nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ

    July 3, 2025

    ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್

    July 3, 2025
    Facebook Twitter Instagram
    ಟ್ರೆಂಡಿಂಗ್
    • ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ
    • ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ
    • ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್
    • ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ: ಆ.1ರಿಂದ ಹೋರಾಟ: ಗೋವಿಂದ ಕಾರಜೋಳ
    • ಡಿ.ಕೆ.ಶಿವಕುಮಾರ್‌ ಸಿಎಂ ಆಗಬೇಕು ಎಂಬ ಆಸೆ ನನಗೂ ಇದೆ: ಡಿ.ಕೆ.ಸುರೇಶ್‌
    • ಅಕ್ರಮ ಪಡಿತರ ಅಕ್ಕಿ ಸಾಗಾಟ: ಕಮಲನಗರ ಪೊಲೀಸರಿಂದ ದಾಳಿ
    • ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ
    • ಕಾಂಗ್ರೆಸ್ ಸರ್ಕಾರದಿಂದ ಪೊಲೀಸ್ ಇಲಾಖೆಯ ಮನೋಬಲಕ್ಕೆ ಧಕ್ಕೆ!: ಆರ್.ಅಶೋಕ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಲೆಗಳಲ್ಲಿ ವಾರದ ಎರಡು ದಿನ ಸಂವಿಧಾನ ಜಾಗೃತಿ ಮೂಡಿಸಿ: ಪಟ್ಟಣದಲ್ಲಿ ಶಾಸಕ ಎಚ್.ವಿ.ವೆಂಕಟೇಶ್ ಸೂಚನೆ
    ಪಾವಗಡ January 26, 2025

    ಶಾಲೆಗಳಲ್ಲಿ ವಾರದ ಎರಡು ದಿನ ಸಂವಿಧಾನ ಜಾಗೃತಿ ಮೂಡಿಸಿ: ಪಟ್ಟಣದಲ್ಲಿ ಶಾಸಕ ಎಚ್.ವಿ.ವೆಂಕಟೇಶ್ ಸೂಚನೆ

    By adminJanuary 26, 2025No Comments2 Mins Read
    h v venkatesh

    ಪಾವಗಡ: ವಾರದ ಎರಡು ದಿನ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಮೂಡಿಸುವುದರ ಜೊತೆಗೆ ಸಂರಕ್ಷಿಸುವ ಬಗ್ಗೆ ಅರಿವು ಮೂಡಿಸಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಪಾವಗಡ ಶಾಸಕ ಎಚ್.ವಿ.ವೆಂಕಟೇಶ್ ಸೂಚಿಸಿದ್ದಾರೆ.

    ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ನಂತರ ಮಾತನಾಡಿದ ಅವರು ದೀನ ದಲಿತರು ಇಂದು ಉನ್ನತ ಸ್ಥಾನಗಳಲ್ಲಿ ಇರಲು ಸಂವಿಧಾನ ಅಡಿಪಾಯವಾಗಿರುತ್ತದೆ, ಇಂತಹ ಸಂವಿಧಾನದ ಬಗ್ಗೆ ಪ್ರತಿಯೊಬ್ಬರು ಜಾಗೃತಿಯನ್ನು ಹೊಂದಿರಬೇಕು, ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಪ್ರತಿವಾರ ಎರಡು ದಿನಗಳ ಕಾಲ ಅರಿವು ಮೂಡಿಸುವಂತಹ ಕಾರ್ಯಕ್ರಮಕ್ಕೆ ಮುಂದಾಗ ಬೇಕೆಂದರು.


    Provided by

    ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಧ್ವಜ ಸಂದೇಶ ನೀಡಿದ ತಹಶೀಲ್ದಾರ್ ಡಿ.ಎನ್.ವರದರಾಜು , ಭಾರತ ದೇಶ ಅನೇಕ ವರ್ಷಗಳ ಕಾಲ ಬೇರೆಯವರ ಕಪಿಮುಷ್ಠಿಯಲ್ಲಿದ್ದು ಸ್ವಾತಂತ್ರ್ಯ ಪಡೆದುಕೊಂಡ ಬಳಿಕ, ದೇಶದ ಜನರ ರಕ್ಷಣೆಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ರೂಪಿಸಿದ್ದು ನಮ್ಮೆಲ್ಲರ ಏಳಿಗೆ ಕಾರಣವಾಗಿದೆ, ಸದ್ಯ ಪಾವಗಡ ತಾಲೂಕು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು ಮುಂದಿನ ದಿನಗಳಲ್ಲಿ ಅನೇಕ ಜನಪರ ಕಾರ್ಯಕ್ರಮಗಳು ಜಾರಿಯಾಗಲಿವೆ ಎಂದರು.

    ಪುರಸಭಾ ಅಧ್ಯಕ್ಷ ಪಿ.ಎಚ್. ರಾಜೇಶ್ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿದ ಬಗೆ ಮತ್ತು ಸದ್ಯ ಹಿಂದುಳಿದ ವರ್ಗಗಳ ಏಳಿಗೆಗೆ ಸಂವಿಧಾನ ಯಾವ ರೀತಿ ಪರಿಣಾಮಕಾರಿಯಾಗಿದೆ ಎನ್ನುವುದನ್ನು ಕಾರ್ಯಕ್ರಮದಲ್ಲಿ ತಿಳಿಸಿದರು.

    ಈ ಸಂದರ್ಭದಲ್ಲಿ ಹಿರಿಯ ಪತ್ರಿಕಾ ವಿತರಕರಾದ ಲಕ್ಷ್ಮೀ ನಾರಾಯಣ ಅವರನ್ನು ಸನ್ಮಾನಿಸಲಾಗಿದ್ದು, 20ಕ್ಕೂ ಅಧಿಕ ರೈತ ರೈತರಿಗೆ ಪಹಣಿಯನ್ನು ವಿತರಿಸಲಾಗಿದೆ.
    ಕಾರ್ಯಕ್ರಮದಲ್ಲಿ ತಾಪಂ ಇಓ ಜಾನಕಿರಾಮ್, ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಣಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೇಶ್ ಬಾಬು, ಮಾಜಿ ಅಧ್ಯಕ್ಷರಾದ ಶಂಕರ್ ರೆಡ್ಡಿ, ಸಮಾಜ ಸೇವಕ ಬತ್ತಿನೇನಿ ನಾಗೇಂದ್ರ ರಾವ್, ಸದಸ್ಯರುಗಳಾದ ರವಿ, ಇಮ್ರಾನ್, ಶ್ರೀನಿವಾಸ್ ಬಾಬು, ಗಂಗಾಧರ್, ರಾಮಲಿಂಗ, ಗ್ರಾಮಾಂತರ ವೃತ್ತ ನಿರೀಕ್ಷಕರಾದ ಗಿರೀಶ್, ನಗರ ವೃತ್ತ ನಿರೀಕ್ಷಕರಾದ ಸುರೇಶ್, ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ರವಿಕುಮಾರ್, ಜಿಲ್ಲಾ ರೈತ ಸಂಘದ ಅಧ್ಯಕ್ಷ ಪೂಜಾರಪ್ಪ, ರೈತ ಸಂಘದ ಅಧ್ಯಕ್ಷರು ಜಿ. ನರಸಿಂಹ ರೆಡ್ಡಿ, ಕಿಸಾನ್ ಸಂಘದ ಅಧ್ಯಕ್ಷರಾದ ಕೃಷ್ಣರಾವ್, ಬಿಆರ್ಸಿ ವೆಂಕಟೇಶ್, ಟಿಪಿಓ ವಿಜಯಕುಮಾರ್ ಆರ್.ಐ.ರಾಜಗೋಪಾಲ್, ನಾರಾಯಣ ಗೌಡ ಗ್ರಾಮ ಆಡಳಿತ ಅಧಿಕಾರಿ ರಾಜೇಶ್ ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಅಕ್ರಾ:  ಪ್ರಧಾನಿ ನರೇಂದ್ರ ಮೋದಿ ಅವರಿಗೆ “ವಿಶಿಷ್ಟ ರಾಜನೀತಿ ಮತ್ತು ಪ್ರಭಾವಶಾಲಿ ಜಾಗತಿಕ ನಾಯಕತ್ವ” ಕ್ಕಾಗಿ ದೇಶದ ರಾಷ್ಟ್ರೀಯ ಗೌರವವಾದ…

    ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ

    July 3, 2025

    ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್

    July 3, 2025

    ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ: ಆ.1ರಿಂದ ಹೋರಾಟ: ಗೋವಿಂದ ಕಾರಜೋಳ

    July 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.