nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರೊನಾ ಹೆಚ್ಚಿದೆ, ಜಾತ್ರೆ ನಡೆಯುವುದಿಲ್ಲ ಬರಬೇಡಿ: ರೈತರಿಗೆ ತಹಸೀಲ್ದಾರ್ ಮನವಿ
    ಕೊರಟಗೆರೆ January 20, 2022

    ಕೊರೊನಾ ಹೆಚ್ಚಿದೆ, ಜಾತ್ರೆ ನಡೆಯುವುದಿಲ್ಲ ಬರಬೇಡಿ: ರೈತರಿಗೆ ತಹಸೀಲ್ದಾರ್ ಮನವಿ

    By adminJanuary 20, 2022No Comments2 Mins Read
    jathre

    ಕೊರಟಗೆರೆ : ತಾಲ್ಲೂಕಿನ  ಹೊಳವನಹಳ್ಳಿ ಹೋಬಳಿಯ ಸುಪ್ರಸಿದ್ಧ ಕಮನೀಯ ಕ್ಷೇತ್ರದ ಶ್ರೀ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಯ ಸನ್ನಿಧಾನದಲ್ಲಿ ಪ್ರತಿ ವರ್ಷವೂ ಸಂಕ್ರಾಂತಿ ಮುಗಿದ ಮಾರನೇ ದಿನ ರಾಸುಗಳ ಜಾತ್ರೆ ಪ್ರಾರಂಭವಾಗಿ, ಸುಮಾರು ಹತ್ತರಿಂದ ಹದಿನೈದು ದಿನಗಳ ಕಾಲ ಭಾರೀ ರಾಸುಗಳ ಜಾತ್ರೆ ನಡೆಯುತ್ತಿತ್ತು. ರಾಸುಗಳ ಜಾತ್ರೆ ಮುಗಿದ ನಂತರ ಶ್ರೀ ಆಂಜನೇಯ ಸ್ವಾಮಿಯ  ಬ್ರಹ್ಮರಥೋತ್ಸವ ನಡೆಯುತ್ತಿತ್ತು. ಆದರೆ ಈ ಬಾರಿ ಕೊವಿಡ್ ಹಿನ್ನೆಲೆಯಲ್ಲಿ ಜಾತ್ರೆಗೆ ನಿರ್ಬಂಧ ಹಾಕಲಾಗಿದೆ.

    ಕೊವಿಡ್ ಮಾರ್ಗಸೂಚಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ನಿರ್ದೇಶನದಂತೆ  ಜಾತ್ರೆ ನಡೆದಂತೆ ತಾಲ್ಲೂಕು ಆಡಳಿತವು  ನಿರ್ಬಂಧವನ್ನು ವಿಧಿಸಿದ್ದು, ಈ ವಿಚಾರ ತಿಳಿಯದೇ  ರಾಸುಗಳನ್ನು ಮಾರಲು ಮತ್ತು ಕೊಳ್ಳಲು ಬಂದ ರೈತರು ನಿರಾಸೆಯಿಂದ ತಮ್ಮ ಊರಿಗೆ ತೆರಳುವಂತಾಗಿದೆ.


    Provided by
    Provided by

    ಈ ಸಂಬಂಧ ತಾಲೂಕ ದಂಡಾಧಿಕಾರಿ ನಹಿದಾ ಜಮ್ ಜಮ್ ಮಾತನಾಡಿ, ತಾಲ್ಲೂಕಿನಲ್ಲಿ ನಡೆಯುವ ಯಾವುದೇ ಸಭೆ ಸಮಾರಂಭ ಜಾತ್ರೆ ಉರೂಸ್ ಇನ್ನಿತರ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳ ಮುಖೇನ ಸೂಚನೆ ಹೊರಡಿಸಲಾಗಿದೆ. ಆದರೂ ಕ್ಯಾಮೆನಹಳ್ಳಿಯ ಜಾತ್ರೆ ಇದೆ ಎಂದುಕೊಂಡು ಜನರು ಜಾನುವಾರುಗಳನ್ನು  ಮಾರಲು ಮುಂದಾಗಿದ್ದಾರೆ .ಆದರೆ ಈಗ ಇದ್ಯಾವುದೂ ನಡೆಯುವುದಕ್ಕೆ ಅವಕಾಶವಿಲ್ಲ ಕಾರಣ ಕೊರೊನಾ ಎಂಬ ಮಾಹಾಮಾರಿಯು ರಾಜ್ಯ ಜಿಲ್ಲೆ ಸೇರಿದಂತೆ  ತಾಲ್ಲೂಕಿನಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಆದ್ದರಿಂದ ಸಾರ್ವಜನಿಕರು ಅಧಿಕಾರಿಗಳ ಜತೆ ಸೌಮ್ಯದಿಂದ ವರ್ತಿಸಿ ಅಧಿಕಾರಿಗಳು ಹೇಳಿದಂತೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು  ಕಾಯ್ದುಕೊಂಡು ಯಾವುದೇ ರೋಗರುಜಿನಗಳು ಬರದಂತೆ ಸಹಕರಿಸಿ  ದಯವಿಟ್ಟು ಯಾವುದೇ ಜಾತ್ರೆ ಸಮಾರಂಭಗಳನ್ನು ಇಂತಹ ಸಮಯದಲ್ಲಿ ಮಾಡಬೇಡಿ ಎಂದು ರೈತರು ಹಾಗೂ ಸಾರ್ವಜನಿಕರಲ್ಲಿ  ಮನವಿ ಮಾಡಿದರು .

    ಇನ್ನೂ ಜಾತ್ರೆ ಇದೆ ಎಂದು ಆಗಮಿಸಿದ್ದ ರೈತರೊಬ್ಬರು ಮಾತನಾಡಿ, ಬಹಳ ವರ್ಷಗಳಿಂದ ನಾವು ಈ ಜಾತ್ರೆಗೆ ಬರುತ್ತಿದ್ದೆವು. ನಾವಲ್ಲದೆ ರಾಜ್ಯದ ಅನೇಕ ಭಾಗಗಳಿಂದ ರೈತರು ಬರುತ್ತಿದ್ದರು. ಜಾನುವಾರುಗಳನ್ನು ಮಾರುವುದು, ತೆಗೆದುಕೊಳ್ಳುವುದು ಮಾಡುತ್ತಿದ್ದೆವು. ಆದರೆ ಈ ಬಾರಿ ಜಾತ್ರೆ ಇದೆ ಎಂದುಕೊಂಡು ಬಂದಿದ್ದವು. ಇಲ್ಲಿಗೆ ಬಂದಾಗ ಅರ್ಥವಾಯ್ತು. ಪೋಲಿಸ್ ಅಧಿಕಾರಿಗಳು  ಜಾತ್ರೆ ನಡೆಯುವುದಿಲ್ಲ,  ಊರುಗಳಿಗೆ ಹಿಂತಿರುಗಿ ಎಂದು ತಿಳಿಸಿದರು. ಅದರಂತೆ ನಾವು ವಾಪಸ್ ತೆರಳುತ್ತಿದ್ದೇವೆ ಎಂದು ನಿರಾಸೆ ವ್ಯಕ್ತಪಡಿಸಿದರು.

    ಇನ್ನೂ ಈ ವಿಚಾರವಾಗಿ ದೇವಸ್ಥಾನದ  ಸಮಿತಿ ಅಧ್ಯಕ್ಷ ಬಾಲರಾಜು ಮಾತನಾಡಿ,  ನಾವು ಈಗಾಗಲೇ ಜಾತ್ರೆ ನಡೆಯುವುದಿಲ್ಲ ಎಂದು ಪಾಂಪ್ಲೆಟ್ ಮುಖಾಂತರ ಎಲ್ಲಾ ಹಳ್ಳಿಗಳಿಗೂ ಹಾಗೂ ನಮ್ಮ ತಾಲ್ಲೂಕಿನ ಗಡಿ ಭಾಗದವರೆಗೂ ತಿಳಿಸಿದ್ದೇವೆ. ಆದರೂ ಕೆಲವು ಕಿಡಿಗೇಡಿಗಳು ಮಾಡಿರುವ ವದಂತಿಯಿಂದ ಜಾತ್ರೆಯಿದೆ ಎಂದು ತಿಳಿದುಕೊಂಡು ರೈತರು ದೂರದ ಊರುಗಳಿಂದ ಆಗಮಿಸಿದ್ದರು. ಅವರಿಗೆ ಜಾತ್ರೆ ಇಲ್ಲವೆಂದು ಅರ್ಥ ಮಾಡಿಸಿ  ವಾಪಸ್ ಕಳುಹಿಸುತ್ತಿದ್ದೇವೆ ಎಂದು ತಿಳಿಸಿದರು.

    ವರದಿ:  ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಕಾರವಾರ:  ಜಿಲ್ಲೆಯಲ್ಲಿ ಘಟಿಸುವ ಪ್ರತಿಯೊಂದು ಜನನ ಮತ್ತು ಮರಣ ಘಟನೆಗಳನ್ನು 21 ದಿನಗಳ ಒಳಗೆ ಕಡ್ಡಾಯವಾಗಿ ಶೇ.100 ರಷ್ಟು ನೋಂದಣಿ…

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.