ತುಮಕೂರು: ಹವಾಮಾನ ವೈಪರೀತ್ಯಗಳಿಂದಾದ ಬೆಳೆ ಹಾನಿಯಿಂದ ರೈತರಿಗಾಗುವ ಆರ್ಥಿಕ ನಷ್ಟವನ್ನು ನಿವಾರಿಸಲು ಅನುಷ್ಠಾನ ಮಾಡಲಾಗಿರುವ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಜೂನ್ 30ರವರೆಗೂ ಅವಕಾಶ ಕಲ್ಪಿಸಲಾಗಿದೆ.
ವಿಮಾ ಯೋಜನೆಯ ಅನುಷ್ಠಾನ ಏಜೆನ್ಸಿಯಾಗಿ ಓರಿಯಂಟಲ್ ಇನ್ಸೂರೆನ್ಸ್ ಸಂಸ್ಥೆಯನ್ನು ನಿಗಧಿಪಡಿಸಲಾಗಿದೆ. ಈ ವಿಮಾ ಯೋಜನೆಗೆ ಪೂರ್ವ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಎಳ್ಳು ಮತ್ತು ಹತ್ತಿ ಬೆಳೆಗಳನ್ನು ಜೂನ್ 30ರೊಳಗಾಗಿ ನೋಂದಾಯಿಸಬೇಕೆಂದು ರೈತರಲ್ಲಿ ಮನವಿ ಮಾಡಲಾಗಿದೆ.
ಬೆಳೆಗಳನ್ನು ವಿಮಾ ಯೋಜನೆಗೊಳಪಡಿಸಲು ಪ್ರತಿ ಎಕರೆಗೆ ಹೆಸರು ಬೆಳೆಗೆ 269.13 ರೂ., ಉದ್ದು–265.08 ರೂ., ಎಳ್ಳು–232.70 ರೂ., ಹತ್ತಿ(ಮಳೆಯಾಶ್ರಿತ)–1006.69 ರೂ. ಹಾಗೂ ಹತ್ತಿ(ನೀರಾವರಿ)–1492.33 ರೂ.ಗಳ ವಿಮಾ ಕಂತನ್ನು ಹತ್ತಿರದ ಬ್ಯಾಂಕ್/ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಪಾವತಿಸುವ ಮೂಲಕ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.
ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ವಿಮಾ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆಯಬೇಕೆಂದು ಜಂಟಿ ಕೃಷಿ ನಿರ್ದೇಶಕ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4