nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ

    November 26, 2025

    ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ

    November 26, 2025

    ನ.27: ಬೆಳ್ಳಾವಿಯಲ್ಲಿ ಶ್ರೀ ಕನಕದಾಸರ ಜಯಂತಿ: ಕನ್ನಡ ರಾಜ್ಯೋತ್ಸವ

    November 26, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ
    • ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ
    • ನ.27: ಬೆಳ್ಳಾವಿಯಲ್ಲಿ ಶ್ರೀ ಕನಕದಾಸರ ಜಯಂತಿ: ಕನ್ನಡ ರಾಜ್ಯೋತ್ಸವ
    • ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ
    • ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
    • ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
    • ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
    • ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಲ ಮೂಲ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಮತ
    ತಿಪಟೂರು February 11, 2024

    ಜಲ ಮೂಲ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಮತ

    By adminFebruary 11, 2024No Comments2 Mins Read
    veerendra hegade

    ತಿಪಟೂರು: ಜಲಮೂಲಗಳ ಸಂರಕ್ಷಣೆ ಅತ್ಯಂತ ಮಹತ್ವವಾದದ್ದು, ಜಲವಿಲ್ಲದಿದ್ದರೆ ಬದುಕಲು ಅಸಾಧ್ಯ ಹಾಗಾಗಿ ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

    ತಿಪಟೂರು ತಾಲೂಕಿನ ಸುಕ್ಷೇತ್ರ ಕೆರಗೋಡಿ- ರಂಗಾಪುರ ಶ್ರೀ ಮಠದ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ನಮ್ಮೂರು ನಮ್ಮ ಕೆರೆ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಮಾಡಲಾದ 610 ನೇ ಕೆರೆ ಹಸ್ತಾಂತರ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


    Provided by
    Provided by

    ಜಲ ಇಲ್ಲದೆ ಯಾರೊಬ್ಬರೂ ಬದುಕಲು ಸಾಧ್ಯವಿಲ್ಲ ಅಗ್ನಿ ವಾಯು ಕೂಡ ಮುಖ್ಯ ಆದರೆ ನಾವು ಮುಖ್ಯವಾದವುಗಳನ್ನೇ ಮರೆಯುತ್ತಿದ್ದೇವೆ. 2022 ರಲ್ಲಿ ಉಂಟಾದ ಅತಿವೃಷ್ಟಿಯನ್ನು ನಾವೆಲ್ಲರೂ ನಮ್ಮ ಕಣ್ಣೆದುರೇ ನೋಡಿದ್ದೇವೆ. ಕೆರೆ ಕುಂಟೆಗಳು ಕಾಲುವೆಗಳು ಸರಿಯಾಗಿದ್ದರೆ ನೀರು ಸರಿಯಾಗಿ ಹರಿಯುತ್ತದೆ ಅದರಿಂದ ಕೆರೆಕುಂಟೆ ಗಳ ಉಳಿವಿಗೆ ಸಂಸ್ಥೆಯ ಯೋಜನೆಯ ಮೂಲಕ ಕಾರ್ಯಕ್ರಮವನ್ನು ರೂಪಿಸಿದ್ದು ಇದಕ್ಕೆ ಗ್ರಾಮಸ್ಥರ ಸಹಕಾರವು ಮುಖ್ಯ ಎಂದರು.

    ಗ್ರಾಮದ ಕೆರೆ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಹಲವಡೆ ಕೆರೆ ಅಭಿವೃದ್ಧಿ ಮಾಡಿದ ಬಳಿಕ ಕೆರೆ ಏರಿ ಮೇಲೆ ಹಸು ಕರುಗಳನ್ನು ಕಟ್ಟಿ ಹಾಕುವುದನ್ನು ನಾನು ನೋಡಿದ್ದೇನೆ ಇದರಿಂದ ಮಾಡಿದ ಕೆಲಸ ಸಾರ್ಥಕ ಆಗುವುದಿಲ್ಲ ನಿಮ್ಮೂರಿನ ಕೆರೆಯನ್ನು ನೀವೇ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ತಿಳಿಸಿದರು.

    veerendra hegade

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಈವರೆಗೆ ರಾಜ್ಯಾದ್ಯಂತ 672 ಕೆರೆಗಳನ್ನು ಅಭಿವೃದ್ಧಿ ಮಾಡಿದ್ದು ತುಮಕೂರು ಜಿಲ್ಲೆಯಲ್ಲಿ ಈವರೆಗೆ 53 ಕೆರೆಗಳನ್ನು ಅಭಿವೃದ್ಧಿ ಮಾಡಿದ್ದು ತಿಪಟೂರು ತಾಲೂಕಿನಲ್ಲಿ ಈವರೆಗೆ 7 ಕೆರೆಗಳನ್ನು ಅಭಿವೃದ್ಧಿ ಮಾಡಿರುವ ಹೆಗ್ಗಳಿಕೆ ಸಂಸ್ಥೆಗೆ ಸಲ್ಲುತ್ತದೆ.

    ಸಂಸ್ಥೆಯಿಂದ ದೊರೆಯುವ ಎಲ್ಲಾ ಪ್ರಯೋಜನಗಳನ್ನು ಎಲ್ಲರೂ ಪ್ರಾಮಾಣಿಕತೆಯಿಂದ ಬಳಸಿಕೊಂಡು ಎಲ್ಲರೂ ಅಭಿವೃದ್ಧಿ ಕಾಣಲೆಂದು ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಎಲ್ಲರಿಗೂ ಶುಭ ಹಾರೈಕೆ ಮಾಡಿದರು.

    ಈ ಸಂದರ್ಭದಲ್ಲಿ ಸುಕ್ಷೇತ್ರ ಕೆರಗೋಡಿ ರಂಗಾಪುರ ಮಠದ ಶ್ರೀ ಶ್ರೀ ಗುರು ಪರದೇಶಿ ಕೇಂದ್ರ ಮಹಾ ಸ್ವಾಮೀಜಿ  ಗಳು ಮಾತನಾಡಿ, ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಶ್ರೀಮಠಕ್ಕೆ ಆಗಮಿಸಿರುವುದು ನಮ್ಮೆಲ್ಲರ ಪುಣ್ಯ ಧರ್ಮಸ್ಥಳ ಸಂಸ್ಥೆ ವತಿಯಿಂದ ಮಠದ ಆವರಣದಲ್ಲಿ ಕೆರೆಯ ಹೂಳೆತ್ತುವ ಕೆಲಸ ಮಾಡಿ ಕೆರೆಯನ್ನು ಅಭಿವೃದ್ಧಿ ಮಾಡಿ ನೀಡಿದ್ದು ಇದರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಸಂಸ್ಥೆಯು ಸರ್ಕಾರ ಮಾಡದ ಕೆಲಸಗಳನ್ನು ಮಾಡುತ್ತಿದ್ದು ಸಂಸ್ಥೆಗೆ ಚಿರಋಣಿ ಎಂದು ಹರ್ಷವನ್ನು ವ್ಯಕ್ತಪಡಿಸಿದ್ದರು.

    ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಳೀಯ ಯೋಜನಾಧಿಕಾರಿಗಳಾದ ಉದಯ್ ಕೆ,ಮಠದ ಪದಾಧಿಕಾರಿಗಳು, ಕೆರೆ ಸಮಿತಿ ಅಧ್ಯಕ್ಷರಾದ ಮನೋಹರ್, ಕೆರೆ ಸಮಿತಿಯ ಪದಾಧಿಕಾರಿಗಳು ಊರಿನ ಗ್ರಾಮಸ್ಥರು, ಸಂಸ್ಥೆಯ ಕಾರ್ಯಕರ್ತರು ಹಾಜರಿದ್ದರು.

    ವರದಿ: ಆನಂದ್ ತಿಪಟೂರು

    admin
    • Website

    Related Posts

    ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ

    November 26, 2025

    ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ

    November 24, 2025

    ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ,  ಕಲಾತಂಡಗಳ ಮೆರುಗು

    November 21, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ

    November 26, 2025

    ತುಮಕೂರು:   ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು…

    ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ

    November 26, 2025

    ನ.27: ಬೆಳ್ಳಾವಿಯಲ್ಲಿ ಶ್ರೀ ಕನಕದಾಸರ ಜಯಂತಿ: ಕನ್ನಡ ರಾಜ್ಯೋತ್ಸವ

    November 26, 2025

    ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ

    November 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.