ಚಿತ್ರದುರ್ಗ: ಶಿವರಾತ್ರಿಯ ಪ್ರಯುಕ್ತ ಜಿಲ್ಲೆಯ ಹಿರಿಯೂರು ನಗರದ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷವಾದ ಪೂಜೆ ನಡೆಯಿತು. ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ ಭಕ್ತರು ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮಹಾಶಿವರಾತ್ರಿಯ ವಿಶೇಷತೆಗಳೆಂದರೆ, ಈ ದಿನ ಮಹಾದೇವ ಶಿವನು ದೇವಿ ಪಾರ್ವತಿಯನ್ನು ವಿವಾಹವಾದರು ಎಂದು ಪೌರಾಣಿಕ ಕತೆಯಲ್ಲಿ ಹೇಳಲಾಗಿದೆ. ಶಿವರಾತ್ರಿಯ ದಿನ ಜಾಗರಣೆ ಇದ್ದು ಶಿವ-ಪಾರ್ವತಿಯನ್ನು ಪೂಜಿಸುವುದರಿಂದ ಬದುಕಿನ ಎಲ್ಲಾ ಕಷ್ಟಗಳು ದೂರಾಗುವುದು ಎನ್ನುವ ನಂಬಿಕೆಗಳಿವೆ.
ಶಿವರಾತ್ರಿ ದಿನದಂದು ಪತಿ-ಪತ್ನಿ ಇಬ್ಬರೂ ಜಾಗರಣೆ ಇದ್ದು ಶಿವನನ್ನು ಪೂಜಿಸಬೇಕು, ಅವನ ಮಂತ್ರಗಳನ್ನು ಪಠಿಸಬೇಕು ಎಂದು ಜನರು ನಂಬುತ್ತಾರೆ. ಶಿವರಾತ್ರಿಯ ದಿನ ಶಿವನ ದೇವಾಲಯಗಳಲ್ಲಿ ಭಕ್ತರು ಶಿವನ ದರ್ಶನ ಮಾಡಿ ಶಿವನ ಕೃಪೆಗೆ ಪಾತ್ರರಾಗುತ್ತಿದ್ದಾರೆ.
ಶಿವರಾತ್ರಿಯ ದಿನದಂದು ಶಿವನ ಮೂರ್ತಿ ಹಾಗೂ ಶಿವನ ಲಿಂಗವನ್ನು ಪೂಜಿಸಲಾಗುತ್ತದೆ. ಶಿವಲಿಂಗವು ಶಿವನ ಸಂಕೇತವಾಗಿದೆ. ಶಿವ ಎಂದರೆ ಕಲ್ಯಾಣ ಮತ್ತು ಲಿಂಗ ಎಂದರೆ ಸೃಷ್ಟಿ ಎಂದರ್ಥ. ಪೌರಾಣಿಕ ಗ್ರಂಥಗಳ ಪ್ರಕಾರ, ಭಗವಾನ್ ಶಿವನು ಭೂಮಿಯ ಮೇಲೆ ಜೀವನವನ್ನು ಪ್ರಚಾರ ಮಾಡಲು ಪ್ರಯತ್ನಿಸಿದನು. ಅದಕ್ಕಾಗಿಯೇ ಶಿವನನ್ನು ಆದಿದೇವ ಎಂದೂ ಕರೆಯಲಾಗುತ್ತದೆ.
ಮಹಾಶಿವರಾತ್ರಿಯ ಈ ಪವಿತ್ರ ಹಬ್ಬವನ್ನು ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿ ದಿನದಂದು ಆಚರಿಸಲಾಗುತ್ತದೆ. ಜೊತೆಗೆ ಭಗವಾನ್ ಭೋಲೆನಾಥನನ್ನು ಮಹಾಶಿವರಾತ್ರಿಯ ದಿನದಂದು ಪೂರ್ಣ ವಿಧಿವಿಧಾನಗಳೊಂದಿಗೆ ಪೂಜಿಸಲಾಗುತ್ತದೆ. ಈ ದಿನದಂದು ಮಹಾದೇವನ ಆರಾಧನೆ ಮಾಡುತ್ತಾ ಉಪವಾಸವನ್ನು ಮಾಡುವುದರಿಂದ ಅದೃಷ್ಟ ಮತ್ತು ಸಮೃದ್ಧಿಯನ್ನು ಲಭಿಸುತ್ತದೆ ಎಂದು ನಂಬಲಾಗುತ್ತದೆ.
ಹಿಂದೂಗಳಿಗೆ ಮಹಾಶಿವರಾತ್ರಿ ಬಹಳ ಮಹತ್ವವಾದ ಆಚರಣೆಯಾಗಿದೆ. ಶಿವರಾತ್ರಿಯ ದಿನದಂದು ಜಾಗರಣೆ ಇದ್ದು ಶಿವನನ್ನು ಪೂಜಿಸಲಾಗುವುದು. ಯಾರು ಶಿವರಾತ್ರಿಯಂದು ಉಪವಾಸವಿದ್ದು ಶಿವನ ಪೂಜೆ ಮಾಡುತ್ತಾರೋ ಅವರು ಶಿವನ ಕೃಪೆಗೆ ಪಾತ್ರರಾಗುತ್ತಾರೆ ಎಂಬುವುದು ಅವನ ಭಕ್ತರ ಅಚಲ ನಂಬಿಕೆಯಾಗಿದೆ.
ಹಿಂದೂ ಪಂಚಾಂಗದ ಪ್ರಕಾರ ಪ್ರತಿ ಮಾಸದ ಕೃಷ್ಣ ಚತುರ್ದಶಿ ದಿನವನ್ನು ಮಾಸ ಶಿವರಾತ್ರಿ ಆಚರಿಸಲಾಗುವುದು. ವರ್ಷದಲ್ಲಿ ಒಟ್ಟು 12 ಶಿವರಾತ್ರಿಗಳನ್ನು ಆಚರಿಸಲಾಗುವುದು. ಅವುಗಳಲ್ಲಿ ಮಹಾಶಿವರಾತ್ರಿ ತುಂಬಾ ದೊಡ್ಡ ಆಚರಣೆಯಾಗಿದೆ. ಸಾಮಾನ್ಯವಾಗಿ ಶಿವರಾತ್ರಿ ಫೆಬ್ರವರಿ – ಮಾರ್ಚ್ ತಿಂಗಳಿನಲ್ಲಿ ಬರುವುದು. ಈ ವರ್ಷ ಮಾರ್ಚ್ನಲ್ಲಿ ಬಂದಿದೆ. ಈ ದಿನ ಶಿವನನ್ನು ಶುಭ ಮುಹೂರ್ತದಲ್ಲಿ ಪೂಜಿಸುವುದರಿಂದ ಹೆಚ್ಚಿನ ಫಲ ದೊರೆಯುವುದು.
ಮಹಾಶಿವರಾತ್ರಿ ಮಹತ್ವ ಮಹಾಶಿವರಾತ್ರಿಯಂದು ಮಹಾದೇವ ಶಿವನು ದೇವಿ ಪಾರ್ವತಿಯನ್ನು ವಿವಾಹವಾದರು ಎಂದು ಪೌರಾಣಿಕ ಕತೆಯಲ್ಲಿ ಹೇಳಲಾಗಿದೆ. ಈ ದಿನ ಜಾಗರಣೆ ಇದ್ದು ಶಿವ-ಪಾರ್ವತಿಯನ್ನು ಪೂಜಿಸುವುದರಿಂದ ಬದುಕಿನ ಎಲ್ಲಾ ಕಷ್ಟಗಳು ದೂರಾಗುವುದು. ಈ ದಿನದಂದು ಪತಿ-ಪತ್ನಿ ಇಬ್ಬರೂ ಜಾಗರಣೆ ಇದ್ದು ಶಿವನನ್ನು ಪೂಜಿಸಬೇಕು, ಅವನ ಮಂತ್ರಗಳನ್ನು ಪಠಿಸಬೇಕು. ಆಗ ಶಿವನು ನಮ್ಮ ಬೇಡಿಕೆಗಳನ್ನು ಪೂರೈಸುತ್ತಾನೆ. ಜೀವನದಲ್ಲಿ ನೆಮ್ಮದಿ ಇರುವುದು, ಸಂತಾನ ಭಾಗ್ಯ ಉಂಟಾಗುವುದು ಎಂದು ಭಕ್ತರು ನಂಬಿಕೊಂಡು ಬಂದಿದ್ದಾರೆ.
ಕಳೆದ ರಾತ್ರಿ ಶಿವರಾತ್ರಿ ಪ್ರಯುಕ್ತ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಪ್ರಸಿದ್ದ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಹ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶಿವನಿಗೆ ವಿಶೇಷ ಪೂಜೆ ಅಲಂಕಾರ ಗಳು ಬಹಳ ವಿಜೃಂಭಣೆಯಿಂದ ನೆರವೇರಿಸಲ್ಪಟ್ಟಿತು. ದೇವಸ್ಥಾನದ ಆವರಣದ ಒಳಗಡೆ ಇರುವ ಕಾಳಿಕಾದೇವಿಗೂ ಸಹ ವಿಶೇಷ ಪೂಜೆ ಕಾರ್ಯಕ್ರಮ ಗಳು ಬಹಳ ವಿಜೃಂಭಣೆಯಿಂದ ನೆರವೇರಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಆಡಳಿತ ಅಧಿಕಾರಿಗಳು, ಹಾಗೂ ಕಂದಾಯ ಇಲಾಖೆಯ ಗ್ರಾಮಲೆಕ್ಕಾಧಿಕಾರಿಗಳಾದ ಮಾಯವರ್ಮ ಆರ್. ಹಾಗೂ ಕುಟುಂಬಸ್ಥರು, ಗ್ರಾಮಲೆಕ್ಕಾಧಿಕಾರಿಯಾದ ಮಂಜುನಾಥ್ ಹಾಗೂ ಕುಟುಂಬಸ್ಥರು, ಈ ಸಂದರ್ಭದಲ್ಲಿ ಭಾಗವಹಿಸಿದರು.
ಇದೇ ಸಂದರ್ಭದಲ್ಲಿ ಕಲಾಸಂಪದದಿಂದ ಸಣ್ಣಮಕ್ಕಳಿಗೆ ನೃತ್ಯ, ಸಂಗೀತ , ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು. ಈ ಕಾರ್ಯಕ್ರಮಕ್ಕೆ ಹಿರಿಯೂರು ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರು ಈ ಕಾರ್ಯಕ್ರಮಕ್ಕೆ ಭಾಗವಹಿಸಿ , ದೀಪವನ್ನು ಬೆಳಗುವುದರ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಶಿವಕುಮಾರ್ ವಿ. ಅವರು ಭಾಗವಹಿಸಿದರು.
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಪಾನಕ, ಅನ್ನಸಂತರ್ಪಣೆ, ಕಾರ್ಯಕ್ರಮಗಳು ಏರ್ಪಾಡಿಸಿದ್ದು ಬಹಳ ವಿಜೃಂಭಣೆಯಿಂದ ನೆರವೇರಿತು.
ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ – ದಾವಣಗೆರೆ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB