ತುಮಕೂರು: ಜಿಲ್ಲೆ ತಿಪಟೂರು ನಗರದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಸದಸ್ಯ ಬನಶಂಕರಿ ನಗರ ನಾರಾಯಣರಾಜು ವಿಧಿವಶರಾದ ಹಿನ್ನೆಲೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟ ಕರ್ನಾಟಕ ಮಾದಿಗ ದಂಡೋರ ಸಮಿತಿಯಿಂದ ಭಾವಪೂರ್ಣಶ್ರದ್ಧಾಂಜಲಿ ಅರ್ಪಿಸಲಾಯಿತು .
ನಾರಾಯಣರಾಜು ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ದಲಿತ ಮುಖಂಡರು ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಜಿಲ್ಲಾಪಂಚಾಯ್ತಿ ಸದಸ್ಯ ಕೊಪ್ಪ ಶಾಂತಪ್ಪ ಬನಶಂಕರಿ ನಗರ, ನಾರಾಯಣರಾಜು ರವರು ನ್ಯಾಯಾಂಗ ಇಲಾಖೆಯ ನೌಕರರಾಗಿ ವೃತ್ತಿ ನಿರ್ವಹಿಸುವ ಜೊತೆಗೆ, ಸದಾ ಶೋಷಣೆ, ಅಸಮಾನತೆಯಿಂದ, ನೊಂದು ಬೆಂದ ಜನರಿಗೆ , ನೆರವು ನೀಡುವ ಕೆಲಸ ಮಾಡಿದವರಾಗಿದ್ದಾರೆ. ಅಲ್ಲದೇ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಸದಸ್ಯರಾಗಿ ಪ್ರೊಫೆಸರ್ ಬಿ.ಕೃಷ್ಣಪ್ಪ ನವರ ಆತ್ಮೀಯ ಒಡನಾಡಿಯಾಗಿದ ಎಂದು ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ದಲಿತಪರಚಳುವಳಿ ಕಟ್ಟುವ ನಿಟ್ಟಿನಲ್ಲಿ ಅನೇಕ ನಾಯಕರಿಗೆ ಮಾರ್ಗದರ್ಶಕರಾಗಿ, ಗ್ರಾಮೀಣ ಭಾಗದ ಬಡವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ನೊಂದವರ ಬಾಳಿನಲ್ಲಿ ಬೆಳಕಾಗಿದ್ದಾರೆ. ಅವರ ನಿಧನ ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಿ.ಎಸ್.ಎಸ್. ಮುಖಂಡ ಕುಪ್ಪಾಳು ರಂಗಸ್ವಾಮಿ, ಜಿಲ್ಲಾ ಸಂಘಟನಾ ಸಂಚಾಲಕ ನಾಗ್ತಿಹಳ್ಳಿ ಕೃಷ್ಣಮೂರ್ತಿ, ಹರೀಶ್ ಗೌಡ, ತಾಲ್ಲೂಕು ಸಂಚಾಲಕ ಲಿಂಗದೇವರು ಟಿ.ಕೆ ಕುಮಾರ್, ಗಾಂಧಿನಗರ ಬಸವರಾಜು, ಜಗದಾರ್ಯಸ್ವಾಮಿ, ನಗರಾಧ್ಯಕ್ಷ ರಮೇಶ್ ಮಾರನಗೆರೆ, ತಿಮ್ಮಯ್ಯ ಸೇರಿದಂತೆ ಅನೇಕರು ಉಪಸ್ಥಿತರಿದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA