nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಮನೆಯಲ್ಲಿ ಅತ್ತೆ ಸೊಸೆ ಜಗಳ ಶುರುವಾಗಿದೆ: ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ
    ತುರುವೇಕೆರೆ March 15, 2023

    ಕಾಂಗ್ರೆಸ್ ಮನೆಯಲ್ಲಿ ಅತ್ತೆ ಸೊಸೆ ಜಗಳ ಶುರುವಾಗಿದೆ: ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

    By adminMarch 15, 2023No Comments2 Mins Read
    turuvekere

    ತುರುವೇಕೆರೆ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಬಗ್ಗೆ ರಾಜ್ಯದ ಜನರಿಗೆ ಗ್ಯಾರಂಟಿ ಇಲ್ಲ ಆದರೂ 200 ಯೂನಿಟ್ ವಿದ್ಯುತ್ ಹಾಗೂ 2000 ರೂ ಮಹಿಳೆಯರಿಗೆ ಕೊಡುತ್ತೇವೆ ಎಂದು ಹೊರಟಿದ್ದಾರೆ, ಮನೆಯಲ್ಲಿ ಅತ್ತೆ ಸೊಸೆ ನಡುವೆ ಜಗಳ ಶುರುವಾಗುವ ಹಾಗೆ ಮಾಡಿದ್ದಾರೆ ಎಂದು ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆರೋಪಿಸಿದರು.

    ಪಟ್ಟಣದ ಗುರುಭವನ ಆವರಣದಲ್ಲಿ ತಾಲೂಕು ಜೆಡಿಎಸ್ ಪಕ್ಷದಿಂದ ಆಯೋಜಿಸಿದ್ದ ಮುಸ್ಲಿಂ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಬಡವರ ದೀನದಲಿತರ ಪಕ್ಷ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಈಗಾಗಲೇ ಕುಮಾರಸ್ವಾಮಿ ಅವರು ಹೇಳಿರುವಂತೆ ಪಂಚರತ್ನ ಯೋಜನೆಗಳನ್ನು ಜಾರಿಗೆ ತರಲಿದ್ದಾರೆ. ಆಸ್ಪತ್ರೆ ರೈತರಿಗೆ ಒಂದು ಎಕರೆ ಜಮೀನು ಇರುವಂತವರಿಗೆ 10,000 ಗಳು ಉಚಿತ ವೃದ್ದರಿಗೆ ಮಹಿಳೆಯರಿಗೆ ತಿಂಗಳಿಗೆ 5,000ಗಳನ್ನು ನೀಡಲಿದ್ದಾರೆ. ಬಿ.ಜೆ.ಪಿ ಸರ್ಕಾರ ಲೂಟಿ ಮಾಡಿ, 5 ಲಕ್ಷ ಕೋಟಿ ಸಾಲವನ್ನು ರಾಜ್ಯದ ಜನತೆಯ ಮೇಲೆ ಹೋರಿಸಿದ್ದಾರೆ, ನಮ್ಮ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದಲ್ಲಿ ಹಣವಿಲ್ಲದಂತಾಗಿದೆ ಎಂದು ಅವರು ಹೇಳಿದರು.


    Provided by
    Provided by

    ಬಿಜೆಪಿ ಪಕ್ಷ ಉತ್ತಮ ಆಡಳಿತ ನೀಡಿದ್ದರೆ ಪ್ರಧಾನಿ ನರೇಂದ್ರ ಮೋದಿಯವರು ಪದೇ ಪದೇ ಕರ್ನಾಟಕಕ್ಕೆ ಬರುವ ಅಗತ್ಯ ಏನಿತ್ತು? ಅಚ್ಚೆದಿನ್ ಆಯೆಗಾ ಗುಜರಾತ್ ಮಾಡೆಲ್ ರೀತಿ ರಾಜ್ಯವನ್ನು ಅಭಿವೃದ್ಧಿ ಮಾಡುತ್ತೇವೆ ಎಂದಿದ್ದರು. ನಮ್ಮ ರಾಜ್ಯದಲ್ಲಿ ಪಾನಿಪೂರಿ ಮತ್ತು ಬೀಡ ಹಾಕುವವರು ಗುಜರಾತಿಗಳೇ ಹೊರತು ಇಲ್ಲಿಯವರೆಲ್ಲ ಅಲ್ಲಿ ಅಭಿವೃದ್ಧಿ ಹೊಂದಿದ್ದರೆ ಅವರೆಲ್ಲ ನಮ್ಮ ರಾಜ್ಯಕ್ಕೆ ಏಕೆ ಬರುತ್ತಿದ್ದರು ಎಂದು ಪ್ರಶ್ನೆ ಮಾಡಿದರು.

    ಕನ್ನಡ ನಾಡಿನ ಜನರು ಸ್ವಾಭಿಮಾನಿಗಳು ಯಾವ ರಾಜ್ಯಕ್ಕೂ ಹೋಗುವುದಿಲ್ಲ ಇಡೀ ದೇಶಕ್ಕೆ ಕೊಬ್ಬರಿಯನ್ನು ತಿನ್ನಿಸುವವರು ನಮ್ಮ ಕನ್ನಡಿಗರು ಎಂದ ಅವರು, ಯಾವ ಜೆಡಿಎಸ್ ನಾಯಕರು ಸಹ ಜೈಲಿನಲ್ಲಿ ಇಲ್ಲ, ಅಥವಾ ಬೇಲಿನಲ್ಲಿಯೂ ಇಲ್ಲ ಮುಸ್ಲಿಮರಿಗೆ ಶೇಕಡ 40ರಷ್ಟು ಮೀಸಲಾತಿ ನೀಡಿದ್ದು ಮಾಜಿ ಪ್ರಧಾನಿ ದೇವೇಗೌಡರು, 60 ವರ್ಷ ಆಡಳಿತ ಮಾಡಿದ ಕಾಂಗ್ರೆಸ್ ಅಲ್ಲ, ಮುಸ್ಲಿಮರಿಗೆ ಕಾಂಗ್ರೆಸ್ ಪಕ್ಷ ಏನೂ ಮಾಡಿಲ್ಲ ರಾಜಕೀಯದಲ್ಲಿರುವ ದೇವೇಗೌಡರಿಗೆ ಸ್ವಂತ ಮನೆಯಲ್ಲಿ ಕಾಂಗ್ರೆಸ್ ಹಲವು ನಾಯಕರು ಲಕ್ಷಾಂತರ ಲೂಟಿ ಮಾಡಿ ಕೆಲವರು ಜೈಲಿನಲ್ಲಿ ಕೆಲವರು ಬೇಲಿನಲ್ಲಿದ್ದಾರೆ ಎಂದು ಕಾಂಗ್ರೆಸ್ ನವರನ್ನು ಕುಟುಕಿದರು.

    ಎಂ.ಟಿ. ಕೃಷ್ಣಪ್ಪ ಮಾತನಾಡಿ, ಸಿಎಂ ಇಬ್ರಾಹಿಂ ರವರ ಕಾಲ್ಗುಣ ಚೆನ್ನಾಗಿದೆ 2008ರಲ್ಲಿ ನಮ್ಮ ಪರವಾಗಿದ್ದರು ಆಗ ನಾನು ಶಾಸಕನಾದೆ, ಈ ಬಾರಿ 18ಕ್ಕೆ ನಾನು ಶಾಸಕನಾಗಿ ಆಯ್ಕೆಯಾಗುವುದರಲ್ಲಿ ಸಂದೇಹವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಮುಸ್ಲಿಂ ಸಮುದಾಯ ಕಳೆದ ಬಾರಿ ಕಾಂಗ್ರೆಸ್ ಗೆ ಮತ ನೀಡಿ ಬಿಜೆಪಿ ಗೆಲ್ಲುವಂತೆ ಮಾಡಿ ನನ್ನನ್ನು ಕೇವಲ 1000 ಮತಗಳಿಂದ ಸೋಲಿಸಿದಿರಿ, ಈ ಕ್ಷೇತ್ರಗಳಲ್ಲಿ ಇನ್ನು 20 ವರ್ಷಗಳಾದರೂ ಕಾಂಗ್ರೆಸ್ ಗೆಲ್ಲಲ್ಲ. ನಾನು ಶಾಸಕನಾಗಿದ್ದಾಗ ಮುಸ್ಲಿಂ ಸಮುದಾಯಕ್ಕೆ ಹಲವು ಯೋಜನೆಗಳನ್ನು ನೀಡಿ ನಿಮ್ಮ ಪರವಾಗಿದ್ದೆ, ಆಶ್ರಯ ಮನೆಗಳು, ಜಮೀನು ಮಂಜೂರು, ಬೋರ್ವೆಲ್ ಗಳನ್ನು ನೀಡಿದ್ದೇನೆ. ಆದರೆ ಬಿಜೆಪಿ ಶಾಸಕರು ನಿಮ್ಮ ಮೇಲೆ ಕೇಸ್ ಗಳನ್ನು ಹಾಕಿಸಿದ್ದಾರೆ ನಾನು ನಿಮ್ಮ ಪರವಾಗಿ ಹೋರಾಟ ಮಾಡಿದ್ದೇನೆ. ಈ ಬಾರಿ ಚುನಾವಣೆ ನನ್ನ ಕಡೆ ಚುನಾವಣೆ ಎಲ್ಲ ಮುಸ್ಲಿಂ ಬಾಂಧವರು ನನಗೆ ಮತ ನೀಡಬೇಕೆಂದು ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜಿನಪ್ಪ. ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಸ್ವಾಮಿ. ಅಲ್ಪಸಂಖ್ಯಾತ ಘಟಕದ ರಾಜ್ಯ ಅಧ್ಯಕ್ಷ ಶಂಶುಲ್ಲಾ ಖಾನ್. ರಾಜ್ಯ ಮಹಿಳಾ ಘಟಕದ ನಜ್ಮಾ ನಜೀರ್. ತಾಲ್ಲೂಕು ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಜಫ್ರುಲ್ಲ. ಮುಖಂಡರಾದ ಮೊಟ್ಟೆಬಾಬು. ಜಗದೀಶ್. ಶಂಕರೇಗೌಡ. ಬಾಣಸಂದ್ರ ರಮೇಶ್. ಹೆಡಗೀಹಳ್ಳಿ ವಿಶ್ವನಾಥ್. ಬಿ.ಎಸ್. ದೇವರಾಜ್. ಸೇರಿದಂತೆ ಹಲವಾರು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.