ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಜವಾಹರ್ ಲಾಲ್ ನೆಹರೂ ಅವರಿಂದ ಹಿಡಿದು ರಾಜೀವ್ ಗಾಂಧಿವರೆಗೂ ಡಾ.ಬಿ.ಆರ್.ಅಂಬೇಡ್ಕರ್ ರವರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ಕೊಡಲಿಲ್ಲ. ಬಿ.ಆರ್. ಅಂಬೇಡ್ಕರ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೆಹರು, ರಾಜೀನಾಮೆಯಿಂದ ಏನೂ ನಷ್ಟವಿಲ್ಲ ಎಂದಿದ್ದರು ಎಂದು ಹೇಳಿದರು.
ಕಾಂಗ್ರೆಸ್ ನಾಯಕರು ಬಿ.ಆರ್. ಅಂಬೇಡ್ಕರ್ ಅವರನ್ನು ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿದರು. ಕಾಂಗ್ರೆಸ್ ಸುಡುವ ಪಕ್ಷ, ಅದರಲ್ಲಿ ದಲಿತರು ಹೋಗಬಾರದು ಅಂತ ಅಂಬೇಡ್ಕರ್ ಹೇಳಿದ್ದರು ಎಂದು ಪ್ರಹ್ಲಾದ್ ಜೋಷಿ ಹೇಳಿದರು.
ಕೆಲವು ದಲಿತ ಮುಖಂಡರಿಗೆ ಕಾಂಗ್ರೆಸ್ ಭ್ರಮೆ ಹುಟ್ಟಿಸಿದೆ, ದಲಿತರು ಕಾಂಗ್ರೆಸ್ನಿಂದ ದೂರ ಇದ್ದಷ್ಟು ಒಳ್ಳೆಯದು. ಕಾಂಗ್ರೆಸ್ ನವರು ಮೀಸಲಾತಿ ವಿರೋಧ ಮಾಡಿದ್ದರು. ಕಾಂಗ್ರೆಸ್ ಸದಾ ದಲಿತ ಸಮುದಾಯವನ್ನು ಕತ್ತಲಲ್ಲಿ ಇಟ್ಟಿದೆ ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx