nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು

    December 24, 2025

    ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ

    December 24, 2025

    ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ

    December 24, 2025
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು
    • ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ
    • ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ
    • ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ
    • ತಿಪಟೂರು: ದಲಿತರ ಭೂಮಿ ಒತ್ತುವರಿ ಆರೋಪ, ಓಡಾಡಲು ರಸ್ತೆ ಇಲ್ಲದೇ ದಲಿತರು ಕಂಗಾಲು
    • ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ
    • ಶ್ರವಣೂರು: ಭ್ರಷ್ಟಾಚಾರದ ಆರೋಪ; ಪಿಡಿಒ ವಿರುದ್ಧ ಎರಡನೇ ದಿನವೂ ಮುಂದುವರಿದ ಪ್ರತಿಭಟನೆ
    • ತುರುವೇಕೆರೆ: ಚಿರತೆ ಸಿಕ್ಕರೂ  ಗ್ರಾಮಸ್ಥರಲ್ಲಿ ದೂರವಾಗದ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾತ್ರಿ 10:45ಕ್ಕೆ ಮಧುಗಿರಿ ತಾಲೂಕು ದಂಡಾಧಿಕಾರಿಗಳ ಕಚೇರಿ ಆವರಣಕ್ಕೆ ನುಗ್ಗಿದ ಕ್ರೈನ್:  ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ?
    ಮಧುಗಿರಿ February 13, 2025

    ರಾತ್ರಿ 10:45ಕ್ಕೆ ಮಧುಗಿರಿ ತಾಲೂಕು ದಂಡಾಧಿಕಾರಿಗಳ ಕಚೇರಿ ಆವರಣಕ್ಕೆ ನುಗ್ಗಿದ ಕ್ರೈನ್:  ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ?

    By adminFebruary 13, 2025No Comments3 Mins Read
    madhugiri

    ಮಧುಗಿರಿ: ಸರ್ಕಾರಿ ಕಚೇರಿಗಳ ಆವರಣಕ್ಕೆ,  ಕಚೇರಿ ಅವಧಿ ಮುಗಿದ ನಂತರ ಯಾವುದೇ ವಾಹನಗಳನ್ನು ಒಳಗೆ ಬಿಡುವಂತಿಲ್ಲ ಎನ್ನುವ ನಿಯಮಗಳಿದ್ದರೂ, ರಾತ್ರಿ 10 ಮುಕ್ಕಾಲು ಗಂಟೆಯ ಸುಮಾರಿಗೆ  ಕ್ರೈನ್ ವೊಂದು ಮಧುಗಿರಿ ತಾಲೂಕು ದಂಡಾಧಿಕಾರಿಗಳ ಕಚೇರಿ ಆವರಣಕ್ಕೆ ಪ್ರವೇಶಿಸಿದ ಘಟನೆ ನಡೆದಿದ್ದು, ಈ ಘಟನೆ ಸಾರ್ವಜನಿಕರಲ್ಲಿ ತಮ್ಮ ಕಡತಗಳ ಭದ್ರತೆಯ ಬಗ್ಗೆ ಆತಂಕ ಸೃಷ್ಟಿ ಮಾಡಿದೆ.

    ಫೆಬ್ರವರಿ 10ರಂದು ಈ ಘಟನೆ ನಡೆದಿದೆ. ಈ ಘಟನೆ ಸಂಬಂಧ ನಮ್ಮತುಮಕೂರು ವಾಹಿನಿಗೆ ಕಾಳಜಿ ಫೌಂಡೇಶನ್‌ನ ಸಂಘಟನಾ ಕಾರ್ಯದರ್ಶಿ ಮಧುಗಿರಿ ಮಹೇಶ್ ಮಾಹಿತಿ ನೀಡಿದ್ದಾರೆ.


    Provided by
    Provided by

    ರಾತ್ರಿ ಸುಮಾರು 9:30ಕ್ಕೆ ತಾಲೂಕು ದಂಡಾಧಿಕಾರಿಗಳ ಕಚೇರಿ ಆವರಣಕ್ಕೆ ಕ್ರೇನ್ ವಾಹನದ ಮೂಲಕ ಪೆಟ್ಟಿಗೆ ಅಂಗಡಿಯನ್ನು ತಂದು ಅಕ್ರಮವಾಗಿ ಇಡುತ್ತಿದ್ದಾರೆ  ಎನ್ನುವ ವಿಚಾರ ತಿಳಿದು ಬಂದಿದೆ. ಹೀಗಾಗಿ ಮಹೇಶ್ ಅವರು  ಕೂಡಲೇ ದಂಡಾಧಿಕಾರಿಗಳ ಕಚೇರಿಯ ಸೆಕ್ಯೂರಿಟಿ ಬಳಿ ಕೇಳಿದಾಗ ತಹಶೀಲ್ದಾರ್ ರವರೇ ಯಾವುದಾದರೂ ಒಂದು ಮೂಲೆಯಲ್ಲಿ ಇಟ್ಟುಕೊಳ್ಳಲಿ ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ಸಮಯ 10.45ಕ್ಕೆ ಕ್ರೇನ್ (ಕೆಎ 27 ಎನ್ 4749) ಮುಖಾಂತರ ಖಾಸಗಿ ವ್ಯಕ್ತಿಗಳು ಕಚೇರಿ ಸಿಬ್ಬಂದಿಗಳೊಂದಿಗೆ ಶಾಮೀಲಾಗಿ ಸರ್ಕಾರಿ ಕಚೇರಿಯ ಸಮಯವನ್ನು ಹೊರತುಪಡಿಸಿ ಹಾಗೂ ಸರ್ಕಾರಿ ಕಚೇರಿಯ ಬಂದೋಬಸ್ತ್ ಗೆ ದಕ್ಕೆಯಾಗುವಂತೆ ಅಂಗಡಿ ಪೆಟ್ಟಿಗೆಯನ್ನು ಅಕ್ರಮವಾಗಿ ಹಾಗೂ ಅತಿಕ್ರಮವಾಗಿ ಅವರಣಕ್ಕೆ ತಂದು ಕಚೇರಿಯ ಬಲಭಾಗದಲ್ಲಿ ಇಡಲು ಬಂದಾಗ ಸ್ಥಳೀಯ ಪತ್ರಕರ್ತರೂ ಆದ ನಂದೀಶ್ ಹಾಗೂ ಕಿರಣ್ ರವರ ಸಹಯೋಗದಲ್ಲಿ ತಡೆದು ಪ್ರಶ್ನಿಸಿದಾಗ ಅಲ್ಲಿರುವ ಸಿಬ್ಬಂದಿ ಎಸ್.ಡಿ.ಎ ಪ್ರಜ್ವಲ್ ಹಾಗೂ ತಹಶೀಲ್ದಾರ್ ಅವರೇ ಒಳಗೆ ಇಡಲು ಅನುಮತಿ ನೀಡಿದ್ದು, ಅವರು ಕರೆ ಮಾಡಿದ ಬಳಿಕವೇ ಗೇಟ್ ಬೀಗ ತೆಗೆದು ವಾಹನವನ್ನು ಒಳಗಡೆ ಬಿಟ್ಟಿರುತ್ತೇನೆ ಎನ್ನುತ್ತಾರೆ.

    ಮತ್ತೆ ತಹಶೀಲ್ದಾರ್ ಅವರಿಗೆ ಕರೆ ಮಾಡಲು ಸೂಚಿಸಿದಾಗ ಎಸ್.ಡಿ.ಎ ಪ್ರಜ್ವಲ್ ಹಾಗೂ ತಹಶೀಲ್ದಾರ್ ರವರ ಸಂಭಾಷಣೆಯ ನಡೆ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ತದ ನಂತರ ಪೊಲೀಸ್ ಠಾಣೆ ಹಾಗೂ 112ಗೆ ಪತ್ರಕರ್ತರ ಮೂಲಕ ಮಾಹಿತಿ ನೀಡಿರುತ್ತೇವೆ. ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಯೂ ಬಂದಿದ್ದು, ಅವರಿಗೆ ಸಂಪೂರ್ಣ ವಿಷಯನ್ನು ತಿಳಿಸಿ ಠಾಣೆಗೆ ದೂರು ನೀಡಲು ತೆರಳಿದ ವೇಳೆ, ಠಾಣೆಯಲ್ಲಿದ್ದ ಪೋಲಿಸ್ ಸಿಬ್ಬಂದಿಗಳು ಬೆಳಗ್ಗೆ ಬಂದು ದೂರು ನೀಡಲು ತಿಳಿಸಿದ್ದಾರೆ.  ಮತ್ತು ಇದಕ್ಕೂ ಮೊದಲೇ ತಾಲೂಕು ಕಚೇರಿ ಆವರಣದಲ್ಲಿ ಅನಧಿಕೃತ ಅಂಗಡಿ ಪೆಟ್ಟಿಗೆಗಳನ್ನು ತೆರವು ಮಾಡಲು ಅಂಬಾರಿ ಎಕ್ಸ್‌ಪ್ರೆಸ್ ಕನ್ನಡ ಪಾಕ್ಷಿಕ ಪತ್ರಿಕೆಯ ಸಂಪಾದಕರು ಸರ್ಕಾರಕ್ಕೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದು, ಕ್ರಮವಹಿಸಲು ತಹಶೀಲ್ದಾರ್ ರವರಿಗೆ ಸೂಚಿಸಿರುತ್ತಾರೆ. ಆದರೂ ಸಹ ಇವರು ಯಾವುದೇ ಅಂಗಡಿ ಮಳಿಗೆಗಳನ್ನು ತೆರವು ಮಾಡದೆ ಅಕ್ರಮವಾಗಿ ಅಂಗಡಿ ಪೆಟ್ಟಿಗೆಗಳನ್ನು ಇಡಲು ಅನುಮತಿ ನೀಡುತ್ತಿರುವುದು ಇವರ ಕರ್ತವ್ಯ ನಿಷ್ಠೆ ಎಷ್ಟಿದೆ ಎಂದು ತಿಳಿಯುತ್ತದೆ ಎಂದು ಮಹೇಶ್ ಅಸಮಾಧಾನ ವ್ಯಕ್ತಪಡಿಸಿದರು.

    ತಾಲೂಕು ಕಚೇರಿಯಲ್ಲಿ ಸರ್ಕಾರ ಹಾಗೂ ಸಾರ್ವಜನಿಕ ಕಡತಗಳು ಮತ್ತು ಖಜಾನೆ ಇದ್ದು, ದುರುಪಯೋಗವಾದರೆ ಯಾರು ಹೊಣೆ ಎಂಬುದು ಪ್ರಶ್ನಾರ್ಥಕವಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ನವೀನ್ ಕುಮಾರ್ ಸಾಮಾಜಿಕ ಕಾರ್ಯಕರ್ತರು ಕೊರಟಗೆರೆ ಇವರಿಗೆ ತಹಶೀಲ್ದಾರ್ ರವರೇ ಖುದ್ದು ದಿನಾಂಕ 23/08/2022 ರಂದು ತಾಲೂಕು ಕಚೇರಿ ಆವರಣದಲ್ಲಿ ಇರುವ ಅಂಗಡಿಗಳಿಗೆ ಸಂಬಂಧಿಸಿದಂತೆ ಈ ಕಚೇರಿ ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಲಾಗಿ ಸದರಿ ಅಂಗಡಿ ಮಳಿಗೆಗಳಿಗೆ ಯಾವುದೇ ಪರವಾನಗಿ ಅಥವಾ ನಿರಾಕ್ಷೇಪಣಾ ಪತ್ರ ನೀಡಿರುವುದು ಕಂಡು ಬಂದಿಲ್ಲ ಎಂಬ ಅಂಶವನ್ನು ತಿಳಿಸಿರುತ್ತಾರೆ. ಇಷ್ಟೆಲ್ಲಾ ಇರುವಾಗ ತಹಶೀಲ್ದಾರ್ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿ ಯಾವುದೋ ಆಮೀಷಕ್ಕೆ ಒಳಗಾಗಿ ಪೆಟ್ಟಿಗೆ ಅಂಗಡಿ ಇಡಲು ಅನುಮತಿ ನೀಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಮಧುಗಿರಿ ಮಹೇಶ್ ಅವರು ತಿಳಿಸಿದ್ದಾರೆ.

    ಈ ಘಟನೆಗೆ ಸಂಬಂಧಿಸಿದಂತೆ  ಫೆ.11ರಂದು ಮಧುಗಿರಿ ಠಾಣೆಗೆ ಮಹೇಶ್ ಅವರು ದೂರು ನೀಡಿದ್ದಾರೆ. ಅಕ್ರಮವಾಗಿ ಹಾಗೂ ಅತಿಕ್ರಮವಾಗಿ ತಡರಾತ್ರಿಯಲ್ಲಿ ಪೆಟ್ಟಿಗೆ ಅಂಗಡಿಯನ್ನು ತಾಲೂಕು ಕಚೇರಿ ಆವರಣದಲ್ಲಿ ಇಡಲು ಮುಂದಾದವರ ಮೇಲೆ ದೂರು ದಾಖಲು ಮಾಡಿ ವಾಹನವನ್ನು ವಶಕ್ಕೆ ಪಡೆದು ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ. ಆದರೆ ಈ ಸಂಬಂಧ ಈವರೆಗೂ ಪೊಲೀಸರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ತಿಳಿದು ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಡಿ.24ರಂದು ಮಧುಗಿರಿ ತಾಲ್ಲೂಕು ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಕೆ.ಪಿ. ನಟರಾಜು ಆಯ್ಕೆ

    December 19, 2025

    ಮಧುಗಿರಿ: ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ರೈತ ಸಾವು

    December 18, 2025

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    December 10, 2025

    Comments are closed.

    Our Picks

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು

    December 24, 2025

    ಸರಗೂರು:  ವಿಕಲಚೇತನರ ಹಿತರಕ್ಷಣೆಗಾಗಿ ಇರುವ ಕಾನೂನಿನ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ’ ಎಂದು ಪ್ಯಾನೆಲ್ ವಕೀಲ ಹಾಗೂ ವಕೀಲರ…

    ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ

    December 24, 2025

    ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ

    December 24, 2025

    ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ

    December 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.