nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026
    Facebook Twitter Instagram
    ಟ್ರೆಂಡಿಂಗ್
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ದಿನ ಮಹತ್ವದ್ದು: ಎಸ್.ಡಿ.ಸಣ್ಣಸ್ವಾಮಿ
    ಜಿಲ್ಲಾ ಸುದ್ದಿ November 26, 2024

    ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ದಿನ ಮಹತ್ವದ್ದು: ಎಸ್.ಡಿ.ಸಣ್ಣಸ್ವಾಮಿ

    By adminNovember 26, 2024No Comments2 Mins Read
    samvidhan dina

    ಸರಗೂರು: ತಾಲೂಕಿನ ಪಟ್ಟಣದ ನಾಲ್ಕನೇ ವಾರ್ಡಿನ ಡಾ.ಬಿ.ಆರ್ ಅಂಬೇಡ್ಕರ್ ಅವರ ಸಮುದಾಯದ ಭವನದಲ್ಲಿ ಮಂಗಳವಾರದಂದು ಸಂವಿಧಾನ ಸಮರ್ಪಣೆ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.  ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮವನ್ನು ಎಸ್.ಡಿ.ಸಣ್ಣಸ್ವಾಮಿ ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಅವರು, ನವೆಂಬರ್ 26, ಸ್ವತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವದ ದಿನವಾಗಿದೆ. 1949ರ ನವೆಂಬರ್ 26 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಇದರ ಅಂಗವಾಗಿಯೇ ನಾವು ಇಂದು ಸಂವಿಧಾನ ದಿನವನ್ನು ಆಚರಣೆ ಮಾಡುತ್ತಿದ್ದೇವೆ ಎಂದರು.

    ಭಾರತದಲ್ಲಿ ಸಂವಿಧಾನ ಅಂಗೀಕಾರವಾಗಿದ್ದು 1949 ರ ನವೆಂಬರ್ 26 ರಂದೇ, ಆದರೂ ಅನುಷ್ಠಾನಕ್ಕೆ ಬಂದಿದ್ದು 1950 ರ ಜನವರಿ 26ರಂದು. ಈ ದಿನವನ್ನು ಗಣರಾಜೋತ್ಸವ ದಿನವಾಗಿ ಆಚರಣೆ ಮಾಡಲಾಗುತ್ತದೆ ಎಂದರು.

    ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ ಮಾತನಾಡಿ, ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ನಮ್ಮ ದೇಶದಲ್ಲಿ ಹೊಸ ಶಕೆ ಆರಂಭವಾಗಿದ್ದು ಸಂವಿಧಾನ ಜಾರಿಗೆ ಬಂದಾಗಿನಿಂದಲೇ. ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವುದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ಈ ದಿನದ ವಿಶೇಷತೆ. ಭಾರತದ ಸಂವಿಧಾನಕ್ಕೆ ವಿಶ್ವದಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆ ಇದೆ ಎಂದರು.

    ನವೆಂಬರ್ 26 ರಂದು ಸಂವಿಧಾನ ದಿನ ಆಚರಿಸುವಂತೆ 2015 ರ ನವೆಂಬರ್ 19 ಎಂದು ಭಾರತ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿತು. ಇದಕ್ಕೂ ಮೊದಲು 2015ರ ಅಕ್ಟೋಬರ್ 11 ರಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಮುಂಬೈಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಸ್ಮಾರಕಕ್ಕೆ ಅಡಿಗಲ್ಲು ಹಾಕುವ ಸಂದರ್ಭದಲ್ಲಿ ನವೆಂಬರ್ 26 ರಂದು ಸಂವಿಧಾನ ದಿನವನ್ನಾಗಿ ಆಚರಿಸುವಂತೆ ಘೋಷಣೆ ಮಾಡಿದ್ದರು. ಅದರಂತೆ ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷರಾದ ಎಸ್.ಡಿ.ಸಣ್ಣ ಸ್ವಾಮಿ ಸರಗೂರು, ಯಜಮಾನರಾದ ಬೊಗಯ್ಯ , ಭೀಮಯ್ಯ, ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಶಿವಣ್ಣ, ಹನುಮಂತಯ್ಯ, ಪರಶಿವ, ಶಿವಮೂರ್ತಿ, ಪುಟ್ಟರಾಜು, ಕಾರಯ್ಯ, ಗೋಪಾಲ, ಭೋಗಪ್ಪ , ಮಹೇಶ, ಬಣ್ಣಯ, ದೊಡ್ಡಬೈರ, ಗ್ರಾಮಸ್ಥರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಭಾರೀ ಕಾನೂನು…

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.