ತರೀಕೆರೆ: ಪ್ರೀತಿಸಿ ವಿವಾಹವಾಗಿ ದೂರವಾಗಿದ್ದ ಪತ್ನಿ ತವರು ಮನೆಗೆ ಜಾತ್ರೆಗೆ ಬಂದಿದ್ದ ವೇಳೆ ಮಚ್ಚಿನಿಂದ ಕೊಚ್ಚಿ ಪತಿ ಹತ್ಯೆ ಮಾಡಿರುವ ಘಟನೆ ತರೀಕೆರೆ ತಾಲ್ಲೂಕಿನ ಕರಕುಚ್ಚಿ ಗ್ರಾಮದಲ್ಲಿ ನಡೆದಿದೆ.
ಪ್ರೀತಿಸುವಾಗಲೇ ಆರೋಪಿ ಅತ್ಯಾಚಾರ ಎಸಗಿ ಫೋಕ್ಸ ಪ್ರಕರಣ ಹಾಕಿಸಿಕೊಂಡು ಅದೇ ಬಾಲಕಿಯನ್ನು ವಿವಾಹವಾಗಿ ನಿತ್ಯ ಕಿರುಕುಳ ಕೊಡುತ್ತಿದ್ದ.
ತರೀಕೆರೆ ತಾಲ್ಲೂಕಿನ ಕರಕುಚ್ಚಿ ಗ್ರಾಮದ ಮೇಘನಾಳನ್ನು ಅದೇ ಗ್ರಾಮದ ಚರಣ್ ಪ್ರೀಸಿಸಿ ವಿವಾಹವಾಗಿದ್ದ ಅಪ್ರಾಪ್ತಿಯಾಗಿದ್ದ ಕಾರಣ ವಿವಾಹಕ್ಕೂ ಮೊದಲು ಅತ್ಯಾಚಾರ ಎಸಗಿದ್ದ ಕಾರಣ ಫೋಕ್ಸ ಪ್ರಕರಣ ದಾಖಲಾಗಿತ್ತು, ನಂತರ ಎರಡೂ ಮನೆಯವರು ಸೇರಿ ಇಬ್ಬರಿಗೂ ಮದುವೆ ಮಾಡಿದ್ದರು.
ಕೆಲ ಕಾಲದ ಬಳಿಕ ನಿತ್ಯ ಪತ್ನಿಗೆ ಕಿರುಕುಳ ಕೊಡಲಾರಂಭಿಸಿದ ಇದರಿಂದ ಬೇಸತ್ತ ಮೇಘನಾ ಮನೆಯವರು ಅವಳನ್ನು ಅಜ್ಜಿಯ ಮನೆ ಬಿಆರ್.ಪಿ ಗೆ ಕಳುಹಿಸಿದ್ದರು. ಕರಕುಚ್ಚಿಯಲ್ಲಿ ಮುಳಕಟ್ಟಮ್ಮ ಜಾತ್ರೆ ಇರುವ ಕಾರಣ ಯುವತಿ ತವರು ಮನೆಗೆ ಬಂದಿದ್ದುಅವಳು ಹೊಳೆಯಲ್ಲಿ ಬಟ್ಟೆ ಹೊಗೆಯಲು ತೆರಳಿದ್ದ ವೇಳೆ ಹಿಂಬಾಲಿಸಿ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಸದ್ಯ ಆರೋಪಿ ಶರಣ್ ತಲೆಮರೆಸಿಕೊಂಡಿದ್ದು ಲಕ್ಕವಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA