nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    • ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    • ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
    • ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರೊನಾ ಹೆಚ್ಚಿದೆ, ಜಾತ್ರೆ ನಡೆಯುವುದಿಲ್ಲ ಬರಬೇಡಿ: ರೈತರಿಗೆ ತಹಸೀಲ್ದಾರ್ ಮನವಿ
    ಕೊರಟಗೆರೆ January 20, 2022

    ಕೊರೊನಾ ಹೆಚ್ಚಿದೆ, ಜಾತ್ರೆ ನಡೆಯುವುದಿಲ್ಲ ಬರಬೇಡಿ: ರೈತರಿಗೆ ತಹಸೀಲ್ದಾರ್ ಮನವಿ

    By adminJanuary 20, 2022No Comments2 Mins Read
    jathre

    Provided by
    Provided by

    ಕೊರಟಗೆರೆ : ತಾಲ್ಲೂಕಿನ  ಹೊಳವನಹಳ್ಳಿ ಹೋಬಳಿಯ ಸುಪ್ರಸಿದ್ಧ ಕಮನೀಯ ಕ್ಷೇತ್ರದ ಶ್ರೀ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಯ ಸನ್ನಿಧಾನದಲ್ಲಿ ಪ್ರತಿ ವರ್ಷವೂ ಸಂಕ್ರಾಂತಿ ಮುಗಿದ ಮಾರನೇ ದಿನ ರಾಸುಗಳ ಜಾತ್ರೆ ಪ್ರಾರಂಭವಾಗಿ, ಸುಮಾರು ಹತ್ತರಿಂದ ಹದಿನೈದು ದಿನಗಳ ಕಾಲ ಭಾರೀ ರಾಸುಗಳ ಜಾತ್ರೆ ನಡೆಯುತ್ತಿತ್ತು. ರಾಸುಗಳ ಜಾತ್ರೆ ಮುಗಿದ ನಂತರ ಶ್ರೀ ಆಂಜನೇಯ ಸ್ವಾಮಿಯ  ಬ್ರಹ್ಮರಥೋತ್ಸವ ನಡೆಯುತ್ತಿತ್ತು. ಆದರೆ ಈ ಬಾರಿ ಕೊವಿಡ್ ಹಿನ್ನೆಲೆಯಲ್ಲಿ ಜಾತ್ರೆಗೆ ನಿರ್ಬಂಧ ಹಾಕಲಾಗಿದೆ.

    ಕೊವಿಡ್ ಮಾರ್ಗಸೂಚಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ನಿರ್ದೇಶನದಂತೆ  ಜಾತ್ರೆ ನಡೆದಂತೆ ತಾಲ್ಲೂಕು ಆಡಳಿತವು  ನಿರ್ಬಂಧವನ್ನು ವಿಧಿಸಿದ್ದು, ಈ ವಿಚಾರ ತಿಳಿಯದೇ  ರಾಸುಗಳನ್ನು ಮಾರಲು ಮತ್ತು ಕೊಳ್ಳಲು ಬಂದ ರೈತರು ನಿರಾಸೆಯಿಂದ ತಮ್ಮ ಊರಿಗೆ ತೆರಳುವಂತಾಗಿದೆ.

    ಈ ಸಂಬಂಧ ತಾಲೂಕ ದಂಡಾಧಿಕಾರಿ ನಹಿದಾ ಜಮ್ ಜಮ್ ಮಾತನಾಡಿ, ತಾಲ್ಲೂಕಿನಲ್ಲಿ ನಡೆಯುವ ಯಾವುದೇ ಸಭೆ ಸಮಾರಂಭ ಜಾತ್ರೆ ಉರೂಸ್ ಇನ್ನಿತರ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳ ಮುಖೇನ ಸೂಚನೆ ಹೊರಡಿಸಲಾಗಿದೆ. ಆದರೂ ಕ್ಯಾಮೆನಹಳ್ಳಿಯ ಜಾತ್ರೆ ಇದೆ ಎಂದುಕೊಂಡು ಜನರು ಜಾನುವಾರುಗಳನ್ನು  ಮಾರಲು ಮುಂದಾಗಿದ್ದಾರೆ .ಆದರೆ ಈಗ ಇದ್ಯಾವುದೂ ನಡೆಯುವುದಕ್ಕೆ ಅವಕಾಶವಿಲ್ಲ ಕಾರಣ ಕೊರೊನಾ ಎಂಬ ಮಾಹಾಮಾರಿಯು ರಾಜ್ಯ ಜಿಲ್ಲೆ ಸೇರಿದಂತೆ  ತಾಲ್ಲೂಕಿನಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಆದ್ದರಿಂದ ಸಾರ್ವಜನಿಕರು ಅಧಿಕಾರಿಗಳ ಜತೆ ಸೌಮ್ಯದಿಂದ ವರ್ತಿಸಿ ಅಧಿಕಾರಿಗಳು ಹೇಳಿದಂತೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು  ಕಾಯ್ದುಕೊಂಡು ಯಾವುದೇ ರೋಗರುಜಿನಗಳು ಬರದಂತೆ ಸಹಕರಿಸಿ  ದಯವಿಟ್ಟು ಯಾವುದೇ ಜಾತ್ರೆ ಸಮಾರಂಭಗಳನ್ನು ಇಂತಹ ಸಮಯದಲ್ಲಿ ಮಾಡಬೇಡಿ ಎಂದು ರೈತರು ಹಾಗೂ ಸಾರ್ವಜನಿಕರಲ್ಲಿ  ಮನವಿ ಮಾಡಿದರು .

    ಇನ್ನೂ ಜಾತ್ರೆ ಇದೆ ಎಂದು ಆಗಮಿಸಿದ್ದ ರೈತರೊಬ್ಬರು ಮಾತನಾಡಿ, ಬಹಳ ವರ್ಷಗಳಿಂದ ನಾವು ಈ ಜಾತ್ರೆಗೆ ಬರುತ್ತಿದ್ದೆವು. ನಾವಲ್ಲದೆ ರಾಜ್ಯದ ಅನೇಕ ಭಾಗಗಳಿಂದ ರೈತರು ಬರುತ್ತಿದ್ದರು. ಜಾನುವಾರುಗಳನ್ನು ಮಾರುವುದು, ತೆಗೆದುಕೊಳ್ಳುವುದು ಮಾಡುತ್ತಿದ್ದೆವು. ಆದರೆ ಈ ಬಾರಿ ಜಾತ್ರೆ ಇದೆ ಎಂದುಕೊಂಡು ಬಂದಿದ್ದವು. ಇಲ್ಲಿಗೆ ಬಂದಾಗ ಅರ್ಥವಾಯ್ತು. ಪೋಲಿಸ್ ಅಧಿಕಾರಿಗಳು  ಜಾತ್ರೆ ನಡೆಯುವುದಿಲ್ಲ,  ಊರುಗಳಿಗೆ ಹಿಂತಿರುಗಿ ಎಂದು ತಿಳಿಸಿದರು. ಅದರಂತೆ ನಾವು ವಾಪಸ್ ತೆರಳುತ್ತಿದ್ದೇವೆ ಎಂದು ನಿರಾಸೆ ವ್ಯಕ್ತಪಡಿಸಿದರು.

    ಇನ್ನೂ ಈ ವಿಚಾರವಾಗಿ ದೇವಸ್ಥಾನದ  ಸಮಿತಿ ಅಧ್ಯಕ್ಷ ಬಾಲರಾಜು ಮಾತನಾಡಿ,  ನಾವು ಈಗಾಗಲೇ ಜಾತ್ರೆ ನಡೆಯುವುದಿಲ್ಲ ಎಂದು ಪಾಂಪ್ಲೆಟ್ ಮುಖಾಂತರ ಎಲ್ಲಾ ಹಳ್ಳಿಗಳಿಗೂ ಹಾಗೂ ನಮ್ಮ ತಾಲ್ಲೂಕಿನ ಗಡಿ ಭಾಗದವರೆಗೂ ತಿಳಿಸಿದ್ದೇವೆ. ಆದರೂ ಕೆಲವು ಕಿಡಿಗೇಡಿಗಳು ಮಾಡಿರುವ ವದಂತಿಯಿಂದ ಜಾತ್ರೆಯಿದೆ ಎಂದು ತಿಳಿದುಕೊಂಡು ರೈತರು ದೂರದ ಊರುಗಳಿಂದ ಆಗಮಿಸಿದ್ದರು. ಅವರಿಗೆ ಜಾತ್ರೆ ಇಲ್ಲವೆಂದು ಅರ್ಥ ಮಾಡಿಸಿ  ವಾಪಸ್ ಕಳುಹಿಸುತ್ತಿದ್ದೇವೆ ಎಂದು ತಿಳಿಸಿದರು.

    ವರದಿ:  ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ

    June 16, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ

    June 16, 2026

    ಕೊರಟಗೆರೆ ಪಟ್ಟಣಕ್ಕೆ ದಿಢೀರ್ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ

    June 16, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ತುಮಕೂರು: ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹಿಸಿ, ಗ್ರಾಮಸ್ಥರು ಹಾಗೂ ಪೋಷಕರು AIDSO ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ…

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.