nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಸರ್ಕಾರ ಗಾಢ ನಿದ್ರೆಯಲ್ಲಿದೆ, ಅವರನ್ನು ಎಬ್ಬಿಸಲು ನಮ್ಮ ಹೋರಾಟ: ಪಿ.ರಾಜೀವ್
    ತುರುವೇಕೆರೆ August 1, 2024

    ಕಾಂಗ್ರೆಸ್ ಸರ್ಕಾರ ಗಾಢ ನಿದ್ರೆಯಲ್ಲಿದೆ, ಅವರನ್ನು ಎಬ್ಬಿಸಲು ನಮ್ಮ ಹೋರಾಟ: ಪಿ.ರಾಜೀವ್

    By adminAugust 1, 2024No Comments2 Mins Read
    rajeev

    ತುರುವೇಕೆರೆ: ನಮ್ಮ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
    ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗಾಢ ನಿದ್ರೆಯಲ್ಲಿದೆ ನಿದ್ರೆಯಿಂದ ಎಬ್ಬಿಸಲು ನಮ್ಮ ಹೋರಾಟ. ಇದು ಒಬ್ಬರ ವಿರುದ್ಧ ಅಲ್ಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಎಂದು ಅವರು ಹೇಳಿದರು.

    ಪಟ್ಟಣದ ಸಮೀಪವಿರುವ ಮಾಜಿ ಶಾಸಕ ಮಸಾಲ ಜಯರಾಮ್ ರವರ ಫಾರ್ಮ್ ಹೌಸ್ ನಲ್ಲಿ ಏರ್ಪಡಿಸಿದ್ದ ಮೈಸೂರು ಚಲೋ ಪೂರ್ವಾಸಿದ್ದತಾ ಸಭೆಯ ನಂತರ ಅವರು ಮಾತನಾಡಿದರು.


    Provided by
    Provided by

    ಶೋಷಿತ ಸಮುದಾಯವಾದ ಎಸ್ಸಿ ಎಸ್ಟಿ ಮೀಸಲಿಟ್ಟ 25,000 ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಹಣವನ್ನು ಸಹ ಕೊಳ್ಳೆ ಹೊಡೆದಿದ್ದಾರೆ. ಚುನಾವಣಾ ಸಮಯದಲ್ಲಿ ಈ ಹಣವನ್ನು ಅಕ್ರಮವಾಗಿ ಬಳಸಿಕೊಂಡು ಲೂಟಿ ಮಾಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಅತಿವೃಷ್ಟಿ ಮತ್ತು ಬರದಂತಹ ಪರಿಸ್ಥಿತಿಯಲ್ಲಿ ಈ ಸರ್ಕಾರ ಸಂತ್ರಸ್ತರ ನೆರವಿಗೆ ಬಾರದೆ ನಿರ್ಲಕ್ಷವನ್ನು ತೋರಿದೆ ಇಂತಹ ಲಜ್ಜೆಗಟ್ಟ ಸರ್ಕಾರವನ್ನು ನಾವು ಸ್ವತಂತ್ರ ಬಂದಾಗಿನಿಂದಲೂ ನೋಡಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.

    ಕರ್ನಾಟಕ ರಾಜ್ಯ ಕರ್ನಾಟಕ ರಾಜ್ಯದಲ್ಲಿ 1,700ಕ್ಕೂ ಹೆಚ್ಚುಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ನೆರವಿಗೆ ಸರ್ಕಾರ ಧಾವಿಸಲಿಲ್ಲ. ಕಾರ್ಮಿಕ ವರ್ಗಕ್ಕೆ ಮೀಸಲಿಟ್ಟಂತಹ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯನ್ನು ದುರ್ಬಳಕೆ ಮಾಡಿಕೊಂಡು ಹಣವನ್ನು ಕೊಳ್ಳೆ ಹೊಡೆದಿದೆ. ಇವರ ಹಗರಣಗಳನ್ನು ಹಾಗೂ ಅಕ್ರಮಗಳನ್ನು ಜನರಿಗೆ ಮನದಟ್ಟು ಮಾಡಲು ಈ ಪಾದಯಾತ್ರೆಯನ್ನು ಮೈಸೂರಿನಿಂದ ಬೆಂಗಳೂರಿಗೆ ಹಮ್ಮಿಕೊಂಡಿದ್ದೇವೆ ಎಂದವರು ತಿಳಿಸಿದರು.

    ಈ ಪಾದಯಾತ್ರೆಯಲ್ಲಿ ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ಎರಡು ಸಾವಿರ ಜನರನ್ನು ಸೇರಿಸಲು ನಿರೀಕ್ಷಸಲಾಗಿದೆ. ಇದರ ಪೂರ್ಣ ಜವಾಬ್ದಾರಿಯನ್ನು ಮಾಜಿ ಶಾಸಕ ಮಸಾಲ ಜಯರಾಮ್ ವಹಿಸಲಿದ್ದಾರೆ. ಒಂದೊಂದು ವಿಧಾನಸಭಾ ಕ್ಷೇತ್ರಕ್ಕೆ ಒಂದು ದಿನ ನಿಗದಿಪಡಿಸಲಾಗಿದ್ದು ಆಯಾ ಕ್ಷೇತ್ರದ ಜನ ಭಾಗವಹಿಸಲು ಮನವಿ ಮಾಡಲಾಗಿದೆ. ಸುಮಾರು 135 ಕಿಲೋಮೀಟರ್ ಪಾದಯಾತ್ರೆ ಸಾಗಲಿದ್ದು ಈ ಸರ್ಕಾರ ನಡೆಸಿರುವ ಹಗರಣ ಹಾಗೂ ಎಸ್ಸಿ ಎಸ್ಟಿ ನಿಗಮಗಳ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದು, ಇದು ಜನಗಳಿಗೆ ಜನರಿಗೆ ತಲುಪಿಸುವಂತಹ ಕೆಲಸ ಮಾಡುವುದು ನಮ್ಮ ಗುರಿಯಾಗಿದೆ. ಈ ಸರ್ಕಾರ ನೀತಿಯನ್ನು ಅನುಸರಿಸಿದ್ದು ಅಭಿವೃದ್ಧಿ ಸಾಧನೆಯನ್ನು ಇಡೀ ರಾಜ್ಯದ ಜನತೆಯ ಮುಂದೆ ಬಿಚ್ಚಿಡಲು ನಾವು ತಯಾರಿ ನಡೆಸಿದ್ದೇವೆ ಎಂದರು.

    ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಮಸಾಲ ಜಯರಾಮ್ ಮಾತನಾಡಿ, ನಮ್ಮ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ನ ಕಾರ್ಯಕರ್ತರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರು ಚಲೋ ನಲ್ಲಿ ಭಾಗವಹಿಸಿ ಯಶಸ್ವಿಗೊಳಿಸುತ್ತೇವೆ ಎಂದರು.
    ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಡಿ.ಲಕ್ಷ್ಮೀನಾರಾಯಣ್, ಮಾಜಿ ಶಾಸಕರಾದ ಮಸಾಲ ಜಯರಾಮ್, ಹಾಸನ ಜಿಲ್ಲಾ ಅಧ್ಯಕ್ಷರಾದ ಎಸ್.ನಾಗೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗರಾಜು, ಜಿಲ್ಲಾ ಕಾರ್ಯದರ್ಶಿ ಕೆಂಪೇಗೌಡ, ಜಿಲ್ಲಾ ಉಪಾಧ್ಯಕ್ಷರಾದ ವಿಜಯ್ ಕುಮಾರ್ ಹಾಗೂ ಅನಿತಾ ನಂಜುಂಡಯ್ಯ, ಮಹಿಳಾ ಮೋರ್ಚಾದ ಚೂಡಾಮಣಿ ಸೇರಿದಂತೆ ಬಿಜೆಪಿಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ

    May 8, 2026

    ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ

    May 7, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಕೊರಟಗೆರೆ: ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ 2026–27ನೆ ಸಾಲಿನ ಕಸ್ತೂರ್ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಆರಂಭಿಸುವ ಸಂಬಂಧ…

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.