nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025
    Facebook Twitter Instagram
    ಟ್ರೆಂಡಿಂಗ್
    • ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
    • ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
    • ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
    • ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
    • ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
    • ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
    • ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
    • ಖ್ಯಾತ ಖಳನಟ ಹರೀಶ್ ರಾಯ್  ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಲೆಗಳಲ್ಲಿ ವಾರದ ಎರಡು ದಿನ ಸಂವಿಧಾನ ಜಾಗೃತಿ ಮೂಡಿಸಿ: ಪಟ್ಟಣದಲ್ಲಿ ಶಾಸಕ ಎಚ್.ವಿ.ವೆಂಕಟೇಶ್ ಸೂಚನೆ
    ಪಾವಗಡ January 26, 2025

    ಶಾಲೆಗಳಲ್ಲಿ ವಾರದ ಎರಡು ದಿನ ಸಂವಿಧಾನ ಜಾಗೃತಿ ಮೂಡಿಸಿ: ಪಟ್ಟಣದಲ್ಲಿ ಶಾಸಕ ಎಚ್.ವಿ.ವೆಂಕಟೇಶ್ ಸೂಚನೆ

    By adminJanuary 26, 2025No Comments2 Mins Read
    h v venkatesh

    ಪಾವಗಡ: ವಾರದ ಎರಡು ದಿನ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಮೂಡಿಸುವುದರ ಜೊತೆಗೆ ಸಂರಕ್ಷಿಸುವ ಬಗ್ಗೆ ಅರಿವು ಮೂಡಿಸಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಪಾವಗಡ ಶಾಸಕ ಎಚ್.ವಿ.ವೆಂಕಟೇಶ್ ಸೂಚಿಸಿದ್ದಾರೆ.

    ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ನಂತರ ಮಾತನಾಡಿದ ಅವರು ದೀನ ದಲಿತರು ಇಂದು ಉನ್ನತ ಸ್ಥಾನಗಳಲ್ಲಿ ಇರಲು ಸಂವಿಧಾನ ಅಡಿಪಾಯವಾಗಿರುತ್ತದೆ, ಇಂತಹ ಸಂವಿಧಾನದ ಬಗ್ಗೆ ಪ್ರತಿಯೊಬ್ಬರು ಜಾಗೃತಿಯನ್ನು ಹೊಂದಿರಬೇಕು, ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಪ್ರತಿವಾರ ಎರಡು ದಿನಗಳ ಕಾಲ ಅರಿವು ಮೂಡಿಸುವಂತಹ ಕಾರ್ಯಕ್ರಮಕ್ಕೆ ಮುಂದಾಗ ಬೇಕೆಂದರು.


    Provided by
    Provided by

    ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಧ್ವಜ ಸಂದೇಶ ನೀಡಿದ ತಹಶೀಲ್ದಾರ್ ಡಿ.ಎನ್.ವರದರಾಜು , ಭಾರತ ದೇಶ ಅನೇಕ ವರ್ಷಗಳ ಕಾಲ ಬೇರೆಯವರ ಕಪಿಮುಷ್ಠಿಯಲ್ಲಿದ್ದು ಸ್ವಾತಂತ್ರ್ಯ ಪಡೆದುಕೊಂಡ ಬಳಿಕ, ದೇಶದ ಜನರ ರಕ್ಷಣೆಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ರೂಪಿಸಿದ್ದು ನಮ್ಮೆಲ್ಲರ ಏಳಿಗೆ ಕಾರಣವಾಗಿದೆ, ಸದ್ಯ ಪಾವಗಡ ತಾಲೂಕು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು ಮುಂದಿನ ದಿನಗಳಲ್ಲಿ ಅನೇಕ ಜನಪರ ಕಾರ್ಯಕ್ರಮಗಳು ಜಾರಿಯಾಗಲಿವೆ ಎಂದರು.

    ಪುರಸಭಾ ಅಧ್ಯಕ್ಷ ಪಿ.ಎಚ್. ರಾಜೇಶ್ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿದ ಬಗೆ ಮತ್ತು ಸದ್ಯ ಹಿಂದುಳಿದ ವರ್ಗಗಳ ಏಳಿಗೆಗೆ ಸಂವಿಧಾನ ಯಾವ ರೀತಿ ಪರಿಣಾಮಕಾರಿಯಾಗಿದೆ ಎನ್ನುವುದನ್ನು ಕಾರ್ಯಕ್ರಮದಲ್ಲಿ ತಿಳಿಸಿದರು.

    ಈ ಸಂದರ್ಭದಲ್ಲಿ ಹಿರಿಯ ಪತ್ರಿಕಾ ವಿತರಕರಾದ ಲಕ್ಷ್ಮೀ ನಾರಾಯಣ ಅವರನ್ನು ಸನ್ಮಾನಿಸಲಾಗಿದ್ದು, 20ಕ್ಕೂ ಅಧಿಕ ರೈತ ರೈತರಿಗೆ ಪಹಣಿಯನ್ನು ವಿತರಿಸಲಾಗಿದೆ.
    ಕಾರ್ಯಕ್ರಮದಲ್ಲಿ ತಾಪಂ ಇಓ ಜಾನಕಿರಾಮ್, ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಣಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೇಶ್ ಬಾಬು, ಮಾಜಿ ಅಧ್ಯಕ್ಷರಾದ ಶಂಕರ್ ರೆಡ್ಡಿ, ಸಮಾಜ ಸೇವಕ ಬತ್ತಿನೇನಿ ನಾಗೇಂದ್ರ ರಾವ್, ಸದಸ್ಯರುಗಳಾದ ರವಿ, ಇಮ್ರಾನ್, ಶ್ರೀನಿವಾಸ್ ಬಾಬು, ಗಂಗಾಧರ್, ರಾಮಲಿಂಗ, ಗ್ರಾಮಾಂತರ ವೃತ್ತ ನಿರೀಕ್ಷಕರಾದ ಗಿರೀಶ್, ನಗರ ವೃತ್ತ ನಿರೀಕ್ಷಕರಾದ ಸುರೇಶ್, ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ರವಿಕುಮಾರ್, ಜಿಲ್ಲಾ ರೈತ ಸಂಘದ ಅಧ್ಯಕ್ಷ ಪೂಜಾರಪ್ಪ, ರೈತ ಸಂಘದ ಅಧ್ಯಕ್ಷರು ಜಿ. ನರಸಿಂಹ ರೆಡ್ಡಿ, ಕಿಸಾನ್ ಸಂಘದ ಅಧ್ಯಕ್ಷರಾದ ಕೃಷ್ಣರಾವ್, ಬಿಆರ್ಸಿ ವೆಂಕಟೇಶ್, ಟಿಪಿಓ ವಿಜಯಕುಮಾರ್ ಆರ್.ಐ.ರಾಜಗೋಪಾಲ್, ನಾರಾಯಣ ಗೌಡ ಗ್ರಾಮ ಆಡಳಿತ ಅಧಿಕಾರಿ ರಾಜೇಶ್ ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತಿಪ್ಪಯನದುರ್ಗ ಗ್ರಾಮದಲ್ಲಿ ಮಣ್ಣು ಹಗರಣ: ಪ್ರಶ್ನಿಸಿದಾಗ ಸ್ಥಳೀಯ ಶಾಸಕರ ಹೆಸರು ದುರ್ಬಳಕೆ!

    November 5, 2025

    ತಾಲ್ಲೂಕು ಮಟ್ಟದ ಕ್ರೀಡಾಕೂಟ: ಜ್ಞಾನ ಬೋಧಿನಿ ಆಂಗ್ಲ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಸಾಧನೆ

    October 25, 2025

    ‘ನಮ್ಮ ಊರು ನಮ್ಮ ಕೆರೆ’ ಕಾರ್ಯಕ್ರಮದಡಿ ನ್ಯಾಯದಗುಂಟೆ ಗ್ರಾಮದಲ್ಲಿ ಕೆರೆಗೆ ಗುದ್ದಲಿ ಪೂಜೆ

    October 17, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಸರಗೂರು:  ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ  ನ.16 ರಿಂದ 18 ವರೆಗೆ ನಡೆಯಲಿದ್ದು, ಜಾತ್ರಾ  ಲಾಡು ಪ್ರಸಾದ…

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025

    ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ

    November 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.