nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಬಿ.ಆರ್.ಅಂಬೇಡ್ಕರ್ ಅವರದ್ದು ಪ್ರಖರ ವ್ಯಕ್ತಿತ್ವ: ಡಾ.ಹನುಮಂತರಾಯ ವೈ.ಎಸ್.
    ಮಧುಗಿರಿ April 14, 2022

    ಡಾ.ಬಿ.ಆರ್.ಅಂಬೇಡ್ಕರ್ ಅವರದ್ದು ಪ್ರಖರ ವ್ಯಕ್ತಿತ್ವ: ಡಾ.ಹನುಮಂತರಾಯ ವೈ.ಎಸ್.

    By adminApril 14, 2022No Comments2 Mins Read
    madugiri ambedkar jayanti

    ಮಧುಗಿರಿ (ಮಿಡಿಗೇಶಿ): ಭಾರತದಲ್ಲಿನ ಹಲವಾರು ಸಾಮಾಜಿಕ ಶೋಷಣೆಗಳನ್ನು ಹೊಡೆದೋಡಿಸಿ ಭಾರತ ಪ್ರಜ್ವಲಿಸುವಂತೆ ಮಾಡುವ ವಿಶ್ವದ ಅಗ್ರಗಣ್ಯ ರಾಷ್ಟ್ರವನ್ನಾಗಿ ಬೆಳೆಸುವ ಕನಸನ್ನು ಕಂಡು ಹಲವಾರು ಸುಧಾರಣೆಗಳಿಗೆ ಬುನಾದಿ ಹಾಕಿ, ವಿಭಿನ್ನ ಧರ್ಮ, ಜಾತಿ, ವರ್ಗ, ಪಂಗಡಗಳಿರುವ ಬೃಹತ್ ರಾಷ್ಟ್ರವನ್ನು ಸಂವಿಧಾನದ ಮೂಲಕ ಒಟ್ಟುಗೂಡಿಸಿದ ಆಧುನಿಕ ಭಾರತದ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರದು ಪ್ರಖರ ವ್ಯಕ್ತಿತ್ವ, ವಿಶ್ವಮೆಚ್ಚಿದ ಜ್ಞಾನಿಗಳಲ್ಲಿ ಅಗ್ರಗಣ್ಯರಾಗಿದ್ದರು. ಆಧು ಎಂದು ಕಾಲೇಜು ಶಿಕ್ಷಣ ಧಾರವಾಡ ವಿಭಾಗದ ಪ್ರಾದೇಶಿಕ ಜಂಟಿ ನಿರ್ದೇಶಕರಾದ ಡಾ.ಹನುಮಂತರಾಯ ವೈ.ಎಸ್. ತಿಳಿಸಿದರು.

    ಅವರು ಮಿಡಿಗೇಶಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಅಂಬೇಡ್ಕರ್ ಶತಮಾನಗಳಿಂದ ಶೋಷಣೆಗೆ ಒಳಗಾದ ಜನರ ಪ್ರತಿನಿಧಿಯಾಗಿ, ಇಲ್ಲಿನ ಸಾಮಾಜಿಕ ಪಿಡುಗುಗಳ ವಿರುದ್ದ ಗಟ್ಟಿಧ್ವನಿಯೆತ್ತಿದ ಛಲಗಾರರಾಗಿದ್ದರು. ಶಿಕ್ಷಣ ಪಡೆಯುವ ಮೂಲಕ ಏನನ್ನಾದರೂ ಸಾಧಿಸಬಹುದೆಂಬ ಅಚಲ ವಿಶ್ವಾಸ ಹೊಂದಿದ್ದು, ಅಂದಿನ ಕಾಲದಲ್ಲಿ ಅತ್ಯುನ್ನತ ವಿದ್ಯಾಭ್ಯಾಸ ಪಡೆದು, ತಮ್ಮ ಜೀವನವನ್ನೇ ಸಮಾಜದ ಸುಧಾರಣೆಗಾಗಿ ಸಮರ್ಪಿಸಿಕೊಂಡರು.


    Provided by

    ಕತ್ತಲೆಯ ಕೂಪದಲ್ಲಿ ನರಳುತ್ತಿದ್ದ ಅನೇಕ ಸಮುದಾಯಗಳು ಸಮಾಜದ ಮುಖ್ಯವಾಹಿನಿಗೆ ಸೇರಲು, ಸಮಾಜದ ಎಲ್ಲ ವರ್ಗಗಳಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿ, ಚುನಾವಣೆಗಳ ಮುಖಾಂತರ ಸಾಮಾನ್ಯ ಪ್ರಜೆಯೂ ಸಹ ಅಧಿಕಾರ ಪಡೆಯುವ ಅವಕಾಶವನ್ನು ಸಂವಿಧಾನದ ಮೂಲಕ ಕಲ್ಪಿಸಿದರು. ಅವರ ಜೀವನಾದರ್ಶಗಳನ್ನು ಎಲ್ಲರೂ ಅಧ್ಯಯನ ಮಾಡುವ ಮೂಲಕ ಅವರ ಚಿಂತನೆಗಳಿಂದ ಸ್ಪೂರ್ತಿ ಪಡೆಯಬೇಕೆಂದರು.

    ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರೊ.ನರಸಿಂಹಮೂರ್ತಿ ಟಿ.ಎನ್. ಮಾತನಾಡಿ ಬಾಬಾಸಾಹೇಬ್ ಅಂಬೇಡ್ಕರ್‍ರವರು ಹುಟ್ಟಿದ ದಿನವನ್ನು ವಿಶ್ವಸಂಸ್ಥೆ ವಿಶ್ವ ಜ್ಞಾನ ದಿನಾಚರಣೆ ಎಂದು ಆಚರಿಸುತ್ತಿರುವುದು ಸಮಸ್ತ ಭಾರತೀಯರು ಹೆಮ್ಮೆ ಪಡುವ ವಿಚಾರವಾಗಿದೆ. ಅವರಲ್ಲಿನ ಜ್ಞಾನದ ಬೆಳಕಿನಿಂದ ಭಾರತದಲ್ಲಿ ಅನೇಕ ಕಾನೂನುಗಳು ಜಾರಿಗೆ ಬಂದಿವೆ.  ಮೀಸಲಾತಿ, ಮಹಿಳೆಯರಿಗೆ ಆಸ್ತಿ ಹಕ್ಕು, ಮತದಾನದ ಹಕ್ಕು, ಕನಿಷ್ಟ ವೇತನ ಜಾರಿ, ಕಾರ್ಮಿಕರಿಗೆ ಎಂಟು ಗಂಟೆಗಳ ಕೆಲಸ ಮಾಡುವ ಅವಧಿ ನಿಗದಿ, ಭಾರತೀಯ ರಿಜರ್ವ ಬ್ಯಾಂಕ್ ಸ್ಥಾಪನೆಗೆ ಮುನ್ನುಡಿ ಬರೆದರು. ಅವರು ಸಾಮಾಜಿಕ ಚಿಂತಕರಾಗಿ ನೀರಾವರಿ ತಜ್ಞ, ಕಾನೂನು ಪಂಡಿತರಾಗಿ, ಆರ್ಥಿಕ ತಜ್ಞತೆ ಜೊತೆಗೆ ಹಲವಾರು ಕ್ಷೇತ್ರಗಳಲ್ಲಿ ಪ್ರಾವೀಣ್ಯತೆ ಪಡೆದಿದ್ದರು.

    ಮಹಿಳೆಯರ ಶೋಷಣೆಯ ವಿರುದ್ದ ಅವರನ್ನು ಸಬಲರನ್ನಾಗಿಸಲು ಶಿಕ್ಷಣ ನೀಡಿ, ಮುಖ್ಯವಾಹಿನಿಗೆ ತರಲು ಶ್ರಮಿಸಿದರು. ಎಲ್ಲವರ್ಗಗಳಿಗೆ ಮೀಸಲಾತಿ ನೀಡಿ ಅವರ ಅಭಿವೃದ್ದಿಗೆ ಕಾರಣರಾಗಿದ್ದಾರೆ. ಭಾರತದಲ್ಲಿನ ಇಂದಿನ ಮಹಿಳೆಯರು, ದಲಿತರು, ಹಿಂದುಳಿದವರ ಸ್ಥಾನಮಾನ ಸುಧಾರಿಸಿರುವ ಇಂದಿನ ಪರಿಸ್ಥಿತಿಗೆ ಅಂದಿನ ಅಂಬೇಡ್ಕರ್‍ರವರ ಚಿಂತನೆಗಳೇ ಕಾರಣವಾಗಿವೆ. ಭೂಮಿ ಮೇಲೆ ಜನಿಸಿದ ಎಲ್ಲರೂ ಚಿರಂಜೀವಿಯಾಗಲಾರರು ಆದರೆ ಬಾಬಾಸಾಹೇಬ್ ಅಂಬೇಡ್ಕರ್‍ರವರ ಆಲೋಚನೆಗಳು, ಸಾಧನೆಗಳು ಶಾಶ್ವತವಾಗಿ ಮುಂದಿನ ಪೀಳಿಗೆಗೆ ದಾರಿದೀಪವಾಗಿವೆ. ಆದುದರಿಂದ ಅಂಬೇಡ್ಕರ್‍ರವರ ಬಗ್ಗೆ ಹೆಚ್ಚೆಚ್ಚು ತಿಳಿದುಕೊಂಡಷ್ಟೂ ಎಲ್ಲರೂ ಜ್ಞಾನವಂತರಾಗುತ್ತಾರೆ. ವಿದ್ಯಾರ್ಥಿಗಳು ವಿಶೇಷ ಆಸಕ್ತಿಯಿಂದ ಅವರ ವಿಚಾರಧಾರೆಗಳನ್ನು ಅರಿಯಬೇಕೆಂದರು.

    ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸತೀಶ್ ಎಸ್.ಎಂ. ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ಸಹಾಯಕರಾದ ಮಹಮದ್ ರಹಮತುಲ್ಲಾ ಸ್ವಾಗತಿಸಿದರು. ಸೂರ್ಯಪ್ರಕಾಶ್ ವಂದಿಸಿದರು.

    ವರದಿ: ಅಬಿದ್ ಮಧುಗಿರಿ 

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    June 19, 2025

    ಮಧುಗಿರಿ: ಪ್ರೋತ್ಸಾಹ ಧನ ಸೌಲಭ್ಯಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    June 7, 2025

    ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

    May 14, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.