nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಜ್ ಯಾತ್ರಿಕರು ಸಂಪೂರ್ಣ ಖರ್ಚು ವೆಚ್ಚವನ್ನು ತಾವೇ ಭರಿಸಿಕೊಳ್ಳಬೇಕಾಗಿದೆ: ಸಚಿವ ರಹೀಮ್ ಖಾನ್

    May 14, 2025

    ಕುಣಿಗಲ್:  ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್‌!: ಕೊಲೆ ನಡೆದಿರುವುದು ಬಯಲು

    May 14, 2025

    ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ: ಮೇ 20ರಂದು ಸಾಧನಾ ಸಮಾವೇಶ

    May 14, 2025
    Facebook Twitter Instagram
    ಟ್ರೆಂಡಿಂಗ್
    • ಹಜ್ ಯಾತ್ರಿಕರು ಸಂಪೂರ್ಣ ಖರ್ಚು ವೆಚ್ಚವನ್ನು ತಾವೇ ಭರಿಸಿಕೊಳ್ಳಬೇಕಾಗಿದೆ: ಸಚಿವ ರಹೀಮ್ ಖಾನ್
    • ಕುಣಿಗಲ್:  ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್‌!: ಕೊಲೆ ನಡೆದಿರುವುದು ಬಯಲು
    • ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ: ಮೇ 20ರಂದು ಸಾಧನಾ ಸಮಾವೇಶ
    • ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಬಿಡುಗಡೆ
    • ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
    • ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    • ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ
    • ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರ ಪರ ರೋಡ್ ನಡೆಸಿ ಸಚಿವ ಎಚ್.ಸಿ. ಮಹದೇವಪ್ಪ ಮತಯಾಚನೆ
    ರಾಜ್ಯ ಸುದ್ದಿ April 24, 2024

    ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರ ಪರ ರೋಡ್ ನಡೆಸಿ ಸಚಿವ ಎಚ್.ಸಿ. ಮಹದೇವಪ್ಪ ಮತಯಾಚನೆ

    By adminApril 24, 2024No Comments2 Mins Read
    saragooru

    ಸರಗೂರು: ಮಂಗಳವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುಪುತ್ರ ಸುನೀಲ್ ಬೋಸ್ ಪರ ರೋಡ್ ನಡೆಸಿ ಸಚಿವ ಎಚ್.ಸಿ. ಮಹದೇವಪ್ಪ ಮತಯಾಚನೆ ಮಾಡಿದರು.

    ಸರಗೂರು ಪಟ್ಟಣದ ಮಹಾವೀರ ಸರ್ಕಲ್ ಬಳಿ ಸಾಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ ಹಾಗೂ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಹೂವಿನ ಹಾರ ಹಾಕಿ ಹೂ ಚೆಲ್ಲಿ, ನಂತರ ರೋಡ್ ಶೋ ನಲ್ಲಿ ಒಂದನೇ ಮುಖ್ಯ ರಸ್ತೆ ಹಾಗೂ ಎರಡನೇ ಮುಖ್ಯ ಮೆರವಣಿಗೆ ಮೂಲಕ ಮತಯಾಚನೆ ಮಾಡಿ, ಸಂತೆ ಮಾಸ್ತಮ್ಮ ದೇವಸ್ಥಾನದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.


    Provided by

    ಈ ವೇಳೆ ಮಾತನಾಡಿದ ಅವರು, ನನ್ನನ್ನು ಹತ್ತಿರದಿಂದ ಬಲ್ಲ ಜನರಿಗೆ, ಎಲ್ಲರನ್ನೂ ಪ್ರೀತಿಸುವ ನನ್ನ ಸ್ವಭಾವ ಗೊತ್ತು. ಈ ಕ್ಷೇತ್ರಕ್ಕೆ ಒಳ್ಳೆಯ, ಅಭಿವೃದ್ಧಿ ಕೆಲಸಗಳನ್ನು ಮಾಡಬೇಕೆಂಬ ಉದ್ದೇಶ ಇಟ್ಟುಕೊಂಡಿದ್ದೇವೆ. ನಿಸ್ವಾರ್ಥವಾಗಿ ಸಂವಿಧಾನದ ಆಶಯಗಳಿಗೆ ಬದ್ಧನಾಗಿ ಕೆಲಸ ಮಾಡಬೇಕೆಂಬ ಆಶಯ ಹೊಂದಿದ್ದೇನೆ ಎಂದರು.

    ಬಿಜೆಪಿ ಸರ್ಕಾರದ ವೈಫಲ್ಯಗಳಿಂದ ಜನರು ಬಿಜೆಪಿ ಸರ್ಕಾರದ ವಿರೋದಿಯಾಗಿದ್ದಾರೆ.. ಬಡಜನರಿಗೆ ಅನ್ಯಾಯವಾಗಿದೆ. ಬಡವರ ಪರ ಮುಖ್ಯಮಂತ್ರಿಯವರ ಬಜೆಟ್, ಧ್ರುವ ನಾರಾಯಣ ಅವರ ಅವಧಿಯಲ್ಲಿ ದೊರೆತ ಕೇಂದ್ರ ಯೋಜನೆಗಳು, ಮತ ದಾರರು ಕಾಂಗ್ರೆಸ್ ಬಗ್ಗೆ ಇಟ್ಟಿರುವ ವಿಶ್ವಾಸದಿಂದ ಈ ಬಾರಿ ಚುನಾವಣೆಯನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಿದ್ದರಾಮಯ್ಯನವರು ಎರಡು ಬಾರಿ ಮುಖ್ಯಮಂತ್ರಿಯಾಗಿ ಜಿಲ್ಲೆಗೆ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ನೀಡಿದ್ದಾರೆ. ಲೋಕಸಭಾ ಸದಸ್ಯರಾಗಿದ್ದಆರ್. ಧ್ರುವನಾರಾಯಣ್ ಹಾಗೂ ನಾನು ಸೇರಿ ಎಚ್ ಡಿ ಕೋಟೆ ಮತ್ತು ಸರಗೂರು ತಾಲ್ಲೂಕಿಗೆ ಅಭಿವೃದ್ದಿಗೆ ಸಾಕಷ್ಟು ಕೆಲಸ ಮಾಡಿದ್ದೇವೆ. ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಭರವಸೆಗಳನ್ನು ಈಡೇರಿಸಿದ್ದಾರೆ. ಈ ಬಾರಿ ಐದು ಗ್ಯಾರಂಟಿಗಳನ್ನು ನೀಡಿ ಬಡವರ ಪರ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

    ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ ಬಿಜೆಪಿ ಸರ್ಕಾರ ಇದ್ದ ಸಮಯದಲ್ಲಿ ಒಂದು ರೂಪಾಯಿ ಅನುದಾನ ಕೊಡಲಿಲ್ಲ.ಬಿಜೆಪಿ ಪಕ್ಷದಿಂದ ತಾಲ್ಲೂಕಿಗೆ ಯಾವ ಕೊಡುಗೆ ದೊರೆತಿದೆ ಎಂಬುದನ್ನು ಮತದಾರರು ಅರ್ಥ ಮಾಡಿಕೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 5 ಗ್ಯಾರಂಟಿ ಗಳನ್ನು ಈಡೇರಿಸಿದ್ದಾರೆ.  ಹಾಗಾಗಿ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮತದಾರ ಬಂಧುಗಳಲ್ಲಿ ಸಚಿವ ಎಚ್ ಸಿ ಮಹದೇವಪ್ಪ ಮನವಿ ಮಾಡಿದರು. ರೋಡ್ ಶೋ ನಲ್ಲಿ ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ ಹಾಗೂ ಸಾಮಾಜದ ಬಂಧುಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದರು.

    ಈ ಸಂದರ್ಭದಲ್ಲಿ  ಮಾಜಿ ಜಿಪಂ ಸದಸ್ಯರು ಪಿ ರವಿ ಚಿಕ್ಕವೀರನಾಯಕ, ಭಾಗ್ಯಲಕ್ಷ್ಮಿ, ನಂದಿನಿ, ಟೌನ್ ಅಧ್ಯಕ್ಷ ನಾಗರಾಜು, ಪುರಸಭೆ ಸದಸ್ಯ ಎಚ್ ಸಿ ನರಸಿಂಹಮೂರ್ತಿ, ಮಾಜಿ ಸಚಿವ ಎಂ ಶಿವಣ್ಣ,  ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಬಿರ್ವಾಳ್ ಬಸವರಾಜು,ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ಬಿರ್ವಾಳ್ ಚಿಕ್ಕಣ್ಣ, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು,,ಪಪಂ ಸದಸ್ಯರು ಶ್ರೀನಿವಾಸ ಚಲುವಕೃಷ್ಣ, ಬಾಬು ಜಗಜೀವನರಾಂ ವಿಚಾರ ವೇದಿಕೆ ಅಧ್ಯಕ್ಷ ಕಲ್ಲಂಬಾಳು ನಾಗಣ್ಣ, ಪುಟ್ಟಸ್ವಾಮಿ, ಹಾದನೂರು ಪ್ರಕಾಶ್,ಮೈ ಮುಲ್ ನಿರ್ದೇಶಕ ಈರೇಗೌಡ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಹೂವಿನಕೊಳ ಸಿದ್ಧರಾಜು, ಎಪಿಎಂಸಿ ಅಧ್ಯಕ್ಷ ದೇವಲಾಪುರ ಸಿದ್ದರಾಜು, ಟೌನ್ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ಮಂಜುನಾಥ,ಮುಖಂಡರು ಸೀತಾರಾಮ್,ಅಣ್ಣಯ್ಯ ಸ್ವಾಮಿ,ಶಂಭುಲಿಂಗನಾಯಕ, ಪುರದಕಟ್ಟೆ ಬಸವರಾಜು ಗುರುಸ್ವಾಮಿ,ಎಸ್ಎಸ್ ಪ್ರಭುಸ್ವಾಮಿ, ಕೆಂಡಗಣ್ಣಸ್ವಾಮಿ, ರಮೇಶ್ ರಂಗನಾಥ, , ಸುಭಾನ್ ಮರಿದೇವಯ್ಯ,ಗ್ರಾಮೀಣ ಮಹೇಶ್, ಪ್ರಕಾಶ್ ಚಂದ್ರ, ಜಯಕುಮಾರ್, ಮಣಿ, ಉಯ್ಯಂಬಳ್ಳಿ ನಾಗರಾಜು, ಮಂಜುನಾಥ್, ಚನ್ನಿಪುರ ನಾಗರಾಜು, ಮಣಿಕಂಠ, ಲೋಕೇಶ್, ಮಸಹಳ್ಳಿ ಸೂರ್ಯ, ಮಹೇಶ್, ಇನ್ನೂ ಮುಖಂಡರು ಸೇರಿದಂತೆ ಹಾಗೂ ಕಾರ್ಯಕರ್ತರು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ: ಮೇ 20ರಂದು ಸಾಧನಾ ಸಮಾವೇಶ

    May 14, 2025

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025
    Our Picks

    ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಬಿಡುಗಡೆ

    May 14, 2025

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಜ್ ಯಾತ್ರಿಕರು ಸಂಪೂರ್ಣ ಖರ್ಚು ವೆಚ್ಚವನ್ನು ತಾವೇ ಭರಿಸಿಕೊಳ್ಳಬೇಕಾಗಿದೆ: ಸಚಿವ ರಹೀಮ್ ಖಾನ್

    May 14, 2025

    ತುಮಕೂರು: ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದ ಸಂದರ್ಭದಲ್ಲಿ ಹಜ್ ಯಾತ್ರಿಗಳಿಗೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ…

    ಕುಣಿಗಲ್:  ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್‌!: ಕೊಲೆ ನಡೆದಿರುವುದು ಬಯಲು

    May 14, 2025

    ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ: ಮೇ 20ರಂದು ಸಾಧನಾ ಸಮಾವೇಶ

    May 14, 2025

    ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಬಿಡುಗಡೆ

    May 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.