nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026

    ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ

    July 7, 2026
    Facebook Twitter Instagram
    ಟ್ರೆಂಡಿಂಗ್
    • ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    • ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
    • ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘ ಆಗ್ರಹ: ಸಿಎಂಗೆ ಮನವಿ
    • ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್
    • ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ
    • ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್
    • ತುಮಕೂರು: ಜು.12: ಕರ್ನಾಟಕ ವಿಕಾಸ ರಂಗದಿಂದ ಶಾಸ್ತ್ರೀಯ ಸಂಗೀತೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ವಿವಿ ಜ್ಞಾನಸಿರಿ ಕ್ಯಾಂಪಸ್‌ ನಲ್ಲಿ ಶೀಘ್ರವೇ ಸಹಕಾರಿ ಕೇಂದ್ರ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು
    ತುಮಕೂರು February 8, 2025

    ತುಮಕೂರು ವಿವಿ ಜ್ಞಾನಸಿರಿ ಕ್ಯಾಂಪಸ್‌ ನಲ್ಲಿ ಶೀಘ್ರವೇ ಸಹಕಾರಿ ಕೇಂದ್ರ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು

    By adminFebruary 8, 2025No Comments2 Mins Read

    ತುಮಕೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯ ಸಹಯೋಗದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ನೂತನ ಜ್ಞಾನಸಿರಿ ಕ್ಯಾಂಪಸ್‌ ನಲ್ಲಿ ವಿದ್ಯಾರ್ಥಿಗಳಿಗಾಗಿ ಬಹುಪಯೋಗಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ತಿಳಿಸಿದರು.

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ‘ಯುವಜನ ಹಾಗೂ ಸಹಕಾರ’ ಕುರಿತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಬಿದರಕಟ್ಟೆಯ ಹೊಸ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ಅನೇಕ ಸೌಲಭ್ಯಗಳನ್ನು ಹಂತಹಂತವಾಗಿ ಕಲ್ಪಿಸಲಾಗುತ್ತಿದೆ. ಬಹುಪಯೋಗಿ ಕೇಂದ್ರವನ್ನು ಸ್ಥಾಪಿಸುವ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯು ಕಳೆದ ಅನೇಕ ವರ್ಷಗಳಿಂದ ರಾಜ್ಯಕ್ಕೆ ವಿಶಿಷ್ಟ ಕೊಡುಗೆ ನೀಡಿದೆ ಎಂದರು.

    ಎಲ್ಲಾ ಕಾರ್ಯಗಳನ್ನು ಸರ್ಕಾರ ನಿಭಾಯಿಸುವುದು ಕಷ್ಟವಾಗುತ್ತದೆ. ಆದ್ದರಿಂದ ಇಂತಹ ಸರ್ಕಾರೇತರ ಸಂಸ್ಥೆಗಳು ಜನೋಪಯೋಗಿ ಯೋಜನೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಅಧ್ಯಯನದ ಹಂತದಲ್ಲೇ ಸಹಕಾರಿ ಚಳುವಳಿ ಬಗ್ಗೆ ತಿಳಿದುಕೊಂಡು ಅದನ್ನು ಬಲಪಡಿಸಲು ಶ್ರಮಿಸಬೇಕು ಎಂದರು.

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ನಿಯಮಿತ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ. ಪಾಟೀಲ ಮಾತನಾಡಿ, ಸಹಕಾರಿ ಸಂಘಗಳಿಗೆ ಯುವಜನತೆಯ ಬೆಂಬಲ ಬೇಕು. ಎಲ್ಲಾ ಕಾಲೇಜುಗಳ ಆವರಣದಲ್ಲಿ ಸಹಕಾರಿ ಸಂಘಗಳನ್ನು ಸ್ಥಾಪಿಸಲು ಪ್ರಯತ್ನ ಮಾಡಬೇಕು ಎಂದರು.

    ಇಲ್ಲಿಯವರೆಗೂ 37 ಸಾವಿರ ಕೋಟಿ ರೂ. ಸಾಲವನ್ನು ಸಹಕಾರ ಸಂಸ್ಥೆಗಳು ನೀಡಿವೆ. ಸಮಾಜವನ್ನು ಅಭಿವೃದ್ಧಿ ಮಾಡುವುದೇ ನಮ್ಮ ಮುಖ್ಯ ಗುರಿ ಎಂದರು.

    ಗ್ರಾಮೀಣ ವಿದ್ಯಾರ್ಥಿನಿ ಒಬ್ಬರು ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದು ಸಾಧನೆಯ ವಿಚಾರ. ಸಹಕಾರಿ ಸಂಸ್ಥೆಗಳಲ್ಲಿ ಅನೇಕ ಉದ್ಯೋಗಾವಕಾಶಗಳಿದ್ದು ಅವುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ನಿರ್ದೇಶಕ ಸಿ.ಪಿ. ವಿಜಯ ಮಾತನಾಡಿ ಅಮುಲ್, ನಂದಿನಿ, ಡಿಸಿಸಿ ಬ್ಯಾಂಕ್ ಇಂತಹ ಹಲವಾರು ಸಹಕಾರಿ ಸಂಸ್ಥೆಗಳು ಸಮಾಜದಲ್ಲಿ ವಿಶ್ವಾಸಾರ್ಹತೆಯನ್ನು ಪಡೆದಿವೆ ಎಂದರು.

    ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ., ರಾಷ್ಟ್ರೀಯ ಸಹಕಾರಿ ಯೂನಿಯನ್ ವಿಶ್ರಾಂತ ನಿರ್ದೇಶಕ ಡಾ.ಎ.ಆರ್. ಶ್ರೀನಾಥ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     


    Provided by
    Provided by
    admin
    • Website

    Related Posts

    ತುಮಕೂರು: ಜು.12: ಕರ್ನಾಟಕ ವಿಕಾಸ ರಂಗದಿಂದ ಶಾಸ್ತ್ರೀಯ ಸಂಗೀತೋತ್ಸವ

    July 7, 2026

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಬರ ಪರಿಸ್ಥಿತಿಯ ಆತಂಕ ಎದುರಾಗಿದ್ದರೂ, ತಕ್ಷಣವೇ ಬರಗಾಲ ಘೋಷಿಸಲು ಸಾಧ್ಯವಿಲ್ಲ.…

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026

    ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ

    July 7, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘ ಆಗ್ರಹ: ಸಿಎಂಗೆ ಮನವಿ

    July 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.