ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ತಮ್ಮ ಪಾಲಿನ ನೀರು ಬಿಡುತ್ತಿಲ್ಲ ಎಂದು ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಈ ಸಂಬಂಧ ಸುಪ್ರೀಂಕೋರ್ಟ್ಗೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದ್ದು, ಕರ್ನಾಟಕ ನೀರು ಬಿಡದ ಕಾರಣ ರಾಜ್ಯದಕಲ್ಲಿ ಬೆಳೆ ಹಾನಿಯಾಗಿದೆ. ತಮಿಳುನಾಡಿನ ಕಾವೇರಿ ನದಿ ಪಾತ್ರದಲ್ಲಿ ಬೆಳೆಗಳು ಒಣಗುತ್ತಿವೆ. ತಮ್ಮ ಪಾಲಿನ ನೀರು ಬಿಡುಗಡೆಗೆ ಸೂಚಿಸುವಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ತಮಿಳುನಾಡು ಸರ್ಕಾರ ಉಲ್ಲೇಖಿಸಿದೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕವು ಕಾವೇರಿ ನೀರು ನಿಯಂತ್ರಣ ಸಮಿತಿಯ ಸೂಚನೆಯನ್ನು ಪಾಲಿಸುತ್ತಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ಕಳೆದ ವಾರ ಆರೋಪಿಸಿದ್ದರು. ಅಲ್ಲದೆ, ಈ ವಿಚಾರವಾಗಿ ಸುಪ್ರೀಂ ಕೋರ್ಟ್ಗೆ ಮೊರೆಹೋಗುತ್ತೇವೆ ಎಂದೂ ಹೇಳಿದ್ದರು.
ಇನ್ನು ಕರ್ನಾಟಕದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿಯೂ ಹೇಳಿಕೊಳ್ಳುವಂಥ ಮಳೆಯಾಗಿಲ್ಲ. ಹೀಗಾಗಿ ತಮಿಳುನಾಡಿಗೆ ಹೆಚ್ಚು ನೀರು ಬಿಡುವುದು ಕಷ್ಟ ಎಂಬುದು ಕರ್ನಾಟಕದ ವಾದವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


