ಹಿರಿಯೂರು: ಕಾಂಗ್ರೆಸ್ ನಾಯಕರಲ್ಲಿ ಒಗ್ಗಟ್ಟಿಲ್ಲ ಎನ್ನುವ ಚರ್ಚೆಗಳ ನಡುವೆಯೇ, ಇದೀಗ ಕಾಂಗ್ರೆಸ್ ಕಾರ್ಯಕರ್ತರಿಗೆ, ಕಾಂಗ್ರೆಸ್ ಕಾರ್ಯಕರ್ತರೇ ಹಲ್ಲೆ ನಡೆಸಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ.
ಭಾರತದ ಮೊದಲ ಉಪ ಪ್ರಧಾನಿ ಮಂತ್ರಿಯಾದ ಜಗನ್ ಜೀವನ್ ರಾಂ ರವರ ಜಯಂತಿ ಕಾರ್ಯಕ್ರಮ ಈ ಬಾರಿ ಹಿರಿಯೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ನಾಯಕರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಫ್ಲೆಕ್ಸ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕಾಂಗ್ರೆಸ್ ಕಾರ್ಯಕರ್ತರೇ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಇದೀಗ ಘಟನೆ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.
ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸೋಮಶೇಖರ್ ಬಿ ಅವರ ಬ್ಯಾನರ್ ಹಾಗೂ ಫ್ಲೆಕ್ಸ್ ಕಟ್ಟಲಾಗಿದ್ದು, ಇದನ್ನು ವಿರೋಧಿಸಿದ ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿಗರಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ.ರಮೇಶ್, ಕಂದಿಕೆರೆ ಸುರೇಶ್ ಬಾಬು , ಗಿಡ್ಡೋಬನಹಳ್ಳಿ ಅಶೋಕ್ , ಸೋಮಶೇಖರ್ ಅವರ ಬ್ಯಾನರ್ ಹಾಗೂ ಫ್ಲಕ್ಸ್ ಕಟ್ಟುತ್ತಿದ್ದ ಅಸ್ಲಂಬಾಷ , ಅಬುಜಾರ್ ಗಫಾರ್, ಸೈಯದ್ ಅಕ್ರಂ ಭಾಷ ಇವರನ್ನು ಅವಾಚ್ಯ ಶಬ್ದಗಳಿಂದ ಬಯ್ದು, ಹಲ್ಲೆ ನಡೆಸಿ, ಬ್ಯಾನರ್ ಕಟ್ಟುವ ದೆಬ್ಬೆಯಿಂದ ಕೈಕಾಲು ಬೆನ್ನಿಗೆ ಅಮಾನುಷವಾಗಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಹಿರಿಯೂರು ನಗರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಗಾಯಾಳುಗಳ ದೂರಿನ ಮೇರೆಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ.
ವರದಿ: ಮುರುಳಿಧರನ್ ಆರ್., ಹಿರಿಯೂರು. (ಚಿತ್ರದುರ್ಗ – ದಾವಣಗೆರೆ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5