nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ

    June 13, 2026

    ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ

    June 13, 2026

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ
    • ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಸರ್ಕಾರ ಗಾಢ ನಿದ್ರೆಯಲ್ಲಿದೆ, ಅವರನ್ನು ಎಬ್ಬಿಸಲು ನಮ್ಮ ಹೋರಾಟ: ಪಿ.ರಾಜೀವ್
    ತುರುವೇಕೆರೆ August 1, 2024

    ಕಾಂಗ್ರೆಸ್ ಸರ್ಕಾರ ಗಾಢ ನಿದ್ರೆಯಲ್ಲಿದೆ, ಅವರನ್ನು ಎಬ್ಬಿಸಲು ನಮ್ಮ ಹೋರಾಟ: ಪಿ.ರಾಜೀವ್

    By adminAugust 1, 2024No Comments2 Mins Read
    rajeev

    ತುರುವೇಕೆರೆ: ನಮ್ಮ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
    ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗಾಢ ನಿದ್ರೆಯಲ್ಲಿದೆ ನಿದ್ರೆಯಿಂದ ಎಬ್ಬಿಸಲು ನಮ್ಮ ಹೋರಾಟ. ಇದು ಒಬ್ಬರ ವಿರುದ್ಧ ಅಲ್ಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಎಂದು ಅವರು ಹೇಳಿದರು.

    ಪಟ್ಟಣದ ಸಮೀಪವಿರುವ ಮಾಜಿ ಶಾಸಕ ಮಸಾಲ ಜಯರಾಮ್ ರವರ ಫಾರ್ಮ್ ಹೌಸ್ ನಲ್ಲಿ ಏರ್ಪಡಿಸಿದ್ದ ಮೈಸೂರು ಚಲೋ ಪೂರ್ವಾಸಿದ್ದತಾ ಸಭೆಯ ನಂತರ ಅವರು ಮಾತನಾಡಿದರು.


    Provided by
    Provided by

    ಶೋಷಿತ ಸಮುದಾಯವಾದ ಎಸ್ಸಿ ಎಸ್ಟಿ ಮೀಸಲಿಟ್ಟ 25,000 ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಹಣವನ್ನು ಸಹ ಕೊಳ್ಳೆ ಹೊಡೆದಿದ್ದಾರೆ. ಚುನಾವಣಾ ಸಮಯದಲ್ಲಿ ಈ ಹಣವನ್ನು ಅಕ್ರಮವಾಗಿ ಬಳಸಿಕೊಂಡು ಲೂಟಿ ಮಾಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಅತಿವೃಷ್ಟಿ ಮತ್ತು ಬರದಂತಹ ಪರಿಸ್ಥಿತಿಯಲ್ಲಿ ಈ ಸರ್ಕಾರ ಸಂತ್ರಸ್ತರ ನೆರವಿಗೆ ಬಾರದೆ ನಿರ್ಲಕ್ಷವನ್ನು ತೋರಿದೆ ಇಂತಹ ಲಜ್ಜೆಗಟ್ಟ ಸರ್ಕಾರವನ್ನು ನಾವು ಸ್ವತಂತ್ರ ಬಂದಾಗಿನಿಂದಲೂ ನೋಡಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.

    ಕರ್ನಾಟಕ ರಾಜ್ಯ ಕರ್ನಾಟಕ ರಾಜ್ಯದಲ್ಲಿ 1,700ಕ್ಕೂ ಹೆಚ್ಚುಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ನೆರವಿಗೆ ಸರ್ಕಾರ ಧಾವಿಸಲಿಲ್ಲ. ಕಾರ್ಮಿಕ ವರ್ಗಕ್ಕೆ ಮೀಸಲಿಟ್ಟಂತಹ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯನ್ನು ದುರ್ಬಳಕೆ ಮಾಡಿಕೊಂಡು ಹಣವನ್ನು ಕೊಳ್ಳೆ ಹೊಡೆದಿದೆ. ಇವರ ಹಗರಣಗಳನ್ನು ಹಾಗೂ ಅಕ್ರಮಗಳನ್ನು ಜನರಿಗೆ ಮನದಟ್ಟು ಮಾಡಲು ಈ ಪಾದಯಾತ್ರೆಯನ್ನು ಮೈಸೂರಿನಿಂದ ಬೆಂಗಳೂರಿಗೆ ಹಮ್ಮಿಕೊಂಡಿದ್ದೇವೆ ಎಂದವರು ತಿಳಿಸಿದರು.

    ಈ ಪಾದಯಾತ್ರೆಯಲ್ಲಿ ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ಎರಡು ಸಾವಿರ ಜನರನ್ನು ಸೇರಿಸಲು ನಿರೀಕ್ಷಸಲಾಗಿದೆ. ಇದರ ಪೂರ್ಣ ಜವಾಬ್ದಾರಿಯನ್ನು ಮಾಜಿ ಶಾಸಕ ಮಸಾಲ ಜಯರಾಮ್ ವಹಿಸಲಿದ್ದಾರೆ. ಒಂದೊಂದು ವಿಧಾನಸಭಾ ಕ್ಷೇತ್ರಕ್ಕೆ ಒಂದು ದಿನ ನಿಗದಿಪಡಿಸಲಾಗಿದ್ದು ಆಯಾ ಕ್ಷೇತ್ರದ ಜನ ಭಾಗವಹಿಸಲು ಮನವಿ ಮಾಡಲಾಗಿದೆ. ಸುಮಾರು 135 ಕಿಲೋಮೀಟರ್ ಪಾದಯಾತ್ರೆ ಸಾಗಲಿದ್ದು ಈ ಸರ್ಕಾರ ನಡೆಸಿರುವ ಹಗರಣ ಹಾಗೂ ಎಸ್ಸಿ ಎಸ್ಟಿ ನಿಗಮಗಳ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದು, ಇದು ಜನಗಳಿಗೆ ಜನರಿಗೆ ತಲುಪಿಸುವಂತಹ ಕೆಲಸ ಮಾಡುವುದು ನಮ್ಮ ಗುರಿಯಾಗಿದೆ. ಈ ಸರ್ಕಾರ ನೀತಿಯನ್ನು ಅನುಸರಿಸಿದ್ದು ಅಭಿವೃದ್ಧಿ ಸಾಧನೆಯನ್ನು ಇಡೀ ರಾಜ್ಯದ ಜನತೆಯ ಮುಂದೆ ಬಿಚ್ಚಿಡಲು ನಾವು ತಯಾರಿ ನಡೆಸಿದ್ದೇವೆ ಎಂದರು.

    ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಮಸಾಲ ಜಯರಾಮ್ ಮಾತನಾಡಿ, ನಮ್ಮ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ನ ಕಾರ್ಯಕರ್ತರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರು ಚಲೋ ನಲ್ಲಿ ಭಾಗವಹಿಸಿ ಯಶಸ್ವಿಗೊಳಿಸುತ್ತೇವೆ ಎಂದರು.
    ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಡಿ.ಲಕ್ಷ್ಮೀನಾರಾಯಣ್, ಮಾಜಿ ಶಾಸಕರಾದ ಮಸಾಲ ಜಯರಾಮ್, ಹಾಸನ ಜಿಲ್ಲಾ ಅಧ್ಯಕ್ಷರಾದ ಎಸ್.ನಾಗೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗರಾಜು, ಜಿಲ್ಲಾ ಕಾರ್ಯದರ್ಶಿ ಕೆಂಪೇಗೌಡ, ಜಿಲ್ಲಾ ಉಪಾಧ್ಯಕ್ಷರಾದ ವಿಜಯ್ ಕುಮಾರ್ ಹಾಗೂ ಅನಿತಾ ನಂಜುಂಡಯ್ಯ, ಮಹಿಳಾ ಮೋರ್ಚಾದ ಚೂಡಾಮಣಿ ಸೇರಿದಂತೆ ಬಿಜೆಪಿಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ

    June 13, 2026

    ಕೊರಟಗೆರೆ: ರಾಜ್ಯದಲ್ಲಿ ವಿದ್ಯುತ್ ವಿತರಣಾ ಚಟುವಟಿಕೆಗಳನ್ನು ನಡೆಸಲು ಟಾಟಾ ಪವರ್ ಸೇರಿದಂತೆ ಯಾವುದೇ ಖಾಸಗಿ ಕಂಪನಿಗಳಿಗೆ ಅನುಮತಿ ನೀಡಬಾರದು ಎಂದು…

    ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ

    June 13, 2026

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.