nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ

    July 25, 2026

    ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    July 25, 2026

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
    • ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    • ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
    • ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
    • ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ವಿವಿ ಜ್ಞಾನಸಿರಿ ಕ್ಯಾಂಪಸ್‌ ನಲ್ಲಿ ಶೀಘ್ರವೇ ಸಹಕಾರಿ ಕೇಂದ್ರ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು
    ತುಮಕೂರು February 8, 2025

    ತುಮಕೂರು ವಿವಿ ಜ್ಞಾನಸಿರಿ ಕ್ಯಾಂಪಸ್‌ ನಲ್ಲಿ ಶೀಘ್ರವೇ ಸಹಕಾರಿ ಕೇಂದ್ರ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು

    By adminFebruary 8, 2025No Comments2 Mins Read

    ತುಮಕೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯ ಸಹಯೋಗದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ನೂತನ ಜ್ಞಾನಸಿರಿ ಕ್ಯಾಂಪಸ್‌ ನಲ್ಲಿ ವಿದ್ಯಾರ್ಥಿಗಳಿಗಾಗಿ ಬಹುಪಯೋಗಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ತಿಳಿಸಿದರು.

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ‘ಯುವಜನ ಹಾಗೂ ಸಹಕಾರ’ ಕುರಿತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಬಿದರಕಟ್ಟೆಯ ಹೊಸ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ಅನೇಕ ಸೌಲಭ್ಯಗಳನ್ನು ಹಂತಹಂತವಾಗಿ ಕಲ್ಪಿಸಲಾಗುತ್ತಿದೆ. ಬಹುಪಯೋಗಿ ಕೇಂದ್ರವನ್ನು ಸ್ಥಾಪಿಸುವ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯು ಕಳೆದ ಅನೇಕ ವರ್ಷಗಳಿಂದ ರಾಜ್ಯಕ್ಕೆ ವಿಶಿಷ್ಟ ಕೊಡುಗೆ ನೀಡಿದೆ ಎಂದರು.

    ಎಲ್ಲಾ ಕಾರ್ಯಗಳನ್ನು ಸರ್ಕಾರ ನಿಭಾಯಿಸುವುದು ಕಷ್ಟವಾಗುತ್ತದೆ. ಆದ್ದರಿಂದ ಇಂತಹ ಸರ್ಕಾರೇತರ ಸಂಸ್ಥೆಗಳು ಜನೋಪಯೋಗಿ ಯೋಜನೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಅಧ್ಯಯನದ ಹಂತದಲ್ಲೇ ಸಹಕಾರಿ ಚಳುವಳಿ ಬಗ್ಗೆ ತಿಳಿದುಕೊಂಡು ಅದನ್ನು ಬಲಪಡಿಸಲು ಶ್ರಮಿಸಬೇಕು ಎಂದರು.

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ನಿಯಮಿತ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ. ಪಾಟೀಲ ಮಾತನಾಡಿ, ಸಹಕಾರಿ ಸಂಘಗಳಿಗೆ ಯುವಜನತೆಯ ಬೆಂಬಲ ಬೇಕು. ಎಲ್ಲಾ ಕಾಲೇಜುಗಳ ಆವರಣದಲ್ಲಿ ಸಹಕಾರಿ ಸಂಘಗಳನ್ನು ಸ್ಥಾಪಿಸಲು ಪ್ರಯತ್ನ ಮಾಡಬೇಕು ಎಂದರು.

    ಇಲ್ಲಿಯವರೆಗೂ 37 ಸಾವಿರ ಕೋಟಿ ರೂ. ಸಾಲವನ್ನು ಸಹಕಾರ ಸಂಸ್ಥೆಗಳು ನೀಡಿವೆ. ಸಮಾಜವನ್ನು ಅಭಿವೃದ್ಧಿ ಮಾಡುವುದೇ ನಮ್ಮ ಮುಖ್ಯ ಗುರಿ ಎಂದರು.

    ಗ್ರಾಮೀಣ ವಿದ್ಯಾರ್ಥಿನಿ ಒಬ್ಬರು ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದು ಸಾಧನೆಯ ವಿಚಾರ. ಸಹಕಾರಿ ಸಂಸ್ಥೆಗಳಲ್ಲಿ ಅನೇಕ ಉದ್ಯೋಗಾವಕಾಶಗಳಿದ್ದು ಅವುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ನಿರ್ದೇಶಕ ಸಿ.ಪಿ. ವಿಜಯ ಮಾತನಾಡಿ ಅಮುಲ್, ನಂದಿನಿ, ಡಿಸಿಸಿ ಬ್ಯಾಂಕ್ ಇಂತಹ ಹಲವಾರು ಸಹಕಾರಿ ಸಂಸ್ಥೆಗಳು ಸಮಾಜದಲ್ಲಿ ವಿಶ್ವಾಸಾರ್ಹತೆಯನ್ನು ಪಡೆದಿವೆ ಎಂದರು.

    ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ., ರಾಷ್ಟ್ರೀಯ ಸಹಕಾರಿ ಯೂನಿಯನ್ ವಿಶ್ರಾಂತ ನಿರ್ದೇಶಕ ಡಾ.ಎ.ಆರ್. ಶ್ರೀನಾಥ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     


    Provided by
    Provided by
    admin
    • Website

    Related Posts

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ

    July 24, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ

    July 25, 2026

    ಕೊರಟಗೆರೆ: ಕೊರಟಗೆರೆ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಭರದಿಂದ ಸಾಗುತ್ತಿದ್ದು, ಕ್ಷೇತ್ರದ ಒಟ್ಟು 2,09,495 ಮತದಾರರಿಗೆ…

    ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    July 25, 2026

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.