ತುಮಕೂರು: ಜಿಲ್ಲೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಸಿ.ಎಸ್.ಪುರ ಗ್ರಾಮದಲ್ಲಿ ತುರುವೇಕೆರೆ ಬ್ಲಾಕ್ ಕಾಂಗ್ರೆಸ್ ಹಾಗೂ ಸಿ.ಎಸ್.ಪುರದ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜು ರವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಯುವಶಕ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮ ಬಾಣಸಂದ್ರದ ಲಕ್ಷ್ಮೀದೇವಮ್ಮ ರವರ ಪ್ರಾರ್ಥನೆಯಿಂದ ಪ್ರಾರಂಭವಾಯಿತು. ತುರುವೇಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಯುವ ಮುಖಂಡರುಗಳನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು.
ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಪ್ರಾರಂಭವಾಯಿತು. ಪ್ರಾಸ್ತಾವಿಕವಾಗಿ ಯುವ ಮುಖಂಡ ನಂಜಪ್ಪ ಮಾತನಾಡಿ, ಸ್ವಾತಂತ್ರ ನಂತರ ಹಸಿವು ಮುಕ್ತ ಭಾರತ, ಸಾಕ್ಷರ ಭಾರತ, ನಿರುದ್ಯೋಗ ಸಮಸ್ಯೆಯನ್ನು ಎದುರಿಸಿ ಶಿಕ್ಷಣ ವಂಚಿತರಿಗೆ ಶಿಕ್ಷಣ ದೊರಕಿಸಿ, ಈ ಎಲ್ಲಾ ಕಾರ್ಯಕ್ರಮಗಳು ಕೊಟ್ಟಂತ ಸರ್ಕಾರ ನಮ್ಮ ಕಾಂಗ್ರೆಸ್ ಸರ್ಕಾರ. ಆದ್ದರಿಂದ ಮುಂದಿನ ದಿನಗಳಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದು ಉತ್ತಮ ಯೋಜನೆಗಳನ್ನು ಕೊಡುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು.
ರಾಜ್ಯ ಯುವ ಕಾರ್ಯದರ್ಶಿ ಇಲ್ಲಾಯಿ ಸಿಕಂದರ್ ಮಾತನಾಡಿ, ಕೇಂದ್ರ ಸರ್ಕಾರ ಯುವಕರನ್ನ ಓಲೈಸಿ, ಇಲ್ಲಸಲ್ಲದ ಆಸೆಗಳನ್ನು ಹುಟ್ಟಿಸಿ ಅನ್ಯಾಯ ಮಾಡುತ್ತಿದೆ. 2013ರ ಚುನಾವಣೆಯಲ್ಲಿ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಸುಳ್ಳು ಭರವಸೆ ನೀಡಿದ್ದರು. ಆದರೆ ಇವರಿಗೆ ಯಾವುದೇ ಉದ್ಯೋಗವನ್ನು ನೀಡದೆ ಪಕೋಡ ಮಾಡುವ ಸ್ಥಿತಿಗೆ ತಂದಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಂತರ ಕೆಪಿಸಿಸಿ ವಕ್ತಾರ ನಿಕೇತರಾಜ್ ಮೌರ್ಯ ಅವರು ಮಾತನಾಡಿ, ಸಿ,ಎಸ್.ಪುರದಲ್ಲಿ ಕಾಂಗ್ರೆಸ್ ಯುವ ಶಕ್ತಿ ಕಾರ್ಯಕ್ರಮ ಮಾಡುತ್ತಿರುವುದು ರಾಜ್ಯದಲ್ಲೇ ಮೊದಲ ಬಾರಿಗೆ ಇದು ಇತಿಹಾಸವಾಗಲಿದೆ. ಇಂತಹ ಕಾರ್ಯಕ್ರಮ ಮಾಡಿದ ಮೊಬೈಲ್ ಕಾಂತರಾಜ್ ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದರು.
ಅಧ್ಯಕ್ಷೀಯ ಭಾಷಣ ಮಾಡಿದ ಬೆಮೆಲ್ ಕಾಂತರಾಜು, ನೆಲಮಂಗಲ ನನ್ನ ಜನ್ಮ ಭೂಮಿ , ತುರುವೇಕೆರೆ ನನ್ನ ಕರ್ಮಭೂಮಿ. ನನ್ನ ಕೈಲಾದಷ್ಟು ಸಾಮಾಜಿಕ ಸೇವೆ ಮಾಡಲು ತುರುವೇಕೆರೆ ವಿಧಾನಸಭಾ ಕ್ಷೇತ್ರಕ್ಕೆ ಬಂದಿದ್ದೇನೆ. ನನಗೆ ನನ್ನನ್ನು ಆಶೀರ್ವದಿಸಿ, ಬೇರೆ ಪಕ್ಷಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಒಂದು ಸಾವಿರ ಜನ ನನ್ನ ಬೆಂಬಲಕ್ಕೆ ನಿಂತಿದ್ದೀರಿ. ನನಗೆ ಯಾವುದೇ ಆಸೆಗಳು ಇಲ್ಲ. ಜನಸೇವೆಯೇ ನನ್ನ ಬದುಕು. ಹಣ ಮಾಡಲು ನಾನು ಇಲ್ಲಿಗೆ ಬಂದಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದ ಚುಕ್ಕಾಣಿ ಹಿಡಿಯಲು ನಾನು ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಶ್ರಮಿಸುತ್ತಿದ್ದೇನೆ. ನಿಮ್ಮ ಬೆಂಬಲ ಸಹಕಾರ ಹೀಗೆ ಇರಲಿ. ಎಲ್ಲರಿಗೂ ಧನ್ಯವಾದಗಳು ಎಂದರು.
ಈ ಕಾರ್ಯಕ್ರಮದಲ್ಲಿ ಗೋಣಿ ತುಮಕೂರು, ಲಕ್ಷ್ಮಿಕಾಂತ್, ನಾಗೇಶ್, ರೇವಣ್ಣ ಟಿ.ಹೆಚ್., ಗುರುದತ್ತ್ ಮಹಿಳಾ ಘಟಕದ ಲಲಿತಮ್ಮ, ಶಶಿಕಲಾ, ನಂಜಪ್ಪ, ವಿಜಯ್, ವಿನುತಾ, ಚಂದನ್, ಮನೋಜ್, ಪಾಂಡು, ಯತೀಶ್, ಪವಿತ್ರ, ಕಾರ್ತಿಕ್ ಮುಂತಾದವರು ಹಾಜರಿದ್ದರು.
ವರದಿ: ಸುರೇಶ್ ಬಾಬು, ತುರುವೇಕೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB