nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಾಸ್ತವ ಒಡೆದು ನೋಡಿದಾಗ?

    January 2, 2026

    ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ

    January 2, 2026

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026
    Facebook Twitter Instagram
    ಟ್ರೆಂಡಿಂಗ್
    • ವಾಸ್ತವ ಒಡೆದು ನೋಡಿದಾಗ?
    • ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ
    • ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
    • ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
    • ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
    • ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
    • ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ರೀಡಾಪಟುಗಳಿಗೆ ವೈಜ್ಞಾನಿಕ ತರಬೇತಿ ಅಗತ್ಯ : ಸಿಎಂ ಬೊಮ್ಮಾಯಿ
    ರಾಜ್ಯ ಸುದ್ದಿ January 15, 2022

    ಕ್ರೀಡಾಪಟುಗಳಿಗೆ ವೈಜ್ಞಾನಿಕ ತರಬೇತಿ ಅಗತ್ಯ : ಸಿಎಂ ಬೊಮ್ಮಾಯಿ

    By adminJanuary 15, 2022No Comments2 Mins Read

    ಬೆಂಗಳೂರು: ಕ್ರೀಡಾಳುಗಳಿಗೆ ವೈಜ್ಞಾನಿಕ ವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತುಗೊಂಡಿರುವ ಕೋಚ್ ಗಳು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಕಾಮನ್ ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿಂದು ಆನ್ ಲೈನ್ ಮೂಲಕ ಪಾಲ್ಗೊಂಡು ಮಾತನಾಡಿದ ಅವರು, ಅತ್ಯುತ್ತಮ ಕೋಚ್ ಗಳ ಮೂಲಕ ಕ್ರೀಡಾಪಟುಗಳಿಗೆ ತರಬೇತಿ ನೀಡುವುದು ಅತ್ಯಗತ್ಯ. ಅವರಿಗೆ ಪಠ್ಯಕ್ರಮ ರೂಪಿಸಿ ಅದರಂತೆ ಸೂಕ್ತ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಅಮೃತ ಕ್ರೀಡಾ ಯೋಜನೆಯ ಗುರಿ ಈಡೇರಿಸಲು ಸರ್ಕಾರ ಅಗತ್ಯ ನೆರವು ನೀಡಲು ಬದ್ಧವಾಗಿದೆ ಎಂದು ಹೇಳಿದರು.


    Provided by
    Provided by

    72 ದೇಶಗಳ ಒಕ್ಕೂಟ ರಚನೆಯಾಗಿ ಹಲವಾರು ವಿಚಾರಗಳ ವಿನಿಮಯಕ್ಕೆ ಕಾಮನ್ವೆಲ್ತï ಒಕ್ಕೂಟ ವೇದಿಕೆಯಾಗಿದೆ. ಸಮಾನ ಚಿಂತನೆ ಇರುವ ರಾಷ್ಟ್ರಗಳ ಬಾಂಧವ್ಯ ಗಟ್ಟಿಗೊಳ್ಳಲು, ಅದರಲ್ಲೂ ಯುವಪೀಳಿಗೆಯಲ್ಲಿ ಬಾಂಧವ್ಯ ಮುಂದುವರೆಯಬೇಕೆಂಬ ಉದ್ದೇಶದಿಂದ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ ಎಂದರು.

    ನಾಲ್ಕು ವರ್ಷಕ್ಕೊಮ್ಮೆ ನಡೆಯುವ ಈ ಕ್ರೀಡಾಕೂಟದಲ್ಲಿ ಸುಮಾರು 6 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುತ್ತಾರೆ. ಕ್ರೀಡಾಕೂಟದ ಬ್ಯಾಟನ್ ಇಂದು 9000 ಕಿ.ಮೀ. ಪಯಣಿಸಿ ಭಾರತಕ್ಕೆ ಆಗಮಿಸಿದೆ. ಭಾರತದ ನಾಲ್ಕು ಮಹಾನಗರಗಳಿಗೆ ಬ್ಯಾಟನ್ ಸ್ವೀಕಾರ ಮಾಡುವ ಅವಕಾಶ ದೊರೆತಿದ್ದು, ಈ ಪೈಕಿ ಬೆಂಗಳೂರು ಕೂಡ ಒಂದು ಎನ್ನುವುದು ಸಂತೋಷದ ಸಂಗತಿ ನಮ್ಮ ಜವಾಬ್ದಾರಿಯನ್ನು ಮುಂದುವರೆಸುವ ಸಂಕೇತವಾಗಿರುವ ಈ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕ್ರೀಡಾಲೋಕಕ್ಕೆ ಹೊಸ ಚಿಂತನೆ ಹಾಗೂ ಆಯಾಮಗಳನ್ನು ನೀಡಿದ್ದಾರೆ. ಖೇಲೋ ಇಂಡಿಯಾ ಪ್ರಾರಂಭಿಸಿ ಹಳ್ಳಿ ಹಳ್ಳಿಗಳಲ್ಲಿ ವ್ಯವಸ್ಥಿತವಾಗಿ ಕ್ರೀಡಾಕೂಟಗಳು ನಡೆಯುತ್ತಿವೆ. ಜೀತೋ ಇಂಡಿಯಾ ಕಾರ್ಯಕ್ರಮ ಕ್ರೀಡಾಳುಗಳಿಗೆ ಬಹು ದೊಡ್ಡ ಸೂರ್ತಿ ನೀಡಿದೆ. ಟೋಕಿಯೋ ಒಲಂಪಿಕ್ಸ್ ನಲ್ಲಿ ಅತಿ ಹೆಚ್ಚು ಪದಕಗಳನ್ನು ಗೆಲ್ಲಲು ಭಾರತಕ್ಕೆ ಸಾಧ್ಯವಾಯಿತು. ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯವಾಗಿದ್ದು, ಭಾರತ ಸ್ವಾತಂತ್ರ್ಯ ಗಳಿಸಿದ ನಂತರದಲ್ಲಿ ಕ್ರೀಡೆಗಳಿಗೆ ಅತಿ ಹೆಚ್ಚು ಪ್ರೋತ್ಸಾಹ ನೀಡುವ ಕಾರ್ಯಕ್ರಮಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೂಪಿಸಿದ್ದಾರೆ. ಕ್ರೀಡಾಪಟುಗಳು ಕ್ರೀಡಾ ಕೂಟಗಳಿಗೆ ತೆರಳುವ ಮುನ್ನ ಹಾಗೂ ಬಂದ ನಂತರ ಅವರೊಂದಿಗೆ ಸಮಯ ಕಳೆದು, ಪದಕ ಪಡೆಯದವರಿಗೂ ಸೂರ್ತಿ ತುಂಬಿದ್ದಾರೆ. ಅವರ ಈ ನಡೆ ನಮ್ಮೆಲ್ಲರಿಗೂ ಮಾದರಿಯಾಗಿದೆ ಎಂದರು.

    ಕರ್ನಾಟಕ ರಾಜ್ಯ ಯುವಜನ ಸಬಲೀಕರಣಕ್ಕೆ ಮಹತ್ವ ನೀಡಿದೆ. ನೂತನ ಯುವ ನೀತಿಯನ್ನು ಸರ್ಕಾರ ಜಾರಿಗೊಳಿಸುತ್ತಿದೆ. ಕರ್ನಾಟಕ ಕ್ರೀಡೆಗೆ ವರದಾನವೆಂಬಂತೆ ಸ್ವತಃ ಕ್ರೀಡಾಪಟುವಾಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದೊರೆತಿದ್ದಾರೆ. ಕರ್ನಾಟಕ ಒಲಂಪಿಕ್ಸ್ ಅಸೋಸಿಯೇಷನ್ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವುದು ಶ್ಲಾಘನೀಯ ಎಂದರು.

    ವರದಿ: ಆಂಟೋನಿ, ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!

    December 30, 2025

    ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು

    December 30, 2025

    ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

    December 30, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ವಾಸ್ತವ ಒಡೆದು ನೋಡಿದಾಗ?

    January 2, 2026

    ದೇವರ ಬಗ್ಗೆ ಈ ಲೌಕಿಕ ಜಗತ್ತಿನಲಲ್ಲಿ ನಾ ಕಂಡ ಕೆಲವು ವಿಚಾರಗಳನ್ನು ಸೂಕ್ಷ್ಮವಾಗಿ ಗಮನಿಸಿ, ನನಗೆ ಅನಿಸಿದ್ದನ್ನು ಇಲ್ಲಿ ಉಲ್ಲೇಖಿಸುತ್ತಿದ್ದೇನೆ,…

    ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ

    January 2, 2026

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.