ಚಂಡೀಗಢ: ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ದುರಾಡಳಿತ, ಅಪರಾಧೀಕರಣ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.
ಹರಿಯಾಣ ವಿಧಾನಸಭೆ ಚುನಾವಣೆ ಹಿನ್ನೆಲೆ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಎರಡೂ ವರ್ಷಗಳಿಂದ ಅಧಿಕಾರಿದಲ್ಲಿದ್ದರೂ ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ಭರವಸೆಗಳನ್ನು ಈಡೇರಿಸಲು ಈವರೆಗೂ ಸಾಧ್ಯವಾಗಲಿಲ್ಲ. ಕಾಂಗ್ರೆಸ್ ನಾಯಕರು ಕೇವಲ ಹಗರಣಗಲ್ಲಿ ತೊಡಗಿದ್ದಾರೆ. ರೈತರ ಭೂಮಿಗಳನ್ನೂ ಕಬಳಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಯಾವ ಹಗರಣದಲ್ಲಿ ಭಾಗಿಯಾಗಿಲ್ಲ?, ಕಲ್ಲಿದ್ದಲು ಹಗರಣ, ಜಲಾಂತರ್ಗಾಮಿ ಹಗರಣ, ಅಕ್ಕಿ ಹಗರಣ, ಟ್ಯಾಂಕ್ ಹಗರಣ, ಹೆಲಿಕಾಪ್ಟರ್ ಹಗರಣ, 2-ಜಿ ಹಗರಣ ಸೇರಿದಂತೆ ಪ್ರತಿಯೊಂದು ಹಗರಣದಲ್ಲೂ ಭಾಗಿಯಾಗುವ ಮೂಲಕ ಭ್ರಷ್ಟಾಚಾರದಲ್ಲೇ ತೊಡಗಿದೆ ಎಂದು ವ್ಯಂಗ್ಯವಾಡಿದರು.
ಹತ್ತು ವರ್ಷಗಳ ಹಿಂದೆ ಭಾರತವನ್ನು ಭ್ರಷ್ಟ ರಾಷ್ಟ್ರ ಎಂದು ಕರೆಯಲಾಗಿತ್ತು, ಆದರೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತ ವಿಶ್ವದ ಆರ್ಥಿಕತೆಯಲ್ಲಿ 11ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿಕೆ ಕಂಡಿತ್ತು. ಮುಂಬರುವ ಕಾಲಘಟ್ಟದಲ್ಲಿ ಭಾರತವು ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಲಿದೆ ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296