ಪಾವಗಡ: ಶಿವರಾತ್ರಿ ಹಬ್ಬದ ಪ್ರಯುಕ್ತ ಪಾವಗಡ ಪಟ್ಟಣದ ಎಸ್ ಎಸ್ ಕೆ ಬಯಲು ರಂಗಮಂದಿರದಲ್ಲಿ ಶುಕ್ರವಾರ ರಾತ್ರಿ ಪಾವಗಡದ ರೋಟರಿ ಕ್ಲಬ್ ಮತ್ತು ಹೆಲ್ಪ್ ಸೊಸೈಟಿ ಸಹಯೋಗದಲ್ಲಿ ಪಾವಗಡ ತಾಲೂಕಿನ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಪಾವಗಡ ಪುರಸಭೆಯ ಮಾಜಿ ಅಧ್ಯಕ್ಷರಾದ ಮಾನಂ ವೆಂಕಟಸ್ವಾಮಿ ಅವರು ಚಾಲನೆ ನೀಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಧಾರ್ಮಿಕ ಹಿತಾಸಕ್ತಿ ಕಮ್ಮಿಯಾಗುತ್ತಿದ್ದು, ಅದರ ಜೊತೆಗೆ ಕಲೆಯ ಮೇಲಿನ ಗೌರವ ಕ್ಷೀಣಿಸುತ್ತಿದೆ ಇಂತಹ ಸಂದರ್ಭದಲ್ಲಿ ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಉತ್ತಮ ಫಲಿತಾಂಶವನ್ನು ಸಾಂಸ್ಕೃತಿಕವಾಗಿ ಮಕ್ಕಳು ಪಡೆಯಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಪಾವಗಡ ತಾಲೂಕಿನ 25ಕ್ಕೂ ಅಧಿಕ ಶಾಲೆಗಳ ನೂರಾರು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಗೀತೆಗಳಿಗೆ ನೃತ್ಯವನ್ನು ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಸತ್ಯ ಲೋಕೇಶ್, ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್, ಪುರಸಭಾ ಸದಸ್ಯರಾದ ಗೂರ್ತಿ ನಾಗರಾಜು, ಮಹಮದ್ ಇಮ್ರಾನ್, ರೋಟರಿ ಕ್ಲಬ್ ಮಾಜಿ ಅಧ್ಯಕ್ಷರಾದ ಪ್ರಭಾಕರ್, ಕಮಲ್ ಬಾಬು, ಪ್ರಗತಿಪರ ಚಿಂತಕರಾದ ಪುರುಷೋತ್ತಮ ರೆಡ್ಡಿ, ಸೆಂಟ್ ಮೇರಿಸ್ ಶಾಲೆಯ ರಾಣಿ ಎಲಿಜಬೆತ್, ಗೌತಮ್, ಸೇರಿ ಹಲವರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296