ತುಮಕೂರು: ಸದನದ ಕಲಾಪ ವ್ಯರ್ಥ ಮಾಡಿದ ಕಾಂಗ್ರೆಸ್ ಹಾಗೂ ಹರ್ಷ ಹತ್ಯೆ ಖಂಡಿಸಿ ತುಮಕೂರು ನಗರದ ಟೌನ್ ಹಾಲ್ ಸರ್ಕಲ್ ನಲ್ಲಿ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಜ್ಯೋತಿ ಗಣೇಶ್, ಕಾಂಗ್ರೆಸ್ ನವರು ಕೇವಲ ತಮ್ಮ ಒಂದು ಹುಳುಕನ್ನು ಮರೆಮಾಚಲು ಅಮೂಲ್ಯವಾದ ಕಾರ್ಯಕಲಾಪಗಳ ಸಮಯವನ್ನು ನುಂಗಿಹಾಕಿ ಮಂಗಳವಾರ ಮತ್ತು ಬುಧವಾರದಿಂದ ಗಲಾಟೆಯನ್ನು ಮಾಡಿ ಕಲಾಪವನ್ನು ಹಾಳುಮಾಡುತ್ತಿದ್ದಾರೆ. ದೇಶದ ರಾಜ್ಯದ ಮತ್ತು ಜನರ ಕಷ್ಟಗಳನ್ನು ಚರ್ಚೆ ಮಾಡುವುದಕ್ಕೆ ಅವಕಾಶ ಕೊಡದೆ ಅಂಬೇಡ್ಕರ್ ಕೊಟ್ಟ ಸಂವಿಧಾನವನ್ನು ವಿರೋಧವಾಗಿ ಕಾಂಗ್ರೆಸ್ ವರ್ತಿಸುತ್ತಿದೆ. ಹಿಜಾಬಿನ ವಿಚಾರವನ್ನು ಮರೆಮಾಚಲು ಕೋರ್ಟಿನ ಮಧ್ಯಾಂತರ ಆದೇಶ ಇದ್ದರೂ ಕೂಡ ಎಲ್ಲೋ ಒಂದು ಕಡೆ ರಿವರ್ಸ್ ಆಗುತ್ತದೆ ಎಂದು ಹೇಳಿ ಈ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಈಶ್ವರಪ್ಪನವರ ಹೇಳಿಕೆ ಇಟ್ಟುಕೊಂಡು ಐದಾರು ದಿವಸಗಳಿಂದ ಸದನವನ್ನು ಹಾಳುಮಾಡುತ್ತಿದ್ದಾರೆ. ರಾಷ್ಟ್ರಧ್ವಜದ ಬಗ್ಗೆ ಬಿಜೆಪಿಗೆ ಯಾರು ಕೂಡ ಪಾಠ ಕಲಿಸಿ ಕೊಡಬೇಕಾಗಿಲ್ಲ. ಹಿಜಾಬ್ ವಿಚಾರದಲ್ಲಿ ಇವರು ಮಾಡಿದಂತಹ ತರ್ಲೆಯಿಂದ ರಾಜ್ಯಾದ್ಯಂತ ಹೊತ್ತಿ ಉರಿಯುತ್ತಿದೆ. ಈ ಒಂದು ಉರಿಯಿಂದ ನಮ್ಮ ಒಬ್ಬ ಕಾರ್ಯಕರ್ತ ಹರ್ಷನ ಕಗ್ಗೊಲೆಯಾಗಿದೆ. ಇದಕ್ಕೆ ನೇರ ಕಾರಣ ಕಾಂಗ್ರೆಸ್ ಎಂದು ಹೇಳಿದರೆ ತಪ್ಪಾಗಲಾರದು ಎಂದು ಅವರು ಹೇಳಿದರು.
ವರದಿ: ಎ.ಎನ್. ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB