nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಟಾಕಿ ಅನಾಹುತ: ನಾರಾಯಣ ನೇತ್ರಾಲಯದಲ್ಲಿ 20 ಪ್ರಕರಣ!

    October 21, 2025

    ಪೊಲೀಸರ ತ್ಯಾಗಗಳನ್ನು ಸ್ಮರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

    October 21, 2025

    ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಗೆಲುವಿನ ಸಂಭ್ರಮದ ಬಳಿಕ ಹೃದಯಾಘಾತದಿಂದ ಮಾಜಿ ಅಧ್ಯಕ್ಷ ಸಾವು

    October 21, 2025
    Facebook Twitter Instagram
    ಟ್ರೆಂಡಿಂಗ್
    • ಪಟಾಕಿ ಅನಾಹುತ: ನಾರಾಯಣ ನೇತ್ರಾಲಯದಲ್ಲಿ 20 ಪ್ರಕರಣ!
    • ಪೊಲೀಸರ ತ್ಯಾಗಗಳನ್ನು ಸ್ಮರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
    • ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಗೆಲುವಿನ ಸಂಭ್ರಮದ ಬಳಿಕ ಹೃದಯಾಘಾತದಿಂದ ಮಾಜಿ ಅಧ್ಯಕ್ಷ ಸಾವು
    • ಕರ್ನಾಟಕ ಸಂಪನ್ಮೂಲ ಹೈಕಮಾಂಡ್ ಗೆ ಅರ್ಪಿಸಿದ ಕೀರ್ತಿ ಬಿಜೆಪಿಯದ್ದು: ಸಚಿವ ಪ್ರಿಯಾಂಕ್ ಖರ್ಗೆ
    • ನೀರಿನ ಟಬ್ ಗೆ ಬಿದ್ದ 11 ತಿಂಗಳ ಮಗು ಸಾವು
    • ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ ಕಂಪೆನಿ ನಿರ್ವಾಹಕನಿಗೆ ಪಂಗನಾಮ!
    • ತಿಪಟೂರು | ಹೆದ್ದಾರಿ ಸರ್ವೀಸ್ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರ ಪರದಾಟ
    • ಕವನ: ದೀಪಾವಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ವಿವಿ ಜ್ಞಾನಸಿರಿ ಕ್ಯಾಂಪಸ್‌ ನಲ್ಲಿ ಶೀಘ್ರವೇ ಸಹಕಾರಿ ಕೇಂದ್ರ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು
    ತುಮಕೂರು February 8, 2025

    ತುಮಕೂರು ವಿವಿ ಜ್ಞಾನಸಿರಿ ಕ್ಯಾಂಪಸ್‌ ನಲ್ಲಿ ಶೀಘ್ರವೇ ಸಹಕಾರಿ ಕೇಂದ್ರ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು

    By adminFebruary 8, 2025No Comments2 Mins Read

    ತುಮಕೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯ ಸಹಯೋಗದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ನೂತನ ಜ್ಞಾನಸಿರಿ ಕ್ಯಾಂಪಸ್‌ ನಲ್ಲಿ ವಿದ್ಯಾರ್ಥಿಗಳಿಗಾಗಿ ಬಹುಪಯೋಗಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ತಿಳಿಸಿದರು.

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ‘ಯುವಜನ ಹಾಗೂ ಸಹಕಾರ’ ಕುರಿತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by
    Provided by

    ಬಿದರಕಟ್ಟೆಯ ಹೊಸ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ಅನೇಕ ಸೌಲಭ್ಯಗಳನ್ನು ಹಂತಹಂತವಾಗಿ ಕಲ್ಪಿಸಲಾಗುತ್ತಿದೆ. ಬಹುಪಯೋಗಿ ಕೇಂದ್ರವನ್ನು ಸ್ಥಾಪಿಸುವ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯು ಕಳೆದ ಅನೇಕ ವರ್ಷಗಳಿಂದ ರಾಜ್ಯಕ್ಕೆ ವಿಶಿಷ್ಟ ಕೊಡುಗೆ ನೀಡಿದೆ ಎಂದರು.

    ಎಲ್ಲಾ ಕಾರ್ಯಗಳನ್ನು ಸರ್ಕಾರ ನಿಭಾಯಿಸುವುದು ಕಷ್ಟವಾಗುತ್ತದೆ. ಆದ್ದರಿಂದ ಇಂತಹ ಸರ್ಕಾರೇತರ ಸಂಸ್ಥೆಗಳು ಜನೋಪಯೋಗಿ ಯೋಜನೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಅಧ್ಯಯನದ ಹಂತದಲ್ಲೇ ಸಹಕಾರಿ ಚಳುವಳಿ ಬಗ್ಗೆ ತಿಳಿದುಕೊಂಡು ಅದನ್ನು ಬಲಪಡಿಸಲು ಶ್ರಮಿಸಬೇಕು ಎಂದರು.

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ನಿಯಮಿತ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ. ಪಾಟೀಲ ಮಾತನಾಡಿ, ಸಹಕಾರಿ ಸಂಘಗಳಿಗೆ ಯುವಜನತೆಯ ಬೆಂಬಲ ಬೇಕು. ಎಲ್ಲಾ ಕಾಲೇಜುಗಳ ಆವರಣದಲ್ಲಿ ಸಹಕಾರಿ ಸಂಘಗಳನ್ನು ಸ್ಥಾಪಿಸಲು ಪ್ರಯತ್ನ ಮಾಡಬೇಕು ಎಂದರು.

    ಇಲ್ಲಿಯವರೆಗೂ 37 ಸಾವಿರ ಕೋಟಿ ರೂ. ಸಾಲವನ್ನು ಸಹಕಾರ ಸಂಸ್ಥೆಗಳು ನೀಡಿವೆ. ಸಮಾಜವನ್ನು ಅಭಿವೃದ್ಧಿ ಮಾಡುವುದೇ ನಮ್ಮ ಮುಖ್ಯ ಗುರಿ ಎಂದರು.

    ಗ್ರಾಮೀಣ ವಿದ್ಯಾರ್ಥಿನಿ ಒಬ್ಬರು ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದು ಸಾಧನೆಯ ವಿಚಾರ. ಸಹಕಾರಿ ಸಂಸ್ಥೆಗಳಲ್ಲಿ ಅನೇಕ ಉದ್ಯೋಗಾವಕಾಶಗಳಿದ್ದು ಅವುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ನಿರ್ದೇಶಕ ಸಿ.ಪಿ. ವಿಜಯ ಮಾತನಾಡಿ ಅಮುಲ್, ನಂದಿನಿ, ಡಿಸಿಸಿ ಬ್ಯಾಂಕ್ ಇಂತಹ ಹಲವಾರು ಸಹಕಾರಿ ಸಂಸ್ಥೆಗಳು ಸಮಾಜದಲ್ಲಿ ವಿಶ್ವಾಸಾರ್ಹತೆಯನ್ನು ಪಡೆದಿವೆ ಎಂದರು.

    ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ., ರಾಷ್ಟ್ರೀಯ ಸಹಕಾರಿ ಯೂನಿಯನ್ ವಿಶ್ರಾಂತ ನಿರ್ದೇಶಕ ಡಾ.ಎ.ಆರ್. ಶ್ರೀನಾಥ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ ಕಂಪೆನಿ ನಿರ್ವಾಹಕನಿಗೆ ಪಂಗನಾಮ!

    October 21, 2025

    ಹಳ್ಳಕ್ಕೆ ಉರುಳಿದ ಕಾರು: ಒಬ್ಬ ವ್ಯಕ್ತಿ ಸಾವು

    October 21, 2025

    ತುಮಕೂರು | ರಾಜ್ಯದಮಟ್ಟದ ಕಬಡ್ಡಿ: ದಕ್ಷಿಣ ಕನ್ನಡ ತಂಡಕ್ಕೆ ಅವಳಿ ಪ್ರಶಸ್ತಿ

    October 20, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಟಾಕಿ ಅನಾಹುತ: ನಾರಾಯಣ ನೇತ್ರಾಲಯದಲ್ಲಿ 20 ಪ್ರಕರಣ!

    October 21, 2025

    ಬೆಂಗಳೂರು: ದೀಪಾವಳಿ ಹಿನ್ನೆಲೆ ಪಟಾಕಿ ಸಿಡಿಸಲು ಹೋಗಿ ಅನಾಹುತಕ್ಕೆ ಸಿಲುಕಿದ ಒಟ್ಟು 20 ಪ್ರಕರಣಗಳು ನಾರಾಯಣ ನೇತ್ರಾಲಯದಲ್ಲಿ ದಾಖಲಾಗಿವೆ. ನಾರಾಯಣ…

    ಪೊಲೀಸರ ತ್ಯಾಗಗಳನ್ನು ಸ್ಮರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

    October 21, 2025

    ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಗೆಲುವಿನ ಸಂಭ್ರಮದ ಬಳಿಕ ಹೃದಯಾಘಾತದಿಂದ ಮಾಜಿ ಅಧ್ಯಕ್ಷ ಸಾವು

    October 21, 2025

    ಕರ್ನಾಟಕ ಸಂಪನ್ಮೂಲ ಹೈಕಮಾಂಡ್ ಗೆ ಅರ್ಪಿಸಿದ ಕೀರ್ತಿ ಬಿಜೆಪಿಯದ್ದು: ಸಚಿವ ಪ್ರಿಯಾಂಕ್ ಖರ್ಗೆ

    October 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.