ರಾಮನಗರ: ಚುನಾವಣಾಧಿಕಾರಿಗಳು ಕಾಂಗ್ರೆಸ್ ಅವರ ಕೈಗೊಂಬೆ ಆಗಿರೋದು ಸ್ಪಷ್ಟವಾಗಿದೆ ಎಂದು ಅಧಿಕಾರಿಗಳ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.
ತೋಟದ ಮನೆಯ ಹೊಸತೊಡಕು ಊಟಕ್ಕೆ ಚುನಾವಣಾಧಿಕಾರಿಗಳು ಬ್ರೇಕ್ ಹಾಕಿದ ವಿಚಾರದ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಸೋಲುವ ಆತಂಕದಲ್ಲಿ ಏನೇನೋ ಆರೋಪ ಮಾಡುತ್ತಿದೆ.
ಅವರ ದೂರಿಗೆ ಮಣೆಹಾಕಿ ಅಧಿಕಾರಿಗಳು ತೋಟದ ಮನೆಗೆ ಬಂದು ಪರಿಶೀಲನೆ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಕುಕ್ಕರ್, ಸೀರೆ ಹಂಚುವ ಬಗ್ಗೆ ಯಾಕೆ ಚುನಾವಣಾ ಆಯೋಗ ಕ್ರಮವಹಿಸುತ್ತಿಲ್ಲ. ಚುನಾವಣಾಧಿಕಾರಿಗಳು ಅವರ ಕೈಗೊಂಬೆ ಆಗಿರೋದು ಸ್ಪಷ್ಟವಾಗಿದೆ ಎಂದು ವಾಗ್ದಾಳಿ ನಡೆಸಿದರು.
ರಾಮನಗರದಲ್ಲಿ ಸುಮಾರು 3,700 ಸೀರೆ ಜಪ್ತಿ ಮಾಡಿದ್ದು ನಮ್ಮ ಕಾರ್ಯಕರ್ತರು. ಆಗ ಚುನಾವಣಾ ಆಯೋಗ, ಅಧಿಕಾರಿಗಳು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು.
ಸಾಮಾನ್ಯವಾಗಿ ಯುಗಾದಿ ಹಬ್ಬದಲ್ಲಿ ಹೊಸತೊಡಕು ಊಟ ಹಾಕುತ್ತೇವೆ. ನಮ್ಮ ತೋಟದ ಮನೆಯ 100 ರಿಂದ 150 ಮಂದಿ ಕೆಲಸಗಾರರಿಗೆ ಊಟದ ವ್ಯವಸ್ಥೆ ಮಾಡಿದ್ದೆವು. ಅಲ್ಲದೇ ಬಿಜೆಪಿ-ಜೆಡಿಎಸ್ ಮುಖಂಡರು ಸಹ ಊಟಕ್ಕೆ ಸೇರುವ ತೀರ್ಮಾನ ಮಾಡಿದ್ದೆವು. ಇಲ್ಲಿ ಯಾವುದೇ ಪಾರ್ಟಿ ಕಾರ್ಯಕ್ರಮ ಮಾಡುತ್ತಿರಲಿಲ್ಲ. ಸಾರ್ವಜನಿಕ ಸಮಾರಂಭ ಮಾಡುತ್ತಿರಲಿಲ್ಲ. ಕಾಂಗ್ರೆಸ್ ನವರ ರೀತಿಯ ಕುಕ್ಕರ್, ಸೀರೆ ಹಂಚುವ ಕಾರ್ಯಕ್ರಮ ನಮ್ಮದಲ್ಲ ಎಂದು ಹರಿಹಾಯ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


