nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್

    January 28, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026
    Facebook Twitter Instagram
    ಟ್ರೆಂಡಿಂಗ್
    • ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್
    • ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ
    • ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು
    • ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಲೋಕಾಯುಕ್ತ ನೀಡಿದ್ದ ‘ಬಿ–ರಿಪೋರ್ಟ್’ ಅಂಗೀಕರಿಸಿದ ಕೋರ್ಟ್
    • ಪುಸ್ತಕಗಳು ಬದುಕಿನ ಶೈಲಿಯಾಗಬೇಕು: ಪ್ರಾಂಶುಪಾಲ ರಮಾನಂದ
    • ತುಮಕೂರಿನಲ್ಲಿ ‘ಸಂವಿಧಾನ ರಕ್ಷಣಾ ನೀಲಿ ಸೇನೆ’ ರಾಜ್ಯ ಮಟ್ಟದ ಸಂಘಟನೆ ಅದ್ದೂರಿ ಉದ್ಘಾಟನೆ
    • ಗುಬ್ಬಿ: ಗೋಕಟ್ಟೆ ಉಳಿವಿಗಾಗಿ ರೈತ ಸಂಘದ ಬೃಹತ್ ಪ್ರತಿಭಟನೆ — ಪಿಡಿಒ ವಿರುದ್ಧ ಆಕ್ರೋಶ
    • ಮೃತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ: ನೇಮಕಾತಿ ಆದೇಶ ಪತ್ರ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಾಖಲೆ ಕಳ್ಳರ ರಕ್ಷಣೆಗೆ ನಿಂತ ಎಸಿ, ತಹಸೀಲ್ದಾರ್: ಸುಧೀರ್ ಮುರೊಳ್ಳಿ ಗಂಭೀರ ಆರೋಪ
    ಜಿಲ್ಲಾ ಸುದ್ದಿ February 4, 2022

    ದಾಖಲೆ ಕಳ್ಳರ ರಕ್ಷಣೆಗೆ ನಿಂತ ಎಸಿ, ತಹಸೀಲ್ದಾರ್: ಸುಧೀರ್ ಮುರೊಳ್ಳಿ ಗಂಭೀರ ಆರೋಪ

    By adminFebruary 4, 2022No Comments2 Mins Read
    maroli

    ಕೊಪ್ಪ: ತಾಲ್ಲೂಕು ಕಚೇರಿಯ ಕಡತಗಳನ್ನು ಬಚ್ಚಿಟ್ಟುಕೊಂಡು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿರುವ ಪ್ರಥಮ ದರ್ಜೆ ಸಹಾಯಕ ಪ್ರಕಾಶ್ ಎಂಬುವವರನ್ನು ಕೊಪ್ಪ ತಹಸೀಲ್ದಾರ್ ಪರಮೇಶ್ ಹಾಗೂ ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಡಾ.ಎಚ್.ಎನ್.ನಾಗರಾಜ್ ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಭಾರೀ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದೆ.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಮುರೊಳ್ಳಿ , ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಇನೇಶ್, ನುಗ್ಗಿ ಮಂಜುನಾಥ್ ಸೇರಿದಂತೆ ಹಲವು ಮುಖಂಡರು ಈ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಕೊಪ್ಪ ತಹಸೀಲ್ದಾರ್ ಕಚೇರಿಯಲ್ಲಿ ಈ ಹಿಂದೆ ರೈತರು ಹಾಗೂ ಬಡವರ ಫಾರಂ-50, 53 ಕಡತಗಳ ಉಸ್ತುವಾಗಿಯಾಗಿದ್ದ ಪ್ರಥಮ ದರ್ಜೆ ಸಹಾಯಕ ಪ್ರಕಾಶ್ ಸುಮಾರು 300ಕ್ಕಿಂತ ಹೆಚ್ಚು ಕಡತಗಳನ್ನು ದುರುದ್ದೇಶದಿಂದ ಬಚ್ಚಿಟ್ಟುಕೊಂಡು ಹಣ ಕೊಟ್ಟವರ ಕಡತಗಳನ್ನಷ್ಟೇ ಭೂ ಮಂಜೂರಾತಿ ಪ್ರಕ್ರಿಯೆ ಪ್ರಸ್ತಾವನೆಗೆ ಸಲ್ಲಿಸುತ್ತಿದ್ದ.ಈತನ ವರ್ಗಾವಣೆ ಸಂದರ್ಭದಲ್ಲೂ ಕಡತಗಳನ್ನು ಹಸ್ತಾಂತರಿಸದೆ ಗಂಭೀರ ಕರ್ತವ್ಯಲೋಪವೆಸಗಿರುವುದಲ್ಲದೆ ಪ್ರಭಾರ ವಹಿಸಿಕೊಡುವ ಪ್ರಕ್ರಿಯೆಯಲ್ಲೂ ಲೋಪವೆಸಗಿದ್ದಾನೆ. ಕೊಪ್ಪಕ್ಕೆ ಕರ್ತವ್ಯಕ್ಕೆ ಬರುವ ಮುನ್ನವೇ ಈತ ಅಮಾನತುಗೊಂಡಿದ್ದ.ಕಳೆದ ಸಾಲಿನ ಮಾರ್ಚ್‍ನಲ್ಲಿ ಶಾಸಕರ ನೇತೃತ್ವದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಈತನ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಂದಾಯ ಇಲಾಖೆಗೆ ಸೂಚಿಸಲಾಗಿತ್ತು.ಈತನನ್ನು ಶೃಂಗೇರಿ ತಾಲ್ಲೂಕು ಕಚೇರಿಗೆ ವರ್ಗಾಯಿಸಿದ್ದು, ಶೃಂಗೇರಿ ತಾಲ್ಲೂಕು ಕಚೇರಿಯ ಕಡತ ನಾಶ ಹಾಗೂ ಇತರ ಅವ್ಯವಹಾರಗಳಲ್ಲಿ ಭಾಗಿಯಾಗಿರುವ ಶಂಕೆ ಇದೆ. ಇತ್ತೀಚೆಗೆ ಶೃಂಗೇರಿಯಿಂದ ಚಿಕ್ಕಮಗಳೂರು ಕಂದಾಯ ಇಲಾಖೆಯ ಕೇಂದ್ರ ಸ್ಥಾನಕ್ಕೆ ವರ್ಗಾಯಿಸಿದ್ದು, ಅಲ್ಲಿಯೂ ಕೂಡ ಇವರ ಆಟಾಟೋಪ ಮುಂದುವರೆದಿದೆ.


    Provided by
    Provided by

    ಇಷ್ಟೆಲ್ಲ ಗಂಭೀರ ಆರೋಪಗಳಿದ್ದರೂ ತಹಸೀಲ್ದಾರರಾಗಲಿ, ಉಪವಿಭಾಗಾಧಿಕಾರಿಗಳಾಗಲಿ ಈತನ ಮೇಲೆ ಯಾವುದೇ ರೀತಿಯ ಕ್ರಮ ಜರುಗಿಸದೆ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ತಕ್ಷಣವೇ ಪ್ರಕಾಶ್ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.ಕಡತಗಳಿಲ್ಲದೆ ರೈತರು ಮತ್ತು ಕೃಷಿಕರಿಗೆ ಅರ್ಜಿ ರಿಜಿಸ್ಟರ್ ಆಧಾರದಲ್ಲಿ ಕಡತ ತಯಾರಿಸಲು ಸೂಕ್ತ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಈ ಬಗ್ಗೆ ಜನಜಾಗೃತಿ ಹೋರಾಟ ರೂಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಶೃಂಗೇರಿ ಕ್ಷೇತ್ರದ ಕಾರ್ಯಾಧ್ಯಕ್ಷನವೀನ್ ಕರುವಾನೆ, ಕೊಪ್ಪ ಪಟ್ಟಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಜಯ್‍ಕುಮಾರ್, ಕೊಪ್ಪ ಪಟ್ಟಣ ಪಂಚಾಯಿತಿ ಸದಸ್ಯ ರಶೀದ್ ಸೇರಿದಂತೆ ಹಲವು ಮುಖಂಡರು ಒತ್ತಾಯಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪುಸ್ತಕಗಳು ಬದುಕಿನ ಶೈಲಿಯಾಗಬೇಕು: ಪ್ರಾಂಶುಪಾಲ ರಮಾನಂದ

    January 28, 2026

    ಬಿ.ಮಟಕೆರೆ ಪಬ್ಲಿಕ್ ಶಾಲೆ ಸಿಡಿಸಿ ಅಧ್ಯಕ್ಷರ ಆಯ್ಕೆ ವಿವಾದ: ಶಾಸಕರ ವಿರುದ್ಧ ಪೋಷಕರ ಆಕ್ರೋಶ

    January 28, 2026

    ಬೀದರ್: ಹಂದಿಕೇರಾ ಸರ್ಕಾರಿ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವದ ಅದ್ಧೂರಿ ಆಚರಣೆ

    January 27, 2026

    Leave A Reply Cancel Reply

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್

    January 28, 2026

    ಕೊರಟಗೆರೆ: ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಕಾನೂನು ಪಾಲನೆ ಮಾಡಬೇಕೆಂದು ಎಂದು ಪೊಲೀಸ್ ಇಲಾಖೆಯ ಪಿಎಸ್‌ ಐ…

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಲೋಕಾಯುಕ್ತ ನೀಡಿದ್ದ ‘ಬಿ–ರಿಪೋರ್ಟ್’ ಅಂಗೀಕರಿಸಿದ ಕೋರ್ಟ್

    January 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.