nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೃಕ್ಷ ಮಾತೆ ತುಳಸಿಗೌಡ ನಿಧನಕ್ಕೆ ಪರಿಷತನಲ್ಲಿ ಸಂತಾಪ
    ರಾಜ್ಯ ಸುದ್ದಿ December 17, 2024

    ವೃಕ್ಷ ಮಾತೆ ತುಳಸಿಗೌಡ ನಿಧನಕ್ಕೆ ಪರಿಷತನಲ್ಲಿ ಸಂತಾಪ

    By adminDecember 17, 2024No Comments2 Mins Read
    tulsi gowda

    ಬೆಳಗಾವಿ: ಪದ್ಮಶ್ರೀ ಪುರಸ್ಕೃತ ವೃಕ್ಷ ಮಾತೆ ತುಳಸಿಗೌಡ ಅವರ ನಿಧನಕ್ಕೆ ವಿಧಾನ ಪರಿಷತ್ತನಲ್ಲಿ ಡಿ.17 ರಂದು ಸಂತಾಪ ಸೂಚಿಸಲಾಯಿತು.

    ಸಭಾಪತಿ ಬಸವರಾಜ ಹೊರಟ್ಟಿ ಅವರು, ತುಳಸಿಗೌಡ ಅವರ ನಿಧನರಾದ ವಿಷಯವನ್ನು ಸದನಕ್ಕೆ ತಿಳಿಸಲು ವಿಷಾಧಿಸುತ್ತೇನೆ ಎಂದು ಹೇಳಿ ಸಂತಾಪ ಸೂಚನೆಯ ನಿರ್ಣಯವನ್ನು ಮಂಡಿಸಿದರು.

    ತುಳಸಿ ಗೌಡ ಅವರು 1944ರ ಡಿಸೆಂಬರ್.16 ರಂದು ಅಂಕೋಲ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದ ಹಾಲಕ್ಕಿ ಬುಡಕಟ್ಟು ಕುಟುಂಬದಲ್ಲಿ ಜನಿಸಿದ್ದ ಶ್ರೀಯುತರು ‘ಪರಿಸರವೇ ನನ್ನ ಉಸಿರು’ ಎಂದು ತಮ್ಮ ಜೀವನದುದ್ದಕ್ಕೂ ಲಕ್ಷಾಂತರ ಮರಗಳನ್ನು ಬೆಳೆಸಿ ಪಾಲನೆ ಪೋಷಣೆ ಮಾಡುವ ಮೂಲಕ ‘ವೃಕ್ಷ ಮಾತೆ’ ಎಂದು ಕರೆಯಲ್ಪಡುತ್ತಿದ್ದರು. ಯಾವುದೇ ಔಪಚಾರಿಕ ಶಿಕ್ಷಣವಿಲ್ಲದಿದ್ದರೂ ಶಾಲಾ ಮಕ್ಕಳಿಗೆ ಗಿಡಗಳನ್ನು ಬೆಳೆಸುವ ತರಬೇತಿ ನೀಡುತ್ತಿದ್ದರು. ಪ್ರತಿ ವರ್ಷ 30 ಸಾವಿರ ಸಸಿಗಳನ್ನು ಪೋಷಿಸಿದ ಕೀರ್ತಿಗೆ ಭಾಜನರಾಗಿದ್ದರು.

    ಶ್ರೀಯುತರಿಗೆ ಅರಣ್ಯ ತಿಳುವಳಿಕೆ ಅಪಾರವಾಗಿತ್ತು. ಸಾಗವಾನಿಯನ್ನೇ ಹೆಚ್ಚಾಗಿ ಬೆಳೆಸುತ್ತಿದ್ದ ಇವರು ಇದರ ಹೊರತಾಗಿ ಎಳ್ಳು, ನಂದಿ, ಪೀಫುಲ್, ಫಿಕಸ್, ಬಿದಿರು, ರಾಟನ್, ಜಮುನ್, ಗೋಡಂಬಿ, ಮತ್ತಿ ಮುಂತಾದ ಮರಗಳ ಎಲ್ಲಾ ಮಾಹಿತಿಗಳ ಅರಿವನ್ನು ಹೊಂದಿದ್ದರು. ಪರಿಸರದ ಮೇಲಿನ ಈಕೆಯ ಪ್ರೀತಿಯನ್ನು ಕಂಡು ಅಂದಿನ ಅರಣ್ಯಾಧಿಕಾರಿಯವರು ಅರಣ್ಯದಲ್ಲಿ ಬೀಜಗಳನ್ನು ಶೇಖರಣೆ ಮಾಡಿ ಸಸಿಗಳನ್ನಾಗಿ ಮಾಡಿಕೊಡುವ ಹಾಗೂ ಪೋಷಿಸುವ ದಿನಗೂಲಿ ನೌಕರಿಯನ್ನು ನೀಡಿದ್ದರು.

    ಕಾಡಿನಿಂದ ಅಪರೂಪದ ಬೀಜ ಸಂಗ್ರಹಿಸಿ, ಸಸಿಗಳನ್ನು ಬೆಳಸಿ ಅದೇ ಸಸಿಗಳನ್ನು ಅರಣ್ಯದಲ್ಲಿ, ಸರ್ಕಾರಿ ಕಛೇರಿ, ಶಾಲಾ ಆವರಣ, ರಸ್ತೆಯ ಪಕ್ಕದಲ್ಲಿ ಬೆಳೆಸಿದ ಕೀರ್ತಿ ಇವರದ್ದಾಗಿದೆ. ಯಾವ ಯಾವ ಮರದಿಂದ ಏನೇನು ಪ್ರಯೋಜನ, ಯಾವ ಜಾತಿಯ ಸಸಿಗಳಿಗೆ ಎಷ್ಟು ನೀರಿನ ಅವಶ್ಯಕತೆ ಇದೆ ಮುಂತಾದ ಹಲವಾರು ಮಾಹಿತಿಗಳ ಕಣಜವಾಗಿದ್ದ ಶ್ರೀಯುತರು ‘ಅರಣ್ಯದ ವಿಶ್ವಕೋಶ’ ಎಂದೇ ಜನಜನಿತರಾಗಿದ್ದರು.

    ಶ್ರೀಯುತರ ಪರಿಸರ ಕಾಯಕಕ್ಕೆ ಕೇಂದ್ರ ಸರ್ಕಾರದಿಂದ ಪದ್ಮಶ್ರೀ ಪ್ರಶಸ್ತಿ, ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿಗಳಲ್ಲದೆ ರಾಜ್ಯೋತ್ಸವ ಪ್ರಶಸ್ತಿಗೂ ಸಹ ಭಾಜನರಾಗಿದ್ದರು.

    ಶ್ರೀಯುತರ ನಿಧನದಿಂದಾಗಿ ರಾಜ್ಯ ಹಾಗೂ ರಾಷ್ಟ್ರವು ಒಬ್ಬ ಶ್ರೇಷ್ಠ ಪರಿಸರ ‘ವೃಕ್ಷ ಮಾತೆ’ಯೊಬ್ಬರನ್ನು ಕಳೆದುಕೊಂಡAತಾಗಿದೆ ಎಂದು ಸಭಾಪತಿ ಅವರು ಸಂತಾಪ ಸೂಚನೆಯ ನಿರ್ಣಯವನ್ನು ಸದನಕ್ಕೆ ತಿಳಿಸಿದರು.

    ಸಭಾ ನಾಯಕರು ಮತ್ತು ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಸಂತಾಪ ಸೂಚನಾ ನಿರ್ಣಯದ ಮೇಲೆ ಮಾತನಾಡಿ, ಮೃತರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಪರಮಾತ್ಮನು ಕರುಣಿಸಲೆಂದು ಪ್ರಾರ್ಥಿಸುವೆ ಎಂದು ತಿಳಿಸಿದರು.

    ಮೃತರ ಗೌರವಾರ್ಥ ಮಾನ್ಯ ಸದಸ್ಯರು ಎದ್ದು ನಿಂತು ಒಂದು ನಿಮಿಷ ಮೌನ ಆಚರಿಸಿ ಸಂತಾಪ ಸಲ್ಲಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!

    August 13, 2026

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.