nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    • ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
    • ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ
    • ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    • ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ
    • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು
    ರಾಜ್ಯ ಸುದ್ದಿ December 29, 2025

    ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು

    By adminDecember 29, 2025No Comments2 Mins Read
    congress

    ಸರಗೂರು:  ಈ ದೇಶದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಹಾಗೂ ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ ಏಳಿಗೆಗಾಗಿ ಶ್ರಮಿಸುತ್ತಾ ಸಮಾನ ಅವಕಾಶಗಳನ್ನು ಸೃಷ್ಟಿಸಿದ ಕಾಂಗ್ರೆಸ್ ಪಕ್ಷ. ಸ್ವಾತಂತ್ರ್ಯದ ನಂತರದಲ್ಲಿ ಅತ್ಯಂತ ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು ಎಂದರು.

    ಪಟ್ಟಣ ಪ್ರವಾಸಿ ಮಂದಿರದಲ್ಲಿ ಸೋಮವಾರ ದಂದು 140ನೇ ಕಾಂಗ್ರೆಸ್ ಪಕ್ಷದ ಸಂಸ್ಥಾಪನ ದಿನದ ಅಂಗವಾಗಿ ರಾಜ್ಯ ಹಾಗೂ ಜಿಲ್ಲಾ  ಅಧ್ಯಕ್ಷರ ಆದೇಶ ಮೇರೆಗೆ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಶಿವರಾಜ್ ಹಾಗೂ ಸರಗೂರು ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ರವರ ನೇತೃತ್ವದಲ್ಲಿ ಹಿರಿಯರಿಗೆ ಸನ್ಮಾನಿಸಿ ಮಾತನಾಡಿದರು.


    Provided by
    Provided by

    ಕಾಂಗ್ರೆಸ್ ಪಕ್ಷ ರಾಷ್ಟ್ರನಿರ್ಮಾಣದಲ್ಲಿ ನಿರ್ವಹಿಸಿದ ಪಾತ್ರ ಅನನ್ಯ. ಸ್ವಾತಂತ್ರ್ಯದ ಬಳಿಕ ದೇಶದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ ಎಂದರು.

    ಕಾಂಗ್ರೆಸ್ ಇಂದಿಗೂ ಬಡವರು, ಶೋಷಿತರು, ಅವಕಾಶ ವಂಚಿತರು ಸೇರಿದಂತೆ ದೇಶದ ನಾಗರಿಕರ ಧ್ವನಿಯಾಗಿದ್ದು, ಸಂವಿಧಾನ, ಪ್ರಜಾಪ್ರಭುತ್ವ ಆಶಯಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಭಾರತವನ್ನು ಮುಕ್ತಗೊಳಿಸಲು ಕಾಂಗ್ರೆಸ್ ಮಹನೀಯರ ತ್ಯಾಗ, ಬಲಿದಾನ ಸ್ಮರಣೀಯ ಎಂದು ಹೇಳಿದರು.

    ಸರಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮನುಗನಹಳ್ಳಿ ಮಾದಪ್ಪ ಮಾತನಾಡಿ ಅದರಲ್ಲೂ ದೇಶ ವಿಭಜನೆಯ ತಂತ್ರಗಳನ್ನು ಅನುಸರಿಸುತ್ತಾ ಸದಾ ದೇಶದೊಳಗೆ ಕ್ಷೋಭೆ ಹಾಗೂ ಅಶಾಂತಿಯನ್ನೇ ಉಂಟುಮಾಡಲು ಶ್ರಮಿಸುತ್ತಿದ್ದ ದುಷ್ಟ ಮನುವಾದಿಗಳ ನಿಯಂತ್ರಣಕ್ಕೆ ದೇಶವನ್ನು ಒಪ್ಪಿಸದೇ ಸುದೀರ್ಘ ಕಾಲ ದೇಶದ ಅಧಿಕಾರ ಚುಕ್ಕಾಣಿ ಹಿಡಿದು ಬಾಬಾ ಸಾಹೇಬರ ಸಂವಿಧಾನದ ನೆರವಿನಿಂದ ವ್ಯವಸ್ಥಿತವಾಗಿ ದೇಶದ ಮುನ್ನಡೆಗೆ ಕಾರಣವಾದ ಕಾಂಗ್ರೆಸ್ ಪಕ್ಷವು ನೂರೆಂಟು ಜನಪರ ಕಾಯ್ದೆಗಳ ಮೂಲಕ ಜನರ ಬದುಕಿನ ಹಿತ ಕಾಯುವಂತಹ ಕೆಲಸ ಮಾಡಿತು.

    60 ವರ್ಷಗಳ ತನ್ನ ಅಧಿಕಾರದ ಅವಧಿಯಲ್ಲಿ ಜನ ಸಮುದಾಯಗಳ ಸಮಾನ ಏಳಿಗೆಗಾಗಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಕಾಯ್ದೆಗಳು ಮತ್ತು ಯೋಜನೆಗಳು ಅಪಾರವಾಗಿತ್ತು. ಇನ್ನು 60 ವರ್ಷಗಳಲ್ಲಿ ಕಾಂಗ್ರೆಸ್ ಮಾಡಿದ ಕೆಲಸಗಳು ಬೆಟ್ಟದಷ್ಟು ಎಂದರು.

    ಪಪಂ ಸದಸ್ಯ ಶ್ರೀನಿವಾಸ.ಬ್ಲಾಕ್ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ಮಂಜುನಾಥ ಮಾತನಾಡಿದರು .

    ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ  ಅಧ್ಯಕ್ಷ ಚಲುವರಾಜು, ಮಂಜು, ತಿಮ್ಮಯ್ಯ, ಇದಿಯಪ್ಪ, ಹಿಬ್ರಾಹಿಂ,ಪಪಂ ಮಾಜಿ ಸದಸ್ಯ ರಂಗನಾಥ, ಮಾದೇವ, ಶಂಬುಲಿಂಗೆಗೌಡ್ರು, ಪುಟ್ಟಸ್ವಾಮಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ, ಬಿಲ್ಲಯ್ಯ, ಶ್ರೀನಿವಾಸ್, ಮಣಿಕಂಠ , ನಾಗೇಂದ್ರ ಮೊಳೆಯೂರು ಕಾವಲ್,ಕಳಸೂರು ಬಸವರಾಜ್, ಸಿದ್ದರಾಜು, ಚೈತ್ರ ಸ್ವಾಮಿ, ಮಫಿರುಲ್ಲಾ, ಮಹೇಶ್ ರವರು ಯಾಸಿನ್, ಮಹಮದ್ ಸೋಯಬ್ ಹಾಗೂ ಹಿರಿಯರು ಮುಖಂಡರು, ಯುವಕರು, ಪಕ್ಷದ ಕಾರ್ಯಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    Leave A Reply Cancel Reply

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಬೆಂಗಳೂರು: ರಾಜ್ಯದಲ್ಲಿ ವಿವಿಧ ಸಾರ್ವಜನಿಕ ಯೋಜನೆಗಳಿಗಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯಸಮ್ಮತ ಪರಿಹಾರ ಒದಗಿಸಲು ಆಸ್ತಿಗಳ ‘ಮಾರ್ಗಸೂಚಿ ದರ’ವನ್ನು (Guideline…

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026

    ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.