nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ

    April 6, 2026

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ತಿಪಟೂರು: ಕಾರು–ಬೈಕ್ ನಡುವೆ ಭೀಕರ ಅಪಘಾತ: ವೆಲ್ಡಿಂಗ್ ಕಾರ್ಮಿಕ ಸಾವು
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    • ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಲೆಗಳಲ್ಲಿ ವಾರದ ಎರಡು ದಿನ ಸಂವಿಧಾನ ಜಾಗೃತಿ ಮೂಡಿಸಿ: ಪಟ್ಟಣದಲ್ಲಿ ಶಾಸಕ ಎಚ್.ವಿ.ವೆಂಕಟೇಶ್ ಸೂಚನೆ
    ಪಾವಗಡ January 26, 2025

    ಶಾಲೆಗಳಲ್ಲಿ ವಾರದ ಎರಡು ದಿನ ಸಂವಿಧಾನ ಜಾಗೃತಿ ಮೂಡಿಸಿ: ಪಟ್ಟಣದಲ್ಲಿ ಶಾಸಕ ಎಚ್.ವಿ.ವೆಂಕಟೇಶ್ ಸೂಚನೆ

    By adminJanuary 26, 2025No Comments2 Mins Read
    h v venkatesh

    ಪಾವಗಡ: ವಾರದ ಎರಡು ದಿನ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಮೂಡಿಸುವುದರ ಜೊತೆಗೆ ಸಂರಕ್ಷಿಸುವ ಬಗ್ಗೆ ಅರಿವು ಮೂಡಿಸಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಪಾವಗಡ ಶಾಸಕ ಎಚ್.ವಿ.ವೆಂಕಟೇಶ್ ಸೂಚಿಸಿದ್ದಾರೆ.

    ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ನಂತರ ಮಾತನಾಡಿದ ಅವರು ದೀನ ದಲಿತರು ಇಂದು ಉನ್ನತ ಸ್ಥಾನಗಳಲ್ಲಿ ಇರಲು ಸಂವಿಧಾನ ಅಡಿಪಾಯವಾಗಿರುತ್ತದೆ, ಇಂತಹ ಸಂವಿಧಾನದ ಬಗ್ಗೆ ಪ್ರತಿಯೊಬ್ಬರು ಜಾಗೃತಿಯನ್ನು ಹೊಂದಿರಬೇಕು, ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಪ್ರತಿವಾರ ಎರಡು ದಿನಗಳ ಕಾಲ ಅರಿವು ಮೂಡಿಸುವಂತಹ ಕಾರ್ಯಕ್ರಮಕ್ಕೆ ಮುಂದಾಗ ಬೇಕೆಂದರು.


    Provided by
    Provided by

    ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಧ್ವಜ ಸಂದೇಶ ನೀಡಿದ ತಹಶೀಲ್ದಾರ್ ಡಿ.ಎನ್.ವರದರಾಜು , ಭಾರತ ದೇಶ ಅನೇಕ ವರ್ಷಗಳ ಕಾಲ ಬೇರೆಯವರ ಕಪಿಮುಷ್ಠಿಯಲ್ಲಿದ್ದು ಸ್ವಾತಂತ್ರ್ಯ ಪಡೆದುಕೊಂಡ ಬಳಿಕ, ದೇಶದ ಜನರ ರಕ್ಷಣೆಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ರೂಪಿಸಿದ್ದು ನಮ್ಮೆಲ್ಲರ ಏಳಿಗೆ ಕಾರಣವಾಗಿದೆ, ಸದ್ಯ ಪಾವಗಡ ತಾಲೂಕು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು ಮುಂದಿನ ದಿನಗಳಲ್ಲಿ ಅನೇಕ ಜನಪರ ಕಾರ್ಯಕ್ರಮಗಳು ಜಾರಿಯಾಗಲಿವೆ ಎಂದರು.

    ಪುರಸಭಾ ಅಧ್ಯಕ್ಷ ಪಿ.ಎಚ್. ರಾಜೇಶ್ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿದ ಬಗೆ ಮತ್ತು ಸದ್ಯ ಹಿಂದುಳಿದ ವರ್ಗಗಳ ಏಳಿಗೆಗೆ ಸಂವಿಧಾನ ಯಾವ ರೀತಿ ಪರಿಣಾಮಕಾರಿಯಾಗಿದೆ ಎನ್ನುವುದನ್ನು ಕಾರ್ಯಕ್ರಮದಲ್ಲಿ ತಿಳಿಸಿದರು.

    ಈ ಸಂದರ್ಭದಲ್ಲಿ ಹಿರಿಯ ಪತ್ರಿಕಾ ವಿತರಕರಾದ ಲಕ್ಷ್ಮೀ ನಾರಾಯಣ ಅವರನ್ನು ಸನ್ಮಾನಿಸಲಾಗಿದ್ದು, 20ಕ್ಕೂ ಅಧಿಕ ರೈತ ರೈತರಿಗೆ ಪಹಣಿಯನ್ನು ವಿತರಿಸಲಾಗಿದೆ.
    ಕಾರ್ಯಕ್ರಮದಲ್ಲಿ ತಾಪಂ ಇಓ ಜಾನಕಿರಾಮ್, ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಣಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೇಶ್ ಬಾಬು, ಮಾಜಿ ಅಧ್ಯಕ್ಷರಾದ ಶಂಕರ್ ರೆಡ್ಡಿ, ಸಮಾಜ ಸೇವಕ ಬತ್ತಿನೇನಿ ನಾಗೇಂದ್ರ ರಾವ್, ಸದಸ್ಯರುಗಳಾದ ರವಿ, ಇಮ್ರಾನ್, ಶ್ರೀನಿವಾಸ್ ಬಾಬು, ಗಂಗಾಧರ್, ರಾಮಲಿಂಗ, ಗ್ರಾಮಾಂತರ ವೃತ್ತ ನಿರೀಕ್ಷಕರಾದ ಗಿರೀಶ್, ನಗರ ವೃತ್ತ ನಿರೀಕ್ಷಕರಾದ ಸುರೇಶ್, ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ರವಿಕುಮಾರ್, ಜಿಲ್ಲಾ ರೈತ ಸಂಘದ ಅಧ್ಯಕ್ಷ ಪೂಜಾರಪ್ಪ, ರೈತ ಸಂಘದ ಅಧ್ಯಕ್ಷರು ಜಿ. ನರಸಿಂಹ ರೆಡ್ಡಿ, ಕಿಸಾನ್ ಸಂಘದ ಅಧ್ಯಕ್ಷರಾದ ಕೃಷ್ಣರಾವ್, ಬಿಆರ್ಸಿ ವೆಂಕಟೇಶ್, ಟಿಪಿಓ ವಿಜಯಕುಮಾರ್ ಆರ್.ಐ.ರಾಜಗೋಪಾಲ್, ನಾರಾಯಣ ಗೌಡ ಗ್ರಾಮ ಆಡಳಿತ ಅಧಿಕಾರಿ ರಾಜೇಶ್ ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪಾವಗಡ: ಬೀದಿ ನಾಯಿಗಳ ದಾಳಿಗೆ 20 ಕುರಿಗಳು ಬಲಿ — ಸಂಕಷ್ಟದಲ್ಲಿ ಕುರಿಗಾಹಿ ಕುಟುಂಬ

    March 30, 2026

    ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ

    March 30, 2026

    ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?

    March 27, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ

    April 6, 2026

    ಕೊರಟಗೆರೆ: ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ ನಿವಾಸಿಗಳು ಈಗ ಕರಡಿ ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ. ಪಟ್ಟಣದ ತಾಲ್ಲೂಕು ಕಚೇರಿಯ ಹಿಂಭಾಗದಲ್ಲಿರುವ…

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.