nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ದಿನ ಮಹತ್ವದ್ದು: ಎಸ್.ಡಿ.ಸಣ್ಣಸ್ವಾಮಿ
    ಜಿಲ್ಲಾ ಸುದ್ದಿ November 26, 2024

    ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ದಿನ ಮಹತ್ವದ್ದು: ಎಸ್.ಡಿ.ಸಣ್ಣಸ್ವಾಮಿ

    By adminNovember 26, 2024No Comments2 Mins Read
    samvidhan dina

    ಸರಗೂರು: ತಾಲೂಕಿನ ಪಟ್ಟಣದ ನಾಲ್ಕನೇ ವಾರ್ಡಿನ ಡಾ.ಬಿ.ಆರ್ ಅಂಬೇಡ್ಕರ್ ಅವರ ಸಮುದಾಯದ ಭವನದಲ್ಲಿ ಮಂಗಳವಾರದಂದು ಸಂವಿಧಾನ ಸಮರ್ಪಣೆ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.  ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮವನ್ನು ಎಸ್.ಡಿ.ಸಣ್ಣಸ್ವಾಮಿ ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಅವರು, ನವೆಂಬರ್ 26, ಸ್ವತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವದ ದಿನವಾಗಿದೆ. 1949ರ ನವೆಂಬರ್ 26 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಇದರ ಅಂಗವಾಗಿಯೇ ನಾವು ಇಂದು ಸಂವಿಧಾನ ದಿನವನ್ನು ಆಚರಣೆ ಮಾಡುತ್ತಿದ್ದೇವೆ ಎಂದರು.


    Provided by
    Provided by

    ಭಾರತದಲ್ಲಿ ಸಂವಿಧಾನ ಅಂಗೀಕಾರವಾಗಿದ್ದು 1949 ರ ನವೆಂಬರ್ 26 ರಂದೇ, ಆದರೂ ಅನುಷ್ಠಾನಕ್ಕೆ ಬಂದಿದ್ದು 1950 ರ ಜನವರಿ 26ರಂದು. ಈ ದಿನವನ್ನು ಗಣರಾಜೋತ್ಸವ ದಿನವಾಗಿ ಆಚರಣೆ ಮಾಡಲಾಗುತ್ತದೆ ಎಂದರು.

    ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ ಮಾತನಾಡಿ, ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ನಮ್ಮ ದೇಶದಲ್ಲಿ ಹೊಸ ಶಕೆ ಆರಂಭವಾಗಿದ್ದು ಸಂವಿಧಾನ ಜಾರಿಗೆ ಬಂದಾಗಿನಿಂದಲೇ. ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವುದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ಈ ದಿನದ ವಿಶೇಷತೆ. ಭಾರತದ ಸಂವಿಧಾನಕ್ಕೆ ವಿಶ್ವದಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆ ಇದೆ ಎಂದರು.

    ನವೆಂಬರ್ 26 ರಂದು ಸಂವಿಧಾನ ದಿನ ಆಚರಿಸುವಂತೆ 2015 ರ ನವೆಂಬರ್ 19 ಎಂದು ಭಾರತ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿತು. ಇದಕ್ಕೂ ಮೊದಲು 2015ರ ಅಕ್ಟೋಬರ್ 11 ರಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಮುಂಬೈಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಸ್ಮಾರಕಕ್ಕೆ ಅಡಿಗಲ್ಲು ಹಾಕುವ ಸಂದರ್ಭದಲ್ಲಿ ನವೆಂಬರ್ 26 ರಂದು ಸಂವಿಧಾನ ದಿನವನ್ನಾಗಿ ಆಚರಿಸುವಂತೆ ಘೋಷಣೆ ಮಾಡಿದ್ದರು. ಅದರಂತೆ ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷರಾದ ಎಸ್.ಡಿ.ಸಣ್ಣ ಸ್ವಾಮಿ ಸರಗೂರು, ಯಜಮಾನರಾದ ಬೊಗಯ್ಯ , ಭೀಮಯ್ಯ, ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಶಿವಣ್ಣ, ಹನುಮಂತಯ್ಯ, ಪರಶಿವ, ಶಿವಮೂರ್ತಿ, ಪುಟ್ಟರಾಜು, ಕಾರಯ್ಯ, ಗೋಪಾಲ, ಭೋಗಪ್ಪ , ಮಹೇಶ, ಬಣ್ಣಯ, ದೊಡ್ಡಬೈರ, ಗ್ರಾಮಸ್ಥರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ

    June 11, 2026

    ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ

    June 11, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.