ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಭಯದಿಂದಾಗಿ ಕಾಂಗ್ರೆಸ್ ಒಂದು ದೇಶ, ಒಂದು ಚುನಾವಣೆಯನ್ನು ವಿರೋಧಿಸ್ತಾ ಇದೆ ಅಂತ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ, ಒಂದು ಚುನಾವಣೆಯಿಂದ ತೆರಿಗೆದಾರರ ಹಣ ಉಳಿತಾಯವಾಗುತ್ತದೆ ಎಂದು ಅವರು ಹೇಳಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ, ಲೋಕಸಭೆ ಹೀಗೆ ಒಂದೊಂದು ಚುನಾವಣೆ ಒಮ್ಮೊಮ್ಮೆ ನಡೆದಾಗ ನೀತಿ ಸಂಹಿತೆ ಜಾರಿಯಾಗುತ್ತದೆ. ಇದರಿಂದಾಗಿ ಕಾಮಗಾರಿಗಳು ವಿಳಂಬವಾಗಿ ಸರ್ಕಾರ ಯಾವುದೇ ಯೋಜನೆಯನ್ನು ಸರಿಯಾಗಿ ಜಾರಿ ಮಾಡಲು ಸಾಧ್ಯವಾಗುವುದಿಲ್ಲ. ಹೊಸ ಕ್ರಮದಿಂದ ಈ ಸಮಸ್ಯೆ ನಿವಾರಣೆಯಾಗಲಿದೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q