ಚಿಕ್ಕಮಗಳೂರು: ಕೋವಿಡ್ ನಿಂದ ಮೃತಪಟ್ಟ ತರೀಕೆರೆ ತಾಲ್ಲೂಕಿನ ಬೇಲೇನಹಳ್ಳಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಮಹದೇವಪ್ಪ ಮತ್ತು ಅಜ್ಜಂಪುರ ತಾಲೂಕಿನ ಪುರ ಗ್ರಾಮ ಪಂಚಾಯಿತಿಯ ನೀರುಗಂಟಿ ಕಲ್ಲೇಶಪ್ಪ ಅವರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಮೊದಲ ಹಂತದ ಪರಿಹಾರ ಧನ ವಿತರಿಸಲಾಯಿತು.
ಪರಿಹಾರದ ಮೊತ್ತ 30 ಲಕ್ಷ ಮಂಜೂರಾಗಿದ್ದು, ಮೊದಲ ಹಂತದಲ್ಲಿ 10 ಲಕ್ಷ ರೂ. ಗಳನ್ನು ಆರ್ ಟಿ ಎಸ್ ಮೂಲಕ ಪಡೆಯಲು ಮಂಜೂರಾತಿ ಆದೇಶ ಪ್ರತಿಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಹಸ್ತಾಂತರಿಸಿದರು. ಉಪಕಾರ್ಯದರ್ಶಿ ಕಿಶೋರ್ ಕುಮಾರ್ ಹಾಗೂ ಸಿಎಓ ಶಿವಕುಮಾರ್ ಇದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 1770