nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ

    September 10, 2026

    ಕೊರಟಗೆರೆಯಲ್ಲಿ ವೈಟ್ ಟಾಪಿಂಗ್ ಹೆಸರಿನಲ್ಲಿ ಅರ್ಧಂಬರ್ಧ ಕಾಮಗಾರಿ:  9.99 ಕೋಟಿಯಲ್ಲಿ 1900 ಮೀಟರ್ ಕಾಮಗಾರಿ!

    September 10, 2026

    ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ: ಬಸ್ ಚಾಲಕ ದುರ್ಮರಣ

    September 10, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ
    • ಕೊರಟಗೆರೆಯಲ್ಲಿ ವೈಟ್ ಟಾಪಿಂಗ್ ಹೆಸರಿನಲ್ಲಿ ಅರ್ಧಂಬರ್ಧ ಕಾಮಗಾರಿ:  9.99 ಕೋಟಿಯಲ್ಲಿ 1900 ಮೀಟರ್ ಕಾಮಗಾರಿ!
    • ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ: ಬಸ್ ಚಾಲಕ ದುರ್ಮರಣ
    • ಸಾಲ ಸೌಲಭ್ಯಕ್ಕಾಗಿ ವೀರಶೈವ ಲಿಂಗಾಯತರಿಂದ ಅರ್ಜಿ
    • ಸವಿತಾ ಸಮಾಜ ಅಭಿವೃದ್ಧಿ ನಿಗಮ: ಸಾಲಕ್ಕೆ ಅರ್ಜಿ ಆಹ್ವಾನ
    • ಹಸು–ಎಮ್ಮೆ ಸಾಕಾಣಿಕೆ : ಸಹಾಯಧನಕ್ಕೆ ಅರ್ಜಿ ಸಲ್ಲಿಸಿ
    • ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು
    • ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ವಿವಿ ಜ್ಞಾನಸಿರಿ ಕ್ಯಾಂಪಸ್‌ ನಲ್ಲಿ ಶೀಘ್ರವೇ ಸಹಕಾರಿ ಕೇಂದ್ರ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು
    ತುಮಕೂರು February 8, 2025

    ತುಮಕೂರು ವಿವಿ ಜ್ಞಾನಸಿರಿ ಕ್ಯಾಂಪಸ್‌ ನಲ್ಲಿ ಶೀಘ್ರವೇ ಸಹಕಾರಿ ಕೇಂದ್ರ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು

    By adminFebruary 8, 2025No Comments2 Mins Read

    ತುಮಕೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯ ಸಹಯೋಗದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ನೂತನ ಜ್ಞಾನಸಿರಿ ಕ್ಯಾಂಪಸ್‌ ನಲ್ಲಿ ವಿದ್ಯಾರ್ಥಿಗಳಿಗಾಗಿ ಬಹುಪಯೋಗಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ತಿಳಿಸಿದರು.

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ‘ಯುವಜನ ಹಾಗೂ ಸಹಕಾರ’ ಕುರಿತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಬಿದರಕಟ್ಟೆಯ ಹೊಸ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ಅನೇಕ ಸೌಲಭ್ಯಗಳನ್ನು ಹಂತಹಂತವಾಗಿ ಕಲ್ಪಿಸಲಾಗುತ್ತಿದೆ. ಬಹುಪಯೋಗಿ ಕೇಂದ್ರವನ್ನು ಸ್ಥಾಪಿಸುವ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯು ಕಳೆದ ಅನೇಕ ವರ್ಷಗಳಿಂದ ರಾಜ್ಯಕ್ಕೆ ವಿಶಿಷ್ಟ ಕೊಡುಗೆ ನೀಡಿದೆ ಎಂದರು.

    ಎಲ್ಲಾ ಕಾರ್ಯಗಳನ್ನು ಸರ್ಕಾರ ನಿಭಾಯಿಸುವುದು ಕಷ್ಟವಾಗುತ್ತದೆ. ಆದ್ದರಿಂದ ಇಂತಹ ಸರ್ಕಾರೇತರ ಸಂಸ್ಥೆಗಳು ಜನೋಪಯೋಗಿ ಯೋಜನೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಅಧ್ಯಯನದ ಹಂತದಲ್ಲೇ ಸಹಕಾರಿ ಚಳುವಳಿ ಬಗ್ಗೆ ತಿಳಿದುಕೊಂಡು ಅದನ್ನು ಬಲಪಡಿಸಲು ಶ್ರಮಿಸಬೇಕು ಎಂದರು.

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ನಿಯಮಿತ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ. ಪಾಟೀಲ ಮಾತನಾಡಿ, ಸಹಕಾರಿ ಸಂಘಗಳಿಗೆ ಯುವಜನತೆಯ ಬೆಂಬಲ ಬೇಕು. ಎಲ್ಲಾ ಕಾಲೇಜುಗಳ ಆವರಣದಲ್ಲಿ ಸಹಕಾರಿ ಸಂಘಗಳನ್ನು ಸ್ಥಾಪಿಸಲು ಪ್ರಯತ್ನ ಮಾಡಬೇಕು ಎಂದರು.

    ಇಲ್ಲಿಯವರೆಗೂ 37 ಸಾವಿರ ಕೋಟಿ ರೂ. ಸಾಲವನ್ನು ಸಹಕಾರ ಸಂಸ್ಥೆಗಳು ನೀಡಿವೆ. ಸಮಾಜವನ್ನು ಅಭಿವೃದ್ಧಿ ಮಾಡುವುದೇ ನಮ್ಮ ಮುಖ್ಯ ಗುರಿ ಎಂದರು.

    ಗ್ರಾಮೀಣ ವಿದ್ಯಾರ್ಥಿನಿ ಒಬ್ಬರು ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದು ಸಾಧನೆಯ ವಿಚಾರ. ಸಹಕಾರಿ ಸಂಸ್ಥೆಗಳಲ್ಲಿ ಅನೇಕ ಉದ್ಯೋಗಾವಕಾಶಗಳಿದ್ದು ಅವುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ನಿರ್ದೇಶಕ ಸಿ.ಪಿ. ವಿಜಯ ಮಾತನಾಡಿ ಅಮುಲ್, ನಂದಿನಿ, ಡಿಸಿಸಿ ಬ್ಯಾಂಕ್ ಇಂತಹ ಹಲವಾರು ಸಹಕಾರಿ ಸಂಸ್ಥೆಗಳು ಸಮಾಜದಲ್ಲಿ ವಿಶ್ವಾಸಾರ್ಹತೆಯನ್ನು ಪಡೆದಿವೆ ಎಂದರು.

    ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ., ರಾಷ್ಟ್ರೀಯ ಸಹಕಾರಿ ಯೂನಿಯನ್ ವಿಶ್ರಾಂತ ನಿರ್ದೇಶಕ ಡಾ.ಎ.ಆರ್. ಶ್ರೀನಾಥ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಸಾಲ ಸೌಲಭ್ಯಕ್ಕಾಗಿ ವೀರಶೈವ ಲಿಂಗಾಯತರಿಂದ ಅರ್ಜಿ

    September 10, 2026

    ಸವಿತಾ ಸಮಾಜ ಅಭಿವೃದ್ಧಿ ನಿಗಮ: ಸಾಲಕ್ಕೆ ಅರ್ಜಿ ಆಹ್ವಾನ

    September 10, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ

    September 10, 2026

    ಬೆಂಗಳೂರು: ಕರ್ನಾಟಕದಲ್ಲಿ ಪಕ್ಷ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಎಐಸಿಸಿ (AICC) ಮಹತ್ವದ ಹೆಜ್ಜೆ ಇರಿಸಿದೆ. ‘ಸಂಘಟನಾ ಸೃಜನ ಅಭಿಯಾನ’ದ…

    ಕೊರಟಗೆರೆಯಲ್ಲಿ ವೈಟ್ ಟಾಪಿಂಗ್ ಹೆಸರಿನಲ್ಲಿ ಅರ್ಧಂಬರ್ಧ ಕಾಮಗಾರಿ:  9.99 ಕೋಟಿಯಲ್ಲಿ 1900 ಮೀಟರ್ ಕಾಮಗಾರಿ!

    September 10, 2026

    ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ: ಬಸ್ ಚಾಲಕ ದುರ್ಮರಣ

    September 10, 2026

    ಸಾಲ ಸೌಲಭ್ಯಕ್ಕಾಗಿ ವೀರಶೈವ ಲಿಂಗಾಯತರಿಂದ ಅರ್ಜಿ

    September 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.