nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ

    April 27, 2026

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ
    • ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    • ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ
    • ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ
    • ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ
    • ತುಮಕೂರು: ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಡೋಪಿಂಗ್ ಶಂಕೆ; ಶೌಚಾಲಯದಲ್ಲಿ ಸಿರಿಂಜ್ ಪತ್ತೆ!
    • ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ
    • ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಜಿಹಾದಿ ಮಾನಸಿಕತೆಯಲ್ಲಿ ಉನ್ಮಾದ: ಸಿ.ಟಿ.ರವಿ
    ರಾಜ್ಯ ಸುದ್ದಿ July 11, 2023

    ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಜಿಹಾದಿ ಮಾನಸಿಕತೆಯಲ್ಲಿ ಉನ್ಮಾದ: ಸಿ.ಟಿ.ರವಿ

    By adminJuly 11, 2023No Comments2 Mins Read
    c t ravi

    ಬೆಂಗಳೂರು: ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಜಿಹಾದಿ ಮಾನಸಿಕತೆಯಲ್ಲಿ ಉನ್ಮಾದ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಆರೋಪಿಸಿದರು.

    ಟಿ-ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ, ಹನುಮ ಜಯಂತಿ ಕಾರ್ಯಕ್ರಮದ ಸಂಚಾಲಕ ವೇಣುಗೋಪಾಲ್ ಅವರನ್ನು ಹತ್ಯೆ ಮಾಡಿದ ಸ್ಥಳಕ್ಕೆ ಸತ್ಯಶೋಧನಾ ಸಮಿತಿಯ ಸದಸ್ಯರ ಜೊತೆ ಇಂದು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಕುಟುಂಬದವರಿಗೆ ಸಾಂತ್ವನ ಹೇಳಿದರು. ಅಲ್ಲದೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮತ್ತು ಶಾಸಕ ಮಹಾದೇವಪ್ಪ ಅವರು ಸಾಂತ್ವನ ನುಡಿ ಹೇಳಿಲ್ಲವೇಕೆ ಎಂದು ಆಕ್ಷೇಪಿಸಿದರು. ಇವರು ತುಟಿ ಬಿಟ್ಟಿಲ್ಲ. ಇದು ಆಘಾತಕರ ಸಂಗತಿ ಎಂದು ನುಡಿದರು. ಅವರಿಗೆ ಕೇಸರಿ ಕಂಡರೆ ಆಗದೆ ಇರುವ ಮಾನಸಿಕತೆ ಇದಕ್ಕೆ ಕಾರಣ ಇರಬಹುದು ಎಂದು ತಿಳಿಸಿದರು.


    Provided by
    Provided by

    ಸಾವನ್ನು ಖಂಡಿಸುವ, ಸಾವಿನ ಕುಟುಂಬದ ಜೊತೆ ನಿಲ್ಲುವುದರಿಂದಲೂ ಇವರು ದೂರ ಆದರೇ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಸಿದ್ದರಾಮಯ್ಯರ ನೆರೆಯ ಕ್ಷೇತ್ರವಿದು ಎಂದು ತಿಳಿಸಿದರು. ವೇಣುಗೋಪಾಲ್ ಕೇಸರಿಯ ನೇತೃತ್ವ ವಹಿಸಿದ್ದ ಎಂಬ ಮಾನಸಿಕತೆ ಇದಕ್ಕೆ ಕಾರಣವಿರಬಹುದು ಎಂದು ತಿಳಿಸಿದರು.

    ನಾವು ವೇಣುಗೋಪಾಲ್ ಕುಟುಂಬದ ಜೊತೆ ನಿಲ್ಲಲಿದ್ದೇವೆ. ಹತ್ಯೆ ಮಾಡಿದವರಿಗೆ ಶಿಕ್ಷೆ ಆಗಬೇಕೆಂದು ವೇಣುಗೋಪಾಲ್ ಕುಟುಂಬದವರು ಒತ್ತಾಯಿಸಿದ್ದಾರೆ ಎಂದು ತಿಳಿಸಿದರು. ಹತ್ಯೆ ಹಿಂದಿರುವವರಿಗೆ ಬಲಾಢ್ಯರ ಜೊತೆ ಸಂಪರ್ಕ ಇದೆ ಮತ್ತು ಪ್ರಕರಣವನ್ನು ದುರ್ಬಲಗೊಳಿಸುವ ಅಪಾಯವನ್ನು ವ್ಯಕ್ತಪಡಿಸಿದ್ದಾರೆ ಎಂದರು.

    ಚಿಕ್ಕೋಡಿಯ ಜೈನ ಮುನಿಗಳ ಹತ್ಯೆ ವಿಚಾರದಲ್ಲೂ ಬಡ್ಡಿ ವ್ಯವಹಾರ ಎಂಬ ಸುದ್ದಿಯನ್ನು ಹರಿಯಬಿಟ್ಟು ವಿಷಯಾಂತರ ಮಾಡುವ ಯತ್ನ ನಡೆದಿದೆ. ಬೊಗಸೆಯಲ್ಲಿ ದಿನಕ್ಕೆ ಒಮ್ಮೆ ಊಟ ಮಾಡುವ ಸ್ವಾಮೀಜಿ ಬಡ್ಡಿ ವ್ಯವಹಾರ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು. ಜೈನ ಸನ್ಯಾಸ ಎಂಬುದು ಅತ್ಯಂತ ಕಠಿಣಾತಿಕಠಿಣ ಎಂದು ವಿವರಿಸಿದರು. ಹಸನ್ ದಲಾಯತ್ ಹೆಸರನ್ನು ಒತ್ತಡ ಬಂದ ಬಳಿಕ ಎಫ್‍ಐಆರ್‍ನಲ್ಲಿ ಸೇರಿಸಿದ್ದಾರೆ. ಅದಕ್ಕೆ ಮೊದಲು ನಾರಾಯಣ ಮಾಳಿ ಹೆಸರನ್ನು ಮಾತ್ರ ಉಲ್ಲೇಖಿಸಿದ್ದರು ಎಂದು ಅವರು ತಿಳಿಸಿದರು.

    ದನಗಳ್ಳ ಕಬೀರ್ ಪೊಲೀಸ್ ಎನ್‍ಕೌಂಟರ್‍ನಲ್ಲಿ ಸತ್ತಿದ್ದ. ಕಬೀರ್‍ಗೆ ಸರಕಾರ ಪರಿಹಾರ ಕೊಟ್ಟಿದೆ. ಎನ್‍ಕೌಂಟರ್ ಮಾಡಿದ ಪೊಲೀಸನನ್ನು ಸರಕಾರ ಜೈಲಿಗೆ ಹಾಕಿತ್ತು. ಈ ಮೂಲಕ ತಾನು ಕ್ರಿಮಿನಲ್ ಪರ ಎಂದು ಕಾಂಗ್ರೆಸ್ ಸರಕಾರ ಸಾಬೀತುಪಡಿಸಿತ್ತು ಎಂದು ಆರೋಪಿಸಿದರು. ಮಾನವೀಯತೆ ಸತ್ತ ಸ್ಥಿತಿಯಲ್ಲಿ ಈ ಸರಕಾರ ಇದೆ. ತುಷ್ಟೀಕರಣದ ಪರಮಾವಧಿಗೆ ತಲುಪಿದೆ ಎಂದು ಟೀಕಿಸಿದರು. ಸರಕಾರದ ಸಂದೇಶದಿಂದ ತಾಲಿಬಾನಿಗಳು ಮತ್ತೆ ಎದ್ದು ನಿಲ್ಲುವಂತಾಗಿದೆ ಎಂದು ನುಡಿದರು.

    ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಅಶ್ವತ್ಥನಾರಾಯಣ್, ಶಾಸಕರಾದ ಶ್ರೀವತ್ಸ, ಮಾಜಿ ಸಚಿವ ಎನ್ ಮಹೇಶ್, ಬಿಜೆಪಿ ನಾಯಕರಾದ ಶ್ರೀಮತಿ ಮಂಗಳಾ ಸೋಮಶೇಖರ್, ಮೈ.ವಿ.ರವಿಶಂಕರ್ ಸೇರಿದಂತೆ ಬಿಜೆಪಿ ಮುಖಂಡರು ನಿಯೋಗದಲ್ಲಿ ಇದ್ದರು. ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ವೇಣುಗೋಪಾಲ್ ಅವರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಸರ್ವ ಪ್ರಯತ್ನ ಮಾಡುವುದಾಗಿ ಸತ್ಯ ಶೋಧನಾ ಸಮಿತಿಯ ಪರವಾಗಿ ಭರವಸೆ ನೀಡಲಾಯಿತು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ

    April 27, 2026

    ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಬೆನಕನಹಳ್ಳಿ–ಮಿಡಿಗೇಶಿ ರಸ್ತೆಯ ಸಮೀಪವಿರುವ ಹೊಂಡಕ್ಕೆ ಬಿದ್ದು ಅಕ್ಕ ಮತ್ತು ತಮ್ಮ ಸಾವನ್ನಪ್ಪಿರುವ ಧಾರುಣ ಘಟನೆ…

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.