ಉತ್ತರಾಖಂಡ: ಅಧಿಕಾರದಿಂದ ಹೊರಗುಳಿದು 10 ವರ್ಷಗಳು ಕಳೆದ ಬಳಿಕ ದೇಶದಲ್ಲಿ ಕಿಚ್ಚು ಹೊತ್ತಿಸುವ ಮಾತನಾಡುತ್ತಾರೆ, ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡುವ ಮಾತೇ? ಎಂದು ಪ್ರಧಾನಿ ಮೋದಿ ವಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.
ಉತ್ತರಾಖಂಡದ ರುದ್ರಪುರದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ರಾಜ್ಯ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ನೀಡಿದ್ದ ದೇಶ ವಿಭಜನೆ ಹೇಳಿಕೆಯನ್ನು ಉಲ್ಲೇಖಿಸಿದ ಮೋದಿ, ಕರ್ನಾಟಕದ ಓರ್ವ ನಾಯಕ ದಕ್ಷಿಣ ಭಾರತವನ್ನು ದೇಶದಿಂದ ಬೇರ್ಪಡಿಸುವ ಬಗ್ಗೆ ಮಾತನಾಡುತ್ತಾರೆ. ಅಂತವರಿಗೆ ಶಿಕ್ಷೆ ನೀಡುವ ಬದಲು ಲೋಕಸಭೆ ಟಿಕೆಟ್ ನೀಡಿದ್ದಾರೆ. ಕಾಂಗ್ರೆಸ್ ಈ ದೇಶವನ್ನು ಅರಾಜಕತೆಗೆ ದೂಡಲು ಪ್ರಯತ್ನಿಸುತ್ತಿದೆ ಅವರನ್ನು ಈ ಬಾರಿ ಅಧಿಕಾರಕ್ಕೆ ಬರಲು ಬಿಡಬೇಡಿ ಎಂದು ಮೋದಿ ಅಬ್ಬರದ ಭಾಷಣ ಮಾಡಿದ್ದಾರೆ.
ಡಿ.ಕೆ. ಸುರೇಶ್ ಕೇಂದ್ರ ಸರ್ಕಾರವನ್ನು ಟೀಕಿಸುವ ಭರದಲ್ಲಿ, ‘ ಕರ್ನಾಟಕಕ್ಕೆ ಕೇಂದ್ರದಿಂದ ಸಾಕಷ್ಟು ಅನುದಾನ ಬರುತ್ತಿಲ್ಲ, ದಕ್ಷಿಣ ಭಾರತವನ್ನು ಪ್ರತ್ಯೇಕಿಸುವುದು ಬಿಟ್ಟು ಬೇರೆ ದಾರಿ ಕಾಣುತ್ತಿಲ್ಲ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದು ಈ ಹೇಳಿಕೆ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಮಾತನ್ನು ಇಂದು ಮೋದಿ ಮತ್ತೆ ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296