ಮೋದಿಯವರಿಂದ ರಾಜ್ಯದ ಜನತೆಗೆ ಆಗುತ್ತಿರುವ ಅನ್ಯಾಯವನ್ನು, ನಿಮ್ಮ ತೆರಿಗೆ ಹಣಕ್ಕೆ ಆಗುತ್ತಿರುವ ದ್ರೋಹವನ್ನು ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿ ಪ್ರಶ್ನಿಸಿದವರು ಡಿ.ಕೆ. ಸುರೇಶ್ ಮಾತ್ರ. ಇವರು ಗೆದ್ದರೆ ನಮ್ಮ-ನಿಮ್ಮೆಲ್ಲರ ಧ್ವನಿಯಾಗಿ ಹೋರಾಟ ಮಾಡ್ತಾರೆ. ಇವರಿಗೆ ಆಶೀರ್ವದಿಸಿ ಪಾರ್ಲಿಮೆಂಟಿಗೆ ಕಳುಹಿಸಿ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಕರೆ ನೀಡಿದರು. ಬೆಂಗಳೂರು ಗ್ರಾ. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ. ಸುರೇಶ್ ಪರವಾಗಿ ಕೋಣನಕುಂಟೆ ಕ್ರಾಸ್ ಬಳಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬೆಲೆ ಏರಿಕೆ ತಡೆಯುವುದಾಗಿ ಭಾರತೀಯರನ್ನು ನಂಬಿಸಿ ಅಧಿಕಾರಕ್ಕೆ ಬಂದ ಮೋದಿಯವರೇ ವಿಪರೀತ ಬೆಲೆ ಏರಿಕೆ ಮಾಡಿದ್ದರಿಂದ ಮಧ್ಯಮ ವರ್ಗದ ಬದುಕು ಹೈರಾಣಾಗಿತ್ತು.
ನಾವು ಗ್ಯಾರಂಟಿಗಳ ಮೂಲಕ ಸ್ಪಂದಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಲೆ ಏರಿಕೆ ಭಾರತೀಯರ ಶತ್ರು. ನಾನು ಪ್ರಧಾನಿಯಾದರೆ ಬೆಲೆ ಏರಿಕೆ ತಡೆಯುವುದಾಗಿ ಇಡಿ ಭಾರತೀಯರನ್ನು ಮೋದಿ ನಂಬಿಸಿದ್ದರು. ಆದರೆ ಇದೇ ಮೋದಿ ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ ಸೇರಿ ಎಲ್ಲದರ ಬೆಲೆಯನ್ನೂ ಗಗನಕ್ಕೆ ಏರಿಸಿದರು ಎಂದರು.
ರಾಜ್ಯದಲ್ಲಿ ನಾವು ನುಡಿದಂತೆ ನಡೆದು ನಿಮ್ಮ ಮತಕ್ಕೆ ಗೌರವ ತಂದು ಘನತೆ ಹೆಚ್ಚಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೋದಿಯವರ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಮಧ್ಯಮ ವರ್ಗದ ಜನ ಮತ್ತು ದುಡಿಯುವ ವರ್ಗಗಳು ಹಾಗೂ ಬಡ ಜನರ ಬದುಕಿಗೆ ಸ್ಪಂದಿಸುವ ಉದ್ದೇಶದಿಂದ, ನಾನು ಐದು ಗ್ಯಾರಂಟಿಗಳನ್ನು ರೂಪಿಸಿ ಐದನ್ನೂ ಜಾರಿ ಮಾಡಿದ್ದೇವೆ. ಈ ಅರ್ಹತೆಯಿಂದ ನಿಮ್ಮ ಎದುರಿಗೆ ನಿಂತು ಮತ ಕೇಳುತ್ತಿದ್ದೇವೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296