nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025
    Facebook Twitter Instagram
    ಟ್ರೆಂಡಿಂಗ್
    • ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್
    • ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು
    • ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್
    • ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ
    • ಕಿತ್ತೂರು ರಾಣಿಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಯುವನಿಧಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ
    • ತುಮಕೂರು | ಡಿಸೆಂಬರ್ 13—14ರಂದು ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ
    • ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ಮನಸ್ಸುಗಳ ಸಹಕಾರವೇ ಕನ್ನಡಕ್ಕೆ ಶಕ್ತಿ: ಹೊ.ಮ.ನಾಗರಾಜು
    ಪಾವಗಡ January 28, 2024

    ಕನ್ನಡ ಮನಸ್ಸುಗಳ ಸಹಕಾರವೇ ಕನ್ನಡಕ್ಕೆ ಶಕ್ತಿ: ಹೊ.ಮ.ನಾಗರಾಜು

    By adminJanuary 28, 2024No Comments1 Min Read
    kannada sahithya

    ವೈ.ಎನ್.ಹೊಸಕೋಟೆ : ಕನ್ನಡ ಮನಸ್ಸುಗಳ ಸಹಕಾರಿ ಗುಣವೇ ಕನ್ನಡ ಬೆಳವಣಿಗೆಗೆ ಶಕ್ತಿಯಾಗಿದೆ ಎಂದು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ಹೊ.ಮ.ನಾಗರಾಜು ತಿಳಿಸಿದರು.

    ಗ್ರಾಮದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಇತ್ತೀಚೆಗೆ ಹೋಬಳಿ ಘಟಕದ ವತಿಯಿಂದ ರಂಗಸಮುದ್ರದಲ್ಲಿ ಹಮ್ಮಿಕೊಂಡಿದ್ದ ೨ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸು ಕಂಡಿದೆ. ಇದಕ್ಕೆ ರಂಗಸಮುದ್ರ ಮತ್ತು ಹೋಬಳಿಯ ಕನ್ನಡ ಮನಸುಗಳ ಸಹಕಾರ ಮತ್ತು ಸ್ಪಂದನೆಯೇ ಮೂಲ ಕಾರಣವಾಗಿದ್ದು, ಯಶಸ್ಸಿಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಅಭಿನಂದನಾಪೂರ್ವಕ ಧನ್ಯವಾದಗಳು. ಜಿಲ್ಲೆ, ತಾಲ್ಲೂಕು ಮತ್ತು ಹೋಬಳಿ ಘಟಕಗಳ ಪದಾಧಿಕಾರಿಗಳ ಮತ್ತು ಹಿರಿಯ ಕನ್ನಡ ಚೇತನಗಳ ಮಾರ್ಗದರ್ಶನ ಸಲಹೆ ಸೂಚನೆಗಳಂತೆ ಎಲ್ಲರೂ ಒಗ್ಗೂಡಿ ಕಾರ್ಯಕ್ರಮ ರೂಪಿಸಿದ ಪರಿಣಾಮ ಯಶಸ್ವಿ ಸಮ್ಮೇಳನ ನೆರವೇರಿಸಲು ಸಾಧ್ಯವಾಗಿದೆ. ಗಡಿಭಾಗದಲ್ಲಿ ಕನ್ನಡ ನಿರಂತರವಾಗಿ ಪಸರಿಸಲು ಪ್ರತಿಯೊಬ್ಬರ ಕೊಡುಗೆ ಅಪಾರವಾಗಿದೆ ಎಂದರು.


    Provided by
    Provided by

    ತಾಲ್ಲೂಕು ಕಸಾಪ ಅಧ್ಯಕ್ಷ ಕಟ್ಟಾನರಸಿಂಹಮೂರ್ತಿ ಮಾತನಾಡಿ, ಕನ್ನಡ ಕಾರ್ಯಕ್ರಮ ರೂಪಿಸುವಲ್ಲಿ ಹಲವು ಎಡರು ತೊಡರುಗಳು ಬರುವುದು ಸಹಜ. ಅವುಗಳೆಲ್ಲವನ್ನೂ ಮೀರಿ ಹೋಬಳಿ ಪರಿಮಿತಿಯಲ್ಲಿ ಸಾಹಿತ್ಯ ಪರಿಷತ್ತಿನ ತತ್ವಗಳಡಿಯಲ್ಲಿ ೨ನೇ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿದೆ. ಈ ಕಾರ್ಯ ಮಾಡುವಲ್ಲಿ ಹೋಬಳಿ ಘಟಕದ ಎಲ್ಲಾ ಪದಾಧಿಕಾರಿಗಳಿಗೆ ಮತ್ತು ರಂಗಸಮುದ್ರ ಮತ್ತು ದೊಡ್ಡೇನಹಳ್ಳಿಯ ಜನತೆಯ ಶ್ರಮ ಫಲಿಸಿದೆ. ಮುಂದಿನ ದಿನಗಳಲ್ಲಿ ಇದೇ ರಂಗಸಮುದ್ರ ಗ್ರಾಮದಲ್ಲಿ ರಾಜ್ಯಕ್ಕೆ ಮಾದರಿಯಾಗುವಂತಹ ಮತ್ತಷ್ಟು ಕನ್ನಡ ಚಟುವಟಿಕೆಗಳನ್ನು ನಿರ್ವಹಿಸಲಾಗುವುದು ಎಂದು ತಿಳಿಸಿದರು.

    ತಾಲ್ಲೂಕು ಘಟಕದ ಕಾರ್ಯದರ್ಶಿ ಐ.ಎ.ನಾರಾಯಣಪ್ಪ ಪ್ರಾಸ್ಥಾವಿಕ ನುಡಿದರು. ಮತ್ತೋರ್ವ ಕಾರ್ಯದರ್ಶಿ ರಂಗಪ್ಪ, ರಂಗಸಮುದ್ರ ಗ್ರಾಮಪಂಚಾಯಿತಿ ಸದಸ್ಯ ನರಸಿಂಹನಾಯಕ, ಕಲಾವಿದ ಎನ್.ಅರ್.ಲಿಂಗಪ್ಪ ಮಾತನಾಡಿದರು.

    ಕಾರ್ಯಕ್ರಮದಲ್ಲಿ ರಂಗಸಮುದ್ರದ ಗ್ರಾ.ಪಂ. ಸದಸ್ಯ ಮಹಲಿಂಗಪ್ಪ, ಕಸಾಪ ಹಿರಿಯ ಸದಸ್ಯರಾದ ಇ.ವಿ.ಶ್ರೀಧರ್, ಕಲಾವಿದರಾದ ಕೋಲಾಟ ನಾಗರಾಜು, ಬಲರಾಮ, ಮರಿಸ್ವಾಮಿ, ದೈಹಿಕ ಶಿಕ್ಷಕರಾದ ಮಾಲತಿ, ಮಾರಣ್ಣ, ಹೆಚ್.ಕೆ.ಅಶ್ವಥನಾರಾಯಣ, ದೇವಿಕ, ಶಿಕ್ಷಕಿಯರಾದ ಗಿರಿಜಮ್ಮ, ಜಯಶ್ರೀ ಇತರರನ್ನು ಅಭಿನಂದಿಸಲಾಯಿತು.

    ಹೋಬಳಿ ಘಟಕದ ಕಾರ್ಯದರ್ಶಿಗಳಾದ ಚಂದ್ರಶೇಖರ್ ಮುದ್ರಾಡಿ ಮತ್ತು ರಾಮಲಿಂಗಯ್ಯ, ಸದಸ್ಯರಾದ ಎ.ಓ.ನಾಗರಾಜು, ತಿರುಮಲೇಶ್, ಶ್ರೀಶೈಲಮೂರ್ತಿ, ಪಿ.ಹರಿಕೃಷ್ಣ, ಶಿವಯ್ಯ ಇತರರು ಇದ್ದರು.

    ವರದಿ: ನಂದೀಶ್ ನಾಯ್ಕ ಪಾವಗಡ

    admin
    • Website

    Related Posts

    ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!

    December 10, 2025

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    December 10, 2025

    ವಿವಿಧ ಸ್ಪರ್ಧೆಗಳಲ್ಲಿ ಸಹನಾ ಶಾಲಾ ವಿದ್ಯಾರ್ಥಿಗಳಿಂದ ಸಾಧನೆ

    December 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    ಬೆಂಗಳೂರು: ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್…

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025

    ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ

    December 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.