nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026
    Facebook Twitter Instagram
    ಟ್ರೆಂಡಿಂಗ್
    • ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 6 ತಿಂಗಳಲ್ಲೇ 18.5ಕೋಟಿ ಜನರ ತೆರಿಗೆ ಹಣ ಉಡಾಯಿಸಿದ ಕಾಂಗ್ರೆಸ್ ಸರ್ಕಾರ: ಮಲ್ಲಿಕಾರ್ಜುನ ಭಟ್ಟರಹಳ್ಳಿ ಕಿಡಿ
    ತುಮಕೂರು December 25, 2023

    6 ತಿಂಗಳಲ್ಲೇ 18.5ಕೋಟಿ ಜನರ ತೆರಿಗೆ ಹಣ ಉಡಾಯಿಸಿದ ಕಾಂಗ್ರೆಸ್ ಸರ್ಕಾರ: ಮಲ್ಲಿಕಾರ್ಜುನ ಭಟ್ಟರಹಳ್ಳಿ ಕಿಡಿ

    By adminDecember 25, 2023No Comments3 Mins Read
    krs

    ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ.ಕೇವಲ ಆರೇ ಆರು ತಿಂಗಳಲ್ಲಿ 18.50 ಕೋಟಿ ರು ಜಾಹೀರಾತಿಗೆ ಬಿಡುಗಡೆ ಆಗಿದೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ 2023-24ನೇ ಸಾಲಿನ ಆಯವ್ಯಯದಲ್ಲಿ  ಒದಗಿಸಿದ್ದ 37.95 ಕೋಟಿ ರು. ನಲ್ಲಿ ಈಗಾಗಲೇ 18.50 ಕೋಟಿ ರು. ಗೂ ಹೆಚ್ಚು ಮೊತ್ತದಲ್ಲಿ ಜಾಹೀರಾತು ಬಿಡುಗಡೆ ಆಗಿರುವುದು ಇದೀಗ ಬಹಿರಂಗವಾಗಿದೆ ಎಂದು ಕರ್ನಾಟಕ ರಾಷ್ರ್ಟಸಮಿತಿ ಪಕ್ಷ  ರಾಜ್ಶ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿ ಹೇಳಿದ್ದಾರೆ.

    ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ, ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ಹಣ ಬಿಡುಗಡೆ ಮತ್ತು ಬರ  ಪರಿಹಾರಕ್ಕೆ ಹಣ ಹೊಂದಿಸಲು ಏದುಸಿರು ಬಿಡುತ್ತಿರುವ ಸರ್ಕಾರವು ಜಾಹೀರಾತುಗಳಿಗೆ ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತಿದೆ ಎಂದು ಅವರು ಆರೋಫಿಸಿದ್ದಾರೆ.


    Provided by
    Provided by

    ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡಲು “ದ ಪಾಲಿಸಿ ಫ್ರಂಟ್‌ ” ನ ಸೇವೆ ಪಡೆಯಲು ವಾರ್ತಾ ಇಲಾಖೆ ಕೋರಿದ್ದ ಪ್ರಸ್ತಾವನೆಯಲ್ಲಿ ಜಾಹೀರಾತಿಗೆ ಮಾಡಿರುವ ಖರ್ಚಿನ ವಿವರವನ್ನು ಪ್ರಸ್ತಾವಿಸಲಾಗಿದೆ. ‘ಸಿದ್ದರಾಮಯ್ಯ ಅವರ ಅಂತರ್ಜಾಲದಿಂದ ಯಾವುದೋ ಯುವಕನ ಫೋಟೋ ಕದ್ದು, ಈತ ಯುವನಿಧಿಯ ಫಲಾನುಭವಿ ಅಂತ ತೋರಿಸುತ್ತಿರುವುದು ಇವರ ಸುಳ್ಳು ಪ್ರಚಾರಕ್ಕೆ ಹಿಡಿದ ಕೈಗನ್ನಡಿ ಎಂದು ಮಲ್ಲಿಕಾರ್ಜುನ ಟೀಕಿಸಿದ್ದಾರೆ.

    ಅದೇ ರೀತಿ 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಪಾದಕರು ಮತ್ತು ಮಾಲೀಕತ್ವದ ಪತ್ರಿಕೆಗಳಿಗೆ ಮೇ 2023ರಿಂದಲೇ ಅನುದಾನ ಕೊರತೆಯಾಗಿದೆ. ಈ ಸಂಬಂಧ ಕೃಷಿ ಸಚಿವ ಎನ್‌ .ಚೆಲುವರಾಯಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರವನ್ನೂ ಬರೆದಿದ್ದಾರೆ ಎಂದು ಅವರು ಹೇಳಿದ್ದಾರೆ.

    ಸರ್ಕಾರಿ ಕಾರ್ಯಕ್ರಮಗಳ ಜಾಹೀರಾತು ನೀಡುವ ಕ್ರಿಯಾ ಯೋಜನೆಗೆ  ಈಗಾಗಲೇ ಅನುಮೋದನೆ ದೊರೆತಿದೆ. ಇದರ ಪ್ರಕಾರ 2023ರ ಏಪ್ರಿಲ್‌ ನಿಂದ ಜಾಹೀರಾತು ನೀಡಲಾಗುತ್ತಿದೆ. ಈ ಜಾಹೀರಾತುಗಳಿಗೆ ವಾ‍ರ್ಷಿಕ 22 ಕೋಟಿ ರೂ.. ಅನುದಾನ ಅಗತ್ಯವಿದೆ. ಆದರೆ ಸಮಾಜ ಕಲ್ಯಾಣ ಇಲಾಖೆಯು ಎಸ್‌ ಸಿಪಿ ಯೋಜನೆಯಡಿಯಲ್ಲಿ ಕೇವಲ 8.57 ಕೋಟಿ ರೂ. ಮಾತ್ರ ಅನುದಾನವನ್ನು ಮೀಸಲಿಟ್ಟಿದೆ ಎಂಬ ಸಂಗತಿಯನ್ನು ಚೆಲುವರಾಯಸ್ವಾಮಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ  ಎಂದು ಅವರು ತಿಳಿಸಿದ್ದಾರೆ.

    ಈ ಹಿಂದಿನ ಬಿಜೆಪಿ ಸರ್ಕಾರವೂ ಸಹ ಜಾಹೀರಾತಿಗೆ ಅಪಾರ ಪ್ರಮಾಣದಲ್ಲಿ ಖರ್ಚು ಮಾಡಿತ್ತು. ಕೋವಿಡ್‌-19 ಸಂದರ್ಭದಲ್ಲಿ ಜಾಹೀರಾತುಗಳಿಗೆ 3 ತಿಂಗಳಲ್ಲಿ 11 ಕೋಟಿ ವೆಚ್ಚ ಮಾಡಿತ್ತು. ಮೋದಿ ಹುಟ್ಟುಹಬ್ಬಕ್ಕೆ ಜಾಹೀರಾತು ನೀಡಿದ್ದ ಹಿಂದಿನ ಸರ್ಕಾರವು ಪ್ರಾಯೋಜಿತ ಪುರವಣಿಗಳಿಗೆ 44.85 ಲಕ್ಷ ರು. ವೆಚ್ಚ ಮಾಡಿ ವೆಚ್ಚ ಮಾಹಿತಿ ಮುಚ್ಚಿಟ್ಟಿತ್ತು.  ಕೋವಿಡ್‌ ಪರಿಹಾರ ನೀಡಲು ಚೌಕಾಸಿ ಮಾಡಿದ್ದ ಸರ್ಕಾರವು ತಮಿಳುನಾಡಿನ ರಾಜಕೀಯ ವಿಶ್ಲೇಷಣೆಗೆ 25 ಲಕ್ಷ ನೀಡಿತ್ತು. 2 ವರ್ಷದ ಸಾಧನೆ ಬಿಂಬಿಸಲು 7.96 ಕೋಟಿ ಖರ್ಚು ಮಾಡಿದ್ದ ಸರ್ಕಾರವು ಜಾಹೀರಾತಿಗೆ 6.62 ಕೋಟಿ ವೆಚ್ಚ ಮಾಡಿತ್ತು. ಕೋವಿಡ್ ಲಸಿಕೆ ಅಭಿಯಾನ ಜಾಹೀರಾತು; 3 ತಿಂಗಳಲ್ಲಿ 2.77 ಕೋಟಿ ವೆಚ್ಚವಾದರೂ ಗುರಿ ಮುಟ್ಟಿರಲಿಲ್ಲ.ಸರ್ಕಾರದ ಸಾಧನೆ ಬಿಂಬಿಸಲು ಆರೇ ಆರು ತಿಂಗಳಲ್ಲಿ ಜಾಹೀರಾತಿಗೆ 26.84 ಕೋಟಿ ವೆಚ್ಚ ಮಾಡಿತ್ತು.ರಾಷ್ಟ್ರೀಯ ಶಿಕ್ಷಣ ನೀತಿ ಪ್ರಚಾರಕ್ಕೆ ಜಾಹೀರಾತಿಗೆ 1.02 ಕೋಟಿ ಖರ್ಚು ಮಾಡಿತ್ತು.ಅನುಭವ ಮಂಟಪದಲ್ಲಿ ಸಿ ಎಂ ಭಾಷಣದ ನೇರ ಪ್ರಸಾರಕ್ಕೆ 42.26 ಲಕ್ಷ ವೆಚ್ಚವಾಗಿತ್ತು. ಕೋವಿಡ್‌ ಜಾಹೀರಾತುಗಳಿಗಾಗಿ ನೀಡಿದ್ದ 1. 60 ಕೋಟಿ ವೆಚ್ಚದಲ್ಲಿ ಹೊಸದಿಗಂತಕ್ಕೆ ಸಿಂಹಪಾಲು ಲಭಿಸಿತ್ತು. ಬಜೆಟ್‌ ಸಂದರ್ಭದಲ್ಲಿ ಸಿ ಎಂ ಜತೆ ವಿಶೇಷ ಸಂವಾದಕ್ಕೂ ಸುದ್ದಿವಾಹಿನಿಗಳಿಗೆ 38.97 ಲಕ್ಷ ರು ಪಾವತಿ ಮಾಡಿತ್ತು ಎಂದು ಅವರು ಆರೋಪಿಸಿದ್ದಾರೆ.

    2019-20ರಲ್ಲಿ ಟಿ ವಿ ಚಾನಲ್‌ಗಳಿಗೆ 15.25 ಕೋಟಿ ರೂ., ಮುದ್ರಣ ಮಾಧ್ಯಮಕ್ಕೆ 6.79 ಕೋಟಿ ರು., ಸಾಮಾಜಿಕ ಜಾಲತಾಣಕ್ಕೆ 0.48 ಲಕ್ಷ ರು., 2020-21ರಲ್ಲಿ 17.45 ಕೋಟಿ ರು., ಜಾಹೀರಾತುಗಳಿಗೆ ಬಿಡುಗಡೆ ಮಾಡಿತ್ತು.  ಮುದ್ರಣ ಮಾಧ್ಯಮಗಳಿಗೆ 9.75 ಕೋಟಿ ರು., 2021-22 ಟಿ ವಿ ಚಾನಲ್‌ಗಳಿಗೆ 36.58 ಕೋಟಿ ರು., ಮುದ್ರಣ ಮಾಧ್ಯಮಗಳಿಗೆ 13.26 ಕೋಟಿ ರೂ., ಸಾಮಾಜಿಕ ಜಾಲತಾಣಗಳಿಗೆ 1.18 ಕೋಟಿ ರು., 2022-23ರ ಸಾಲಿಗೆ ಮಾರ್ಚ್‌ 31, 2023ರ ಅಂತ್ಯಕ್ಕೆ 42.23 ಕೋಟಿ ರು. ಸೇರಿ ಒಟ್ಟಾರೆ 111.51 ಕೋಟಿ ರು. ನೀಡಿತ್ತು ಎಂದು ಸರ್ಕಾರವೇ 2023ರ ಫೆ.16ರಂದು ಸದನಕ್ಕೆ ಉತ್ತರಿಸಿದ್ದನ್ನು ಸ್ಮರಿಸಬಹುದು ಎಂದು ಅವರು ಹೇಳಿದ್ದಾರೆ.

    ಸಾಲ ಮಾಡಿ ಆರ್ಥಿಕ ಅಶಿಸ್ತಿಗೆ ಕಾರಣವಾಗಿ ಅಭಿವ್ರುದ್ಧಿಯ ಜನಕಲ್ಶಾಣ ಯೋಜನೆಗಳು ಮರೀಚಿಕೆಯಾಗಿ ಭ್ರಷ್ಠಾಚಾರದ ಕ್ಶಾನ್ಸರ್ ಹೆಚ್ಚಾಗಿ ರಾಜ್ಶವನ್ನು ದಿವಾಳಿ ಅಂಚಿಗೆ ಕೊಂಡೊಯ್ಶುವ ಸಾಧ್ಶತೆಗಳೇ ಹೆಚ್ಚಾಗಿವೆ. ಪ್ರಚಾರಕ್ಕೆ ಸೀಮಿತವಾಗಿ ಸರ್ಕಾರ ನಡೆಸುವವರ ಇಂತಹ ಅಶಿಸ್ತಿನ ಆರ್ಥಿಕ ನಡೆಗಳನ್ನು KRS ಪಕ್ಷ ಗಂಭೀರವಾಗಿ ಖಂಡಿಸುತ್ತಿದೆ. ಹಣಕಾಸು ಹೊಣೆಹೊತ್ತಿರುವ ಮುಖ್ಶಮಂತ್ರಿಸಿದ್ಧರಾಮಯ್ಶನವರು ರಾಜ್ಶದ ಜನರ ಹಿತಾಸಕ್ತಿಯಿಂದ ಸುಳ್ಳು ಪ್ರಚಾರದ ಗೀಳಿನಿಂದ ಹೊರಬಂದು ಆಡಳಿತದಲ್ಲಿನ ಭ್ರಷ್ಠಾಚಾರಕ್ಕೆ ಕಡಿವಾಣ ಹಾಕಿ ಸಾಲದ ಹೊರೆ ತಗ್ಗಿಸಿ ಸರ್ಕಾರ ನಡೆಸಬೇಕು ಎಂದು ರಾಜ್ಶದ ನೈಜ ವಿರೋಧಪಕ್ಷವಾಗಿ KRS ಪಕ್ಷ ಆಗ್ರಹಿಸುತ್ತಿದೆ ಎಂದು ಮಲ್ಲಿಕಾರ್ಜುನ ಭಟ್ಟರಹಳ್ಳಿ  ತಿಳಿಸಿದ್ದಾರೆ.

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಪಾವಗಡ: ತಾಲ್ಲೂಕಿನ ಕೆಂಚಮ್ಮನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿ ಸಾವಿತ್ರಮ್ಮ ಹಾಗೂ ಕರಿಯಣ್ಣ ಕೆ.ಟಿ. ಅವರ ಪುತ್ರ…

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.