nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾತ್ರಿ 10:45ಕ್ಕೆ ಮಧುಗಿರಿ ತಾಲೂಕು ದಂಡಾಧಿಕಾರಿಗಳ ಕಚೇರಿ ಆವರಣಕ್ಕೆ ನುಗ್ಗಿದ ಕ್ರೈನ್:  ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ?
    ಮಧುಗಿರಿ February 13, 2025

    ರಾತ್ರಿ 10:45ಕ್ಕೆ ಮಧುಗಿರಿ ತಾಲೂಕು ದಂಡಾಧಿಕಾರಿಗಳ ಕಚೇರಿ ಆವರಣಕ್ಕೆ ನುಗ್ಗಿದ ಕ್ರೈನ್:  ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ?

    By adminFebruary 13, 2025No Comments3 Mins Read
    madhugiri

    ಮಧುಗಿರಿ: ಸರ್ಕಾರಿ ಕಚೇರಿಗಳ ಆವರಣಕ್ಕೆ,  ಕಚೇರಿ ಅವಧಿ ಮುಗಿದ ನಂತರ ಯಾವುದೇ ವಾಹನಗಳನ್ನು ಒಳಗೆ ಬಿಡುವಂತಿಲ್ಲ ಎನ್ನುವ ನಿಯಮಗಳಿದ್ದರೂ, ರಾತ್ರಿ 10 ಮುಕ್ಕಾಲು ಗಂಟೆಯ ಸುಮಾರಿಗೆ  ಕ್ರೈನ್ ವೊಂದು ಮಧುಗಿರಿ ತಾಲೂಕು ದಂಡಾಧಿಕಾರಿಗಳ ಕಚೇರಿ ಆವರಣಕ್ಕೆ ಪ್ರವೇಶಿಸಿದ ಘಟನೆ ನಡೆದಿದ್ದು, ಈ ಘಟನೆ ಸಾರ್ವಜನಿಕರಲ್ಲಿ ತಮ್ಮ ಕಡತಗಳ ಭದ್ರತೆಯ ಬಗ್ಗೆ ಆತಂಕ ಸೃಷ್ಟಿ ಮಾಡಿದೆ.

    ಫೆಬ್ರವರಿ 10ರಂದು ಈ ಘಟನೆ ನಡೆದಿದೆ. ಈ ಘಟನೆ ಸಂಬಂಧ ನಮ್ಮತುಮಕೂರು ವಾಹಿನಿಗೆ ಕಾಳಜಿ ಫೌಂಡೇಶನ್‌ನ ಸಂಘಟನಾ ಕಾರ್ಯದರ್ಶಿ ಮಧುಗಿರಿ ಮಹೇಶ್ ಮಾಹಿತಿ ನೀಡಿದ್ದಾರೆ.

    ರಾತ್ರಿ ಸುಮಾರು 9:30ಕ್ಕೆ ತಾಲೂಕು ದಂಡಾಧಿಕಾರಿಗಳ ಕಚೇರಿ ಆವರಣಕ್ಕೆ ಕ್ರೇನ್ ವಾಹನದ ಮೂಲಕ ಪೆಟ್ಟಿಗೆ ಅಂಗಡಿಯನ್ನು ತಂದು ಅಕ್ರಮವಾಗಿ ಇಡುತ್ತಿದ್ದಾರೆ  ಎನ್ನುವ ವಿಚಾರ ತಿಳಿದು ಬಂದಿದೆ. ಹೀಗಾಗಿ ಮಹೇಶ್ ಅವರು  ಕೂಡಲೇ ದಂಡಾಧಿಕಾರಿಗಳ ಕಚೇರಿಯ ಸೆಕ್ಯೂರಿಟಿ ಬಳಿ ಕೇಳಿದಾಗ ತಹಶೀಲ್ದಾರ್ ರವರೇ ಯಾವುದಾದರೂ ಒಂದು ಮೂಲೆಯಲ್ಲಿ ಇಟ್ಟುಕೊಳ್ಳಲಿ ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ಸಮಯ 10.45ಕ್ಕೆ ಕ್ರೇನ್ (ಕೆಎ 27 ಎನ್ 4749) ಮುಖಾಂತರ ಖಾಸಗಿ ವ್ಯಕ್ತಿಗಳು ಕಚೇರಿ ಸಿಬ್ಬಂದಿಗಳೊಂದಿಗೆ ಶಾಮೀಲಾಗಿ ಸರ್ಕಾರಿ ಕಚೇರಿಯ ಸಮಯವನ್ನು ಹೊರತುಪಡಿಸಿ ಹಾಗೂ ಸರ್ಕಾರಿ ಕಚೇರಿಯ ಬಂದೋಬಸ್ತ್ ಗೆ ದಕ್ಕೆಯಾಗುವಂತೆ ಅಂಗಡಿ ಪೆಟ್ಟಿಗೆಯನ್ನು ಅಕ್ರಮವಾಗಿ ಹಾಗೂ ಅತಿಕ್ರಮವಾಗಿ ಅವರಣಕ್ಕೆ ತಂದು ಕಚೇರಿಯ ಬಲಭಾಗದಲ್ಲಿ ಇಡಲು ಬಂದಾಗ ಸ್ಥಳೀಯ ಪತ್ರಕರ್ತರೂ ಆದ ನಂದೀಶ್ ಹಾಗೂ ಕಿರಣ್ ರವರ ಸಹಯೋಗದಲ್ಲಿ ತಡೆದು ಪ್ರಶ್ನಿಸಿದಾಗ ಅಲ್ಲಿರುವ ಸಿಬ್ಬಂದಿ ಎಸ್.ಡಿ.ಎ ಪ್ರಜ್ವಲ್ ಹಾಗೂ ತಹಶೀಲ್ದಾರ್ ಅವರೇ ಒಳಗೆ ಇಡಲು ಅನುಮತಿ ನೀಡಿದ್ದು, ಅವರು ಕರೆ ಮಾಡಿದ ಬಳಿಕವೇ ಗೇಟ್ ಬೀಗ ತೆಗೆದು ವಾಹನವನ್ನು ಒಳಗಡೆ ಬಿಟ್ಟಿರುತ್ತೇನೆ ಎನ್ನುತ್ತಾರೆ.

    ಮತ್ತೆ ತಹಶೀಲ್ದಾರ್ ಅವರಿಗೆ ಕರೆ ಮಾಡಲು ಸೂಚಿಸಿದಾಗ ಎಸ್.ಡಿ.ಎ ಪ್ರಜ್ವಲ್ ಹಾಗೂ ತಹಶೀಲ್ದಾರ್ ರವರ ಸಂಭಾಷಣೆಯ ನಡೆ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ತದ ನಂತರ ಪೊಲೀಸ್ ಠಾಣೆ ಹಾಗೂ 112ಗೆ ಪತ್ರಕರ್ತರ ಮೂಲಕ ಮಾಹಿತಿ ನೀಡಿರುತ್ತೇವೆ. ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಯೂ ಬಂದಿದ್ದು, ಅವರಿಗೆ ಸಂಪೂರ್ಣ ವಿಷಯನ್ನು ತಿಳಿಸಿ ಠಾಣೆಗೆ ದೂರು ನೀಡಲು ತೆರಳಿದ ವೇಳೆ, ಠಾಣೆಯಲ್ಲಿದ್ದ ಪೋಲಿಸ್ ಸಿಬ್ಬಂದಿಗಳು ಬೆಳಗ್ಗೆ ಬಂದು ದೂರು ನೀಡಲು ತಿಳಿಸಿದ್ದಾರೆ.  ಮತ್ತು ಇದಕ್ಕೂ ಮೊದಲೇ ತಾಲೂಕು ಕಚೇರಿ ಆವರಣದಲ್ಲಿ ಅನಧಿಕೃತ ಅಂಗಡಿ ಪೆಟ್ಟಿಗೆಗಳನ್ನು ತೆರವು ಮಾಡಲು ಅಂಬಾರಿ ಎಕ್ಸ್‌ಪ್ರೆಸ್ ಕನ್ನಡ ಪಾಕ್ಷಿಕ ಪತ್ರಿಕೆಯ ಸಂಪಾದಕರು ಸರ್ಕಾರಕ್ಕೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದು, ಕ್ರಮವಹಿಸಲು ತಹಶೀಲ್ದಾರ್ ರವರಿಗೆ ಸೂಚಿಸಿರುತ್ತಾರೆ. ಆದರೂ ಸಹ ಇವರು ಯಾವುದೇ ಅಂಗಡಿ ಮಳಿಗೆಗಳನ್ನು ತೆರವು ಮಾಡದೆ ಅಕ್ರಮವಾಗಿ ಅಂಗಡಿ ಪೆಟ್ಟಿಗೆಗಳನ್ನು ಇಡಲು ಅನುಮತಿ ನೀಡುತ್ತಿರುವುದು ಇವರ ಕರ್ತವ್ಯ ನಿಷ್ಠೆ ಎಷ್ಟಿದೆ ಎಂದು ತಿಳಿಯುತ್ತದೆ ಎಂದು ಮಹೇಶ್ ಅಸಮಾಧಾನ ವ್ಯಕ್ತಪಡಿಸಿದರು.

    ತಾಲೂಕು ಕಚೇರಿಯಲ್ಲಿ ಸರ್ಕಾರ ಹಾಗೂ ಸಾರ್ವಜನಿಕ ಕಡತಗಳು ಮತ್ತು ಖಜಾನೆ ಇದ್ದು, ದುರುಪಯೋಗವಾದರೆ ಯಾರು ಹೊಣೆ ಎಂಬುದು ಪ್ರಶ್ನಾರ್ಥಕವಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ನವೀನ್ ಕುಮಾರ್ ಸಾಮಾಜಿಕ ಕಾರ್ಯಕರ್ತರು ಕೊರಟಗೆರೆ ಇವರಿಗೆ ತಹಶೀಲ್ದಾರ್ ರವರೇ ಖುದ್ದು ದಿನಾಂಕ 23/08/2022 ರಂದು ತಾಲೂಕು ಕಚೇರಿ ಆವರಣದಲ್ಲಿ ಇರುವ ಅಂಗಡಿಗಳಿಗೆ ಸಂಬಂಧಿಸಿದಂತೆ ಈ ಕಚೇರಿ ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಲಾಗಿ ಸದರಿ ಅಂಗಡಿ ಮಳಿಗೆಗಳಿಗೆ ಯಾವುದೇ ಪರವಾನಗಿ ಅಥವಾ ನಿರಾಕ್ಷೇಪಣಾ ಪತ್ರ ನೀಡಿರುವುದು ಕಂಡು ಬಂದಿಲ್ಲ ಎಂಬ ಅಂಶವನ್ನು ತಿಳಿಸಿರುತ್ತಾರೆ. ಇಷ್ಟೆಲ್ಲಾ ಇರುವಾಗ ತಹಶೀಲ್ದಾರ್ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿ ಯಾವುದೋ ಆಮೀಷಕ್ಕೆ ಒಳಗಾಗಿ ಪೆಟ್ಟಿಗೆ ಅಂಗಡಿ ಇಡಲು ಅನುಮತಿ ನೀಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಮಧುಗಿರಿ ಮಹೇಶ್ ಅವರು ತಿಳಿಸಿದ್ದಾರೆ.

    ಈ ಘಟನೆಗೆ ಸಂಬಂಧಿಸಿದಂತೆ  ಫೆ.11ರಂದು ಮಧುಗಿರಿ ಠಾಣೆಗೆ ಮಹೇಶ್ ಅವರು ದೂರು ನೀಡಿದ್ದಾರೆ. ಅಕ್ರಮವಾಗಿ ಹಾಗೂ ಅತಿಕ್ರಮವಾಗಿ ತಡರಾತ್ರಿಯಲ್ಲಿ ಪೆಟ್ಟಿಗೆ ಅಂಗಡಿಯನ್ನು ತಾಲೂಕು ಕಚೇರಿ ಆವರಣದಲ್ಲಿ ಇಡಲು ಮುಂದಾದವರ ಮೇಲೆ ದೂರು ದಾಖಲು ಮಾಡಿ ವಾಹನವನ್ನು ವಶಕ್ಕೆ ಪಡೆದು ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ. ಆದರೆ ಈ ಸಂಬಂಧ ಈವರೆಗೂ ಪೊಲೀಸರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ತಿಳಿದು ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.