nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026
    Facebook Twitter Instagram
    ಟ್ರೆಂಡಿಂಗ್
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    • ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
    • ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
    • ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
    • ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
    • ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ:  ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    ತುಮಕೂರು May 13, 2025

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    By adminMay 13, 2025No Comments2 Mins Read
    tippeswamy

    ತುಮಕೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಡೆಂಗ್ಯೂ, ಚಿಕುಂಗುನ್ಯಾ, ಮೆದುಳುಜ್ವರ, ಆನೆ ಕಾಲು ರೋಗ, ಮಲೇರಿಯಾ ನಿಯಂತ್ರಣದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಮಲೇರಿಯಾ ಅಧಿಕಾರಿ ಡಾ.ಕೆ.ಎಸ್. ರಂಗನಾಥ್ ಅವರಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ, ತಾಯಿ ಮರಣ ಮತ್ತು ಶಿಶು ಮರಣ ಪ್ರಕರಣಗಳ ಪರಿಶೀಲನೆಗೆ ಸಂಬಂಧಿಸಿದಂತೆ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಲೇರಿಯ, ಡೆಂಗ್ಯೂ, ಚಿಕುಂಗುನ್ಯಾ, ಮೆದುಳುಜ್ವರ, ಆನೆ ಕಾಲು ರೋಗದ ಪ್ರಕರಣಗಳು ಬಾರದಂತೆ ಶಾಲಾ–ಕಾಲೇಜು, ವಸತಿ ನಿಲಯಗಳಲ್ಲಿಯೂ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದು ಸೂಚಿಸಿದರು.

    ಸೊಳ್ಳೆಗಳ ಮೂಲಕ ಡೆಂಗ್ಯೂ, ಚಿಕುಂಗುನ್ಯಾ, ಮೆದುಳುಜ್ವರ ರೋಗಗಳು ಹರಡುತ್ತಿದ್ದು, ಸೊಳ್ಳೆಗಳನ್ನು ನಿಯಂತ್ರಿಸಲು ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸುವ; ಸ್ವಚ್ಛತೆ ಕಾಪಾಡಿಕೊಳ್ಳುವ; ನೀರಿನ ಬಾವಿ, ಕಾರಂಜಿ, ಕೆರೆ–ಕುಂಟೆ, ಹೊಂಡಗಳಿಗೆ ಸೊಳ್ಳೆ ಮರಿಗಳನ್ನು ತಿನ್ನುವ; ಗ್ಯಾಂಬೂಸಿಯಾ ಮತ್ತು ಗಪ್ಪಿ ಲಾರ್ವಾಹಾರಿ ಮೀನುಗಳನ್ನು ಬಿಡುವ; ಹಠಾತ್ತನೆ ಬರುವ ತೀವ್ರ ಜ್ವರ, ತಲೆ ನೋವು, ವಾಕರಿಕೆ ಲಕ್ಷಣಗಳು ಕಂಡು ಬಂದಾಗ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಆರೋಗ್ಯ, ಮಹಾನಗರಪಾಲಿಕೆ, ಶಿಕ್ಷಣ, ಮೀನುಗಾರಿಕೆ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ಸಂಬAಧಿಸಿದ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.

    ಮಲೇರಿಯಾ ಅಧಿಕಾರಿ ಡಾ.ಕೆ.ಎಸ್.ರಂಗನಾಥ್ ಮಾತನಾಡಿ ಜಿಲ್ಲೆಯಲ್ಲಿ 2020 ರಿಂದ 2025ರ ಏಪ್ರಿಲ್ ಮಾಹೆವರೆಗೆ 40 ಮಲೇರಿಯಾ, 305 ಮೈಕ್ರೋಫೈಲೇರಿಯಾ, 1807 ಡೆಂಗ್ಯೂ, 566 ಚಿಕುಂಗುನ್ಯಾ ಪ್ರಕರಣಗಳು ದೃಢಪಟ್ಟಿವೆ. ದೃಢಪಟ್ಟ ಎಲ್ಲಾ ಮಲೇರಿಯಾ ಹಾಗೂ ಮೈಕ್ರೋಫೈಲೇರಿಯಾ ಪ್ರಕರಣಗಳು ಇತರೆ ರಾಜ್ಯ ಮತ್ತು ಬೇರೆ ಜಿಲ್ಲೆಗಳಿಗೆ ಸೇರಿದ ಪ್ರಕರಣಗಳಾಗಿವೆ ಎಂದು ಮಾಹಿತಿ ನೀಡಿದರು.

    ಆರ್ ಸಿಹೆಚ್ ಅಧಿಕಾರಿ ಡಾ.ಸಿ.ಆರ್. ಮೋಹನ್ ಅವರು ತಾಯಿ ಮರಣ ಮತ್ತು ಶಿಶು ಮರಣ ಪ್ರಕರಣಗಳ ಬಗ್ಗೆ ಮಾಹಿತಿ ನೀಡುತ್ತಾ, ಕಳೆದ 2024ರ ಎಪ್ರಿಲ್ ಮಾಹೆಯಿಂದ ಮಾರ್ಚ್ 2025ರವರೆಗೆ ಜಿಲ್ಲೆಯಲ್ಲಿ ಜನಿಸಿದ 28505 ಜೀವಂತ ಮಕ್ಕಳ ಪೈಕಿ 292 ಮಕ್ಕಳು ಹಾಗೂ 19 ತಾಯಿ ಮರಣ ಪ್ರಕರಣಗಳು ವರದಿಯಾಗಿವೆ. ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ 14, ಗುಬ್ಬಿ–16, ಕೊರಟಗೆರೆ–13, ಕುಣಿಗಲ್–8, ಮಧುಗಿರಿ–10, ಪಾವಗಡ– 14, ಶಿರಾ ಮತ್ತು ತಿಪಟೂರು ತಲಾ 19, ತುಮಕೂರು– 170, ತುರುವೇಕೆರೆ–9 ಸೇರಿದಂತೆ ಒಟ್ಟು 292 ಮಕ್ಕಳು ಹಾಗೂ ಚಿಕ್ಕನಾಯಕನಹಳ್ಳಿ, ಶಿರಾ, ತಿಪಟೂರು ತಾಲ್ಲೂಕಿನಲ್ಲಿ ತಲಾ 2, ಮಧುಗಿರಿ, ಪಾವಗಡ ತಾಲ್ಲೂಕಿನಲ್ಲಿ ತಲಾ 1, ತುಮಕೂರು ತಾಲ್ಲೂಕಿನಲ್ಲಿ 11 ಸೇರಿದಂತೆ 19 ತಾಯಿ ಮರಣ ಪ್ರಕರಣಗಳು ವರದಿಯಾಗಿವೆ. ಹಿಂದಿನ ವರ್ಷಗಳ ಅಂಕಿ–ಅಂಶಗಳನ್ನು ಹೋಲಿಸಿದಾಗ ಪ್ರಸಕ್ತ ವರ್ಷದಲ್ಲಿ ತಾಯಿ ಮತ್ತು ಶಿಶುವಿನ ಮರಣ ಪ್ರಮಾಣ ತಗ್ಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

    ಈ ಸಂದರ್ಭದಲ್ಲಿ ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯದ ರಾಷ್ಟ್ರೀಯ ಕಾರ್ಯಕ್ರಮ ಕುರಿತ ಪೋಸ್ಟರ್ ಬಿಡುಗಡೆ ಮಾಡಲಾಯಿತು.

    ಪೋಸ್ಟರ್ ಬಿಡುಗಡೆ ನಂತರ ಸಭೆಗೆ ಮಾಹಿತಿ ನೀಡಿದ ಮಲೇರಿಯಾ ಅಧಿಕಾರಿ ಡಾ.ಕೆ.ಎಸ್.ರಂಗನಾಥ್ ಅವರು ಬಿಸಿಲಿನ ಶಾಖದಿಂದ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆ, ಸೂರ್ಯಾಘಾತದ ನಿರ್ವಹಣೆ, ಸೂರ್ಯಾಘಾತಕ್ಕೆ ಪ್ರಥಮ ಚಿಕಿತ್ಸಾ ಕ್ರಮಗಳ ಬಗ್ಗೆ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಪ್ರಾರ್ಥನಾ ಸಮಯದಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

    ಸಭೆಯಲ್ಲಿ ಡಾ.ಪ್ರಭಾ, ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿ/ಸಿಬ್ಬಂದಿ, ಲೋಕೋಪಯೋಗಿ ಇಲಾಖೆ, ಶಿಕ್ಷಣ ಇಲಾಖೆ, ವಾರ್ತಾ ಇಲಾಖೆ, ವಿವಿಧ ವೈದ್ಯಕೀಯ ಕಾಲೇಜಿನ ಮುಖ್ಯಸ್ಥರು ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ

    July 30, 2026

    ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಸರಗೂರು / ಎಚ್.ಡಿ. ಕೋಟೆ:  ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಅತಿ ದೊಡ್ಡ ಶಾಪವಾಗಿದ್ದು, ಇದರ ವಿರುದ್ಧ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು.…

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.