nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ಮನಸ್ಸುಗಳ ಸಹಕಾರವೇ ಕನ್ನಡಕ್ಕೆ ಶಕ್ತಿ: ಹೊ.ಮ.ನಾಗರಾಜು
    ಪಾವಗಡ January 28, 2024

    ಕನ್ನಡ ಮನಸ್ಸುಗಳ ಸಹಕಾರವೇ ಕನ್ನಡಕ್ಕೆ ಶಕ್ತಿ: ಹೊ.ಮ.ನಾಗರಾಜು

    By adminJanuary 28, 2024No Comments1 Min Read
    kannada sahithya

    ವೈ.ಎನ್.ಹೊಸಕೋಟೆ : ಕನ್ನಡ ಮನಸ್ಸುಗಳ ಸಹಕಾರಿ ಗುಣವೇ ಕನ್ನಡ ಬೆಳವಣಿಗೆಗೆ ಶಕ್ತಿಯಾಗಿದೆ ಎಂದು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ಹೊ.ಮ.ನಾಗರಾಜು ತಿಳಿಸಿದರು.

    ಗ್ರಾಮದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಇತ್ತೀಚೆಗೆ ಹೋಬಳಿ ಘಟಕದ ವತಿಯಿಂದ ರಂಗಸಮುದ್ರದಲ್ಲಿ ಹಮ್ಮಿಕೊಂಡಿದ್ದ ೨ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸು ಕಂಡಿದೆ. ಇದಕ್ಕೆ ರಂಗಸಮುದ್ರ ಮತ್ತು ಹೋಬಳಿಯ ಕನ್ನಡ ಮನಸುಗಳ ಸಹಕಾರ ಮತ್ತು ಸ್ಪಂದನೆಯೇ ಮೂಲ ಕಾರಣವಾಗಿದ್ದು, ಯಶಸ್ಸಿಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಅಭಿನಂದನಾಪೂರ್ವಕ ಧನ್ಯವಾದಗಳು. ಜಿಲ್ಲೆ, ತಾಲ್ಲೂಕು ಮತ್ತು ಹೋಬಳಿ ಘಟಕಗಳ ಪದಾಧಿಕಾರಿಗಳ ಮತ್ತು ಹಿರಿಯ ಕನ್ನಡ ಚೇತನಗಳ ಮಾರ್ಗದರ್ಶನ ಸಲಹೆ ಸೂಚನೆಗಳಂತೆ ಎಲ್ಲರೂ ಒಗ್ಗೂಡಿ ಕಾರ್ಯಕ್ರಮ ರೂಪಿಸಿದ ಪರಿಣಾಮ ಯಶಸ್ವಿ ಸಮ್ಮೇಳನ ನೆರವೇರಿಸಲು ಸಾಧ್ಯವಾಗಿದೆ. ಗಡಿಭಾಗದಲ್ಲಿ ಕನ್ನಡ ನಿರಂತರವಾಗಿ ಪಸರಿಸಲು ಪ್ರತಿಯೊಬ್ಬರ ಕೊಡುಗೆ ಅಪಾರವಾಗಿದೆ ಎಂದರು.


    Provided by
    Provided by

    ತಾಲ್ಲೂಕು ಕಸಾಪ ಅಧ್ಯಕ್ಷ ಕಟ್ಟಾನರಸಿಂಹಮೂರ್ತಿ ಮಾತನಾಡಿ, ಕನ್ನಡ ಕಾರ್ಯಕ್ರಮ ರೂಪಿಸುವಲ್ಲಿ ಹಲವು ಎಡರು ತೊಡರುಗಳು ಬರುವುದು ಸಹಜ. ಅವುಗಳೆಲ್ಲವನ್ನೂ ಮೀರಿ ಹೋಬಳಿ ಪರಿಮಿತಿಯಲ್ಲಿ ಸಾಹಿತ್ಯ ಪರಿಷತ್ತಿನ ತತ್ವಗಳಡಿಯಲ್ಲಿ ೨ನೇ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿದೆ. ಈ ಕಾರ್ಯ ಮಾಡುವಲ್ಲಿ ಹೋಬಳಿ ಘಟಕದ ಎಲ್ಲಾ ಪದಾಧಿಕಾರಿಗಳಿಗೆ ಮತ್ತು ರಂಗಸಮುದ್ರ ಮತ್ತು ದೊಡ್ಡೇನಹಳ್ಳಿಯ ಜನತೆಯ ಶ್ರಮ ಫಲಿಸಿದೆ. ಮುಂದಿನ ದಿನಗಳಲ್ಲಿ ಇದೇ ರಂಗಸಮುದ್ರ ಗ್ರಾಮದಲ್ಲಿ ರಾಜ್ಯಕ್ಕೆ ಮಾದರಿಯಾಗುವಂತಹ ಮತ್ತಷ್ಟು ಕನ್ನಡ ಚಟುವಟಿಕೆಗಳನ್ನು ನಿರ್ವಹಿಸಲಾಗುವುದು ಎಂದು ತಿಳಿಸಿದರು.

    ತಾಲ್ಲೂಕು ಘಟಕದ ಕಾರ್ಯದರ್ಶಿ ಐ.ಎ.ನಾರಾಯಣಪ್ಪ ಪ್ರಾಸ್ಥಾವಿಕ ನುಡಿದರು. ಮತ್ತೋರ್ವ ಕಾರ್ಯದರ್ಶಿ ರಂಗಪ್ಪ, ರಂಗಸಮುದ್ರ ಗ್ರಾಮಪಂಚಾಯಿತಿ ಸದಸ್ಯ ನರಸಿಂಹನಾಯಕ, ಕಲಾವಿದ ಎನ್.ಅರ್.ಲಿಂಗಪ್ಪ ಮಾತನಾಡಿದರು.

    ಕಾರ್ಯಕ್ರಮದಲ್ಲಿ ರಂಗಸಮುದ್ರದ ಗ್ರಾ.ಪಂ. ಸದಸ್ಯ ಮಹಲಿಂಗಪ್ಪ, ಕಸಾಪ ಹಿರಿಯ ಸದಸ್ಯರಾದ ಇ.ವಿ.ಶ್ರೀಧರ್, ಕಲಾವಿದರಾದ ಕೋಲಾಟ ನಾಗರಾಜು, ಬಲರಾಮ, ಮರಿಸ್ವಾಮಿ, ದೈಹಿಕ ಶಿಕ್ಷಕರಾದ ಮಾಲತಿ, ಮಾರಣ್ಣ, ಹೆಚ್.ಕೆ.ಅಶ್ವಥನಾರಾಯಣ, ದೇವಿಕ, ಶಿಕ್ಷಕಿಯರಾದ ಗಿರಿಜಮ್ಮ, ಜಯಶ್ರೀ ಇತರರನ್ನು ಅಭಿನಂದಿಸಲಾಯಿತು.

    ಹೋಬಳಿ ಘಟಕದ ಕಾರ್ಯದರ್ಶಿಗಳಾದ ಚಂದ್ರಶೇಖರ್ ಮುದ್ರಾಡಿ ಮತ್ತು ರಾಮಲಿಂಗಯ್ಯ, ಸದಸ್ಯರಾದ ಎ.ಓ.ನಾಗರಾಜು, ತಿರುಮಲೇಶ್, ಶ್ರೀಶೈಲಮೂರ್ತಿ, ಪಿ.ಹರಿಕೃಷ್ಣ, ಶಿವಯ್ಯ ಇತರರು ಇದ್ದರು.

    ವರದಿ: ನಂದೀಶ್ ನಾಯ್ಕ ಪಾವಗಡ

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.