nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿನಲ್ಲಿ ಕ್ರೀಡಾಕೂಟ ಆಯೋಜನೆಗೆ ಸಂಪೂರ್ಣ ಸಾಮರ್ಥ್ಯ ಇದೆ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    January 23, 2026

    ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ

    January 23, 2026

    ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ

    January 23, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿನಲ್ಲಿ ಕ್ರೀಡಾಕೂಟ ಆಯೋಜನೆಗೆ ಸಂಪೂರ್ಣ ಸಾಮರ್ಥ್ಯ ಇದೆ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
    • ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ
    • ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ
    • ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು
    • ಪ್ರಜ್ವಲ್ ರೇವಣ್ಣ ಕೇಸ್: ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ 35 ಲಕ್ಷ ರೂ. ನಗದು
    • ರಾಯಚೂರು: ರಸ್ತೆ ದಾಟುವಾಗ ಕೆಕೆಆರ್‌’ಟಿಸಿ ಬಸ್ ಹರಿದು 4 ವರ್ಷದ ಮಗು ಸಾವು
    • SC/ST/OBC 22 ಮಠಗಳಿಗೆ 40 ಎಕರೆ ಭೂಮಿ ಮಂಜೂರು: ರಾಜ್ಯ ಸಚಿವ ಸಂಪುಟದ ಮಹತ್ವದ ನಿರ್ಧಾರ
    • ಮಗಳು ಪ್ರಿಯಕರನ ಜೊತೆ ಓಡಿ ಹೋದ ವಿಚಾರಕ್ಕೆ ಕಿರಿಕಿರಿ; ಪತಿಯ ಎದೆಗೆ ಚೂರಿ ಇರಿದು ಕೊಂದ ಪತ್ನಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೃಕ್ಷ ಮಾತೆ ತುಳಸಿಗೌಡ ನಿಧನಕ್ಕೆ ಪರಿಷತನಲ್ಲಿ ಸಂತಾಪ
    ರಾಜ್ಯ ಸುದ್ದಿ December 17, 2024

    ವೃಕ್ಷ ಮಾತೆ ತುಳಸಿಗೌಡ ನಿಧನಕ್ಕೆ ಪರಿಷತನಲ್ಲಿ ಸಂತಾಪ

    By adminDecember 17, 2024No Comments2 Mins Read
    tulsi gowda

    ಬೆಳಗಾವಿ: ಪದ್ಮಶ್ರೀ ಪುರಸ್ಕೃತ ವೃಕ್ಷ ಮಾತೆ ತುಳಸಿಗೌಡ ಅವರ ನಿಧನಕ್ಕೆ ವಿಧಾನ ಪರಿಷತ್ತನಲ್ಲಿ ಡಿ.17 ರಂದು ಸಂತಾಪ ಸೂಚಿಸಲಾಯಿತು.

    ಸಭಾಪತಿ ಬಸವರಾಜ ಹೊರಟ್ಟಿ ಅವರು, ತುಳಸಿಗೌಡ ಅವರ ನಿಧನರಾದ ವಿಷಯವನ್ನು ಸದನಕ್ಕೆ ತಿಳಿಸಲು ವಿಷಾಧಿಸುತ್ತೇನೆ ಎಂದು ಹೇಳಿ ಸಂತಾಪ ಸೂಚನೆಯ ನಿರ್ಣಯವನ್ನು ಮಂಡಿಸಿದರು.


    Provided by
    Provided by

    ತುಳಸಿ ಗೌಡ ಅವರು 1944ರ ಡಿಸೆಂಬರ್.16 ರಂದು ಅಂಕೋಲ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದ ಹಾಲಕ್ಕಿ ಬುಡಕಟ್ಟು ಕುಟುಂಬದಲ್ಲಿ ಜನಿಸಿದ್ದ ಶ್ರೀಯುತರು ‘ಪರಿಸರವೇ ನನ್ನ ಉಸಿರು’ ಎಂದು ತಮ್ಮ ಜೀವನದುದ್ದಕ್ಕೂ ಲಕ್ಷಾಂತರ ಮರಗಳನ್ನು ಬೆಳೆಸಿ ಪಾಲನೆ ಪೋಷಣೆ ಮಾಡುವ ಮೂಲಕ ‘ವೃಕ್ಷ ಮಾತೆ’ ಎಂದು ಕರೆಯಲ್ಪಡುತ್ತಿದ್ದರು. ಯಾವುದೇ ಔಪಚಾರಿಕ ಶಿಕ್ಷಣವಿಲ್ಲದಿದ್ದರೂ ಶಾಲಾ ಮಕ್ಕಳಿಗೆ ಗಿಡಗಳನ್ನು ಬೆಳೆಸುವ ತರಬೇತಿ ನೀಡುತ್ತಿದ್ದರು. ಪ್ರತಿ ವರ್ಷ 30 ಸಾವಿರ ಸಸಿಗಳನ್ನು ಪೋಷಿಸಿದ ಕೀರ್ತಿಗೆ ಭಾಜನರಾಗಿದ್ದರು.

    ಶ್ರೀಯುತರಿಗೆ ಅರಣ್ಯ ತಿಳುವಳಿಕೆ ಅಪಾರವಾಗಿತ್ತು. ಸಾಗವಾನಿಯನ್ನೇ ಹೆಚ್ಚಾಗಿ ಬೆಳೆಸುತ್ತಿದ್ದ ಇವರು ಇದರ ಹೊರತಾಗಿ ಎಳ್ಳು, ನಂದಿ, ಪೀಫುಲ್, ಫಿಕಸ್, ಬಿದಿರು, ರಾಟನ್, ಜಮುನ್, ಗೋಡಂಬಿ, ಮತ್ತಿ ಮುಂತಾದ ಮರಗಳ ಎಲ್ಲಾ ಮಾಹಿತಿಗಳ ಅರಿವನ್ನು ಹೊಂದಿದ್ದರು. ಪರಿಸರದ ಮೇಲಿನ ಈಕೆಯ ಪ್ರೀತಿಯನ್ನು ಕಂಡು ಅಂದಿನ ಅರಣ್ಯಾಧಿಕಾರಿಯವರು ಅರಣ್ಯದಲ್ಲಿ ಬೀಜಗಳನ್ನು ಶೇಖರಣೆ ಮಾಡಿ ಸಸಿಗಳನ್ನಾಗಿ ಮಾಡಿಕೊಡುವ ಹಾಗೂ ಪೋಷಿಸುವ ದಿನಗೂಲಿ ನೌಕರಿಯನ್ನು ನೀಡಿದ್ದರು.

    ಕಾಡಿನಿಂದ ಅಪರೂಪದ ಬೀಜ ಸಂಗ್ರಹಿಸಿ, ಸಸಿಗಳನ್ನು ಬೆಳಸಿ ಅದೇ ಸಸಿಗಳನ್ನು ಅರಣ್ಯದಲ್ಲಿ, ಸರ್ಕಾರಿ ಕಛೇರಿ, ಶಾಲಾ ಆವರಣ, ರಸ್ತೆಯ ಪಕ್ಕದಲ್ಲಿ ಬೆಳೆಸಿದ ಕೀರ್ತಿ ಇವರದ್ದಾಗಿದೆ. ಯಾವ ಯಾವ ಮರದಿಂದ ಏನೇನು ಪ್ರಯೋಜನ, ಯಾವ ಜಾತಿಯ ಸಸಿಗಳಿಗೆ ಎಷ್ಟು ನೀರಿನ ಅವಶ್ಯಕತೆ ಇದೆ ಮುಂತಾದ ಹಲವಾರು ಮಾಹಿತಿಗಳ ಕಣಜವಾಗಿದ್ದ ಶ್ರೀಯುತರು ‘ಅರಣ್ಯದ ವಿಶ್ವಕೋಶ’ ಎಂದೇ ಜನಜನಿತರಾಗಿದ್ದರು.

    ಶ್ರೀಯುತರ ಪರಿಸರ ಕಾಯಕಕ್ಕೆ ಕೇಂದ್ರ ಸರ್ಕಾರದಿಂದ ಪದ್ಮಶ್ರೀ ಪ್ರಶಸ್ತಿ, ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿಗಳಲ್ಲದೆ ರಾಜ್ಯೋತ್ಸವ ಪ್ರಶಸ್ತಿಗೂ ಸಹ ಭಾಜನರಾಗಿದ್ದರು.

    ಶ್ರೀಯುತರ ನಿಧನದಿಂದಾಗಿ ರಾಜ್ಯ ಹಾಗೂ ರಾಷ್ಟ್ರವು ಒಬ್ಬ ಶ್ರೇಷ್ಠ ಪರಿಸರ ‘ವೃಕ್ಷ ಮಾತೆ’ಯೊಬ್ಬರನ್ನು ಕಳೆದುಕೊಂಡAತಾಗಿದೆ ಎಂದು ಸಭಾಪತಿ ಅವರು ಸಂತಾಪ ಸೂಚನೆಯ ನಿರ್ಣಯವನ್ನು ಸದನಕ್ಕೆ ತಿಳಿಸಿದರು.

    ಸಭಾ ನಾಯಕರು ಮತ್ತು ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಸಂತಾಪ ಸೂಚನಾ ನಿರ್ಣಯದ ಮೇಲೆ ಮಾತನಾಡಿ, ಮೃತರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಪರಮಾತ್ಮನು ಕರುಣಿಸಲೆಂದು ಪ್ರಾರ್ಥಿಸುವೆ ಎಂದು ತಿಳಿಸಿದರು.

    ಮೃತರ ಗೌರವಾರ್ಥ ಮಾನ್ಯ ಸದಸ್ಯರು ಎದ್ದು ನಿಂತು ಒಂದು ನಿಮಿಷ ಮೌನ ಆಚರಿಸಿ ಸಂತಾಪ ಸಲ್ಲಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು

    January 23, 2026

    ಪ್ರಜ್ವಲ್ ರೇವಣ್ಣ ಕೇಸ್: ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ 35 ಲಕ್ಷ ರೂ. ನಗದು

    January 23, 2026

    SC/ST/OBC 22 ಮಠಗಳಿಗೆ 40 ಎಕರೆ ಭೂಮಿ ಮಂಜೂರು: ರಾಜ್ಯ ಸಚಿವ ಸಂಪುಟದ ಮಹತ್ವದ ನಿರ್ಧಾರ

    January 23, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿನಲ್ಲಿ ಕ್ರೀಡಾಕೂಟ ಆಯೋಜನೆಗೆ ಸಂಪೂರ್ಣ ಸಾಮರ್ಥ್ಯ ಇದೆ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    January 23, 2026

    ತುಮಕೂರು:  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಸಹಯೋಗದಲ್ಲಿ ತುಮಕೂರಿನ ಮಹಾತ್ಮ ಗಾಂಧಿ ಜಿಲ್ಲಾ…

    ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ

    January 23, 2026

    ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ

    January 23, 2026

    ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು

    January 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.