದೆ 2008ರಲ್ಲಿ ನಮ್ಮ ಪರವಾಗಿದ್ದರು ಆಗ ನಾನು ಶಾಸಕನಾದೆ, ಈ ಬಾರಿ 18ಕ್ಕೆ ನಾನು ಶಾಸಕನಾಗಿ ಆಯ್ಕೆಯಾಗುವುದರಲ್ಲಿ ಸಂದೇಹವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಮುಸ್ಲಿಂ ಸಮುದಾಯ ಕಳೆದ ಬಾರಿ ಕಾಂಗ್ರೆಸ್ ಗೆ ಮತ ನೀಡಿ ಬಿಜೆಪಿ ಗೆಲ್ಲುವಂತೆ ಮಾಡಿ ನನ್ನನ್ನು ಕೇವಲ 1000 ಮತಗಳಿಂದ ಸೋಲಿಸಿದಿರಿ, ಈ ಕ್ಷೇತ್ರಗಳಲ್ಲಿ ಇನ್ನು 20 ವರ್ಷಗಳಾದರೂ ಕಾಂಗ್ರೆಸ್ ಗೆಲ್ಲಲ್ಲ. ನಾನು ಶಾಸಕನಾಗಿದ್ದಾಗ ಮುಸ್ಲಿಂ ಸಮುದಾಯಕ್ಕೆ ಹಲವು ಯೋಜನೆಗಳನ್ನು ನೀಡಿ ನಿಮ್ಮ ಪರವಾಗಿದ್ದೆ, ಆಶ್ರಯ ಮನೆಗಳು, ಜಮೀನು ಮಂಜೂರು, ಬೋರ್ವೆಲ್ ಗಳನ್ನು ನೀಡಿದ್ದೇನೆ. ಆದರೆ ಬಿಜೆಪಿ ಶಾಸಕರು ನಿಮ್ಮ ಮೇಲೆ ಕೇಸ್ ಗಳನ್ನು ಹಾಕಿಸಿದ್ದಾರೆ ನಾನು ನಿಮ್ಮ ಪರವಾಗಿ ಹೋರಾಟ ಮಾಡಿದ್ದೇನೆ. ಈ ಬಾರಿ ಚುನಾವಣೆ ನನ್ನ ಕಡೆ ಚುನಾವಣೆ ಎಲ್ಲ ಮುಸ್ಲಿಂ ಬಾಂಧವರು ನನಗೆ ಮತ ನೀಡಬೇಕೆಂದು ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜಿನಪ್ಪ. ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಸ್ವಾಮಿ. ಅಲ್ಪಸಂಖ್ಯಾತ ಘಟಕದ ರಾಜ್ಯ ಅಧ್ಯಕ್ಷ ಶಂಶುಲ್ಲಾ ಖಾನ್. ರಾಜ್ಯ ಮಹಿಳಾ ಘಟಕದ ನಜ್ಮಾ ನಜೀರ್. ತಾಲ್ಲೂಕು ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಜಫ್ರುಲ್ಲ. ಮುಖಂಡರಾದ ಮೊಟ್ಟೆಬಾಬು. ಜಗದೀಶ್. ಶಂಕರೇಗೌಡ. ಬಾಣಸಂದ್ರ ರಮೇಶ್. ಹೆಡಗೀಹಳ್ಳಿ ವಿಶ್ವನಾಥ್. ಬಿ.ಎಸ್. ದೇವರಾಜ್. ಸೇರಿದಂತೆ ಹಲವಾರು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ

    November 20, 2025

    ಕೊರಟಗೆರೆ: ತಾಲ್ಲೂಕಿನಲ್ಲಿ ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ರೈತರಿಂದ ಪ್ರತಿ ಗಂಟೆಗೆ ರೂ. 2,700/- ಗಳಿಗೆ ನಿಗದಿಪಡಿಸಿದ್ದು ಒಂದು…

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ

    November 20, 2025

    ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ

    November 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.